ಆ್ಯಪ್ನಗರ

ನಂದಿತಾ ನಿಗೂಢ ಸಾವು ಪ್ರಕರಣ

ನಂದಿತಾ ನಿಗೂಢ ಸಾವು ಪ್ರಕರಣದ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಎನ್‌ಎಸ್‌ಯು ಜಿಲ್ಲಾಸಂಘಟನೆಯು ಜಿಲ್ಲಾಧಿಕಾರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿತು.

Vijaya Karnataka 23 Jun 2020, 5:00 am
ಶಿವಮೊಗ್ಗ: ನಂದಿತಾ ನಿಗೂಢ ಸಾವು ಪ್ರಕರಣದ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಎನ್‌ಎಸ್‌ಯು ಜಿಲ್ಲಾಸಂಘಟನೆಯು ಜಿಲ್ಲಾಧಿಕಾರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿತು.
Vijaya Karnataka Web 22SMG NANIDTA_15
ಶಿವಮೊಗ್ಗದ ಡಿಸಿ ಕಚೇರಿ ಮುಂದೆ ನಂದಿತಾ ನಿಗೂಢ ಸಾವು ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಎನ್‌ಎಸ್‌ಯುಐನಿಂದ ಸೋಮವಾರ ಪ್ರತಿಭಟನೆ ಮಾಡಲಾಯಿತು.


2014ರ ಅಕ್ಟೋಬರ್‌ 31ರಂದು ತೀರ್ಥಹಳ್ಳಿ ತಾಲೂಕು ಬಾಳೆಬೈಲು ಗ್ರಾಮದ 9ನೇ ತರಗತಿ ವಿದ್ಯಾರ್ಥಿನಿ ನಂದಿತಾ ನಿಗೂಢವಾಗಿ ಸಾವನ್ನಪ್ಪಿದ್ದಳು. ರಾಜ್ಯಾದ್ಯಂತ ವಿದ್ಯಾರ್ಥಿನಿ ಸಾವಿನ ವಿಷಯ ಸಂಚಲನ ಉಂಟು ಮಾಡಿತ್ತು. 2014 ಅಕ್ಟೋಬರ್‌ 29ರಂದು ತನ್ನ ಶಾಲೆಗೆ ತೆರಳಿದ್ದ ನಂದಿತಾ, ಅದೇ ದಿನ ಮಧ್ಯಾಹ್ನದ ವೇಳೆ ತೀರ್ಥಹಳ್ಳಿಯಿಂದ 1.5 ಕಿ.ಮೀ. ದೂರದ ಆನಂದಗಿರಿ ಗುಡ್ಡದ ಸಮೀಪ ಒಂಟಿಯಾಗಿ ಪತ್ತೆಯಾಗಿದ್ದರು. ವಿದ್ಯಾರ್ಥಿನಿ ಮರುದಿನ ಅಸ್ವಸ್ಥಳಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ, ನಂತರ ಉಡುಪಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಳು. ಚಿಕಿತ್ಸೆಗೆ ಸ್ಪಂದಿಸದೇ ಅಕ್ಟೋಬರ್‌ 31ರಂದು ಮೃತಪಟ್ಟಿದ್ದಳು.

ನಂದಿತಾ ಮನೆಗೆ ಈಗಿನ ಸಚಿವ ಕೋಟ ಶ್ರೀನಿವಾಸ್‌ ಪೂಜಾರಿ, ಕೇಂದ್ರ ಸಚಿವ ಅಮಿತ್‌ ಶಾ ಭೇಟಿ ನೀಡಿದ್ದರು. ಸಾವಿನ ತನಿಖೆ ನಡೆಸುವ ಭರವಸೆ ನೀಡಿದ್ದರು. ಶಾಸಕ ಆರಗ ಜ್ಞಾನೇಂದ್ರ ಅವರೂ ಸಿಬಿಐ ತನಿಖೆಗೆ ಒತ್ತಾಯಿಸಿದ್ದರು. ಆದರೆ, ಇದುವರೆಗೆ ಪ್ರಕರಣವನ್ನು ಸಿಬಿಐಗೆ ವಹಿಸಿಲ್ಲ. ಕೂಡಲೇ ರಾಜ್ಯ ಸರಕಾರ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಪ್ರಕಟಣೆಯಲ್ಲಿತಿಳಿಸಿದ್ದಾರೆ. ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಕೆ.ಚೇತನ್‌, ಜಿಲ್ಲಾಧ್ಯಕ್ಷ ಎಚ್‌.ಎಸ್‌.ಬಾಲಾಜಿ, ಕಾರ್ಯಾಧ್ಯಕ್ಷ ವಿನಯ್‌, ನಗರಾಧ್ಯಕ್ಷ ವಿಜಯ್‌, ಗ್ರಾಮಾಂತರ ಅಧ್ಯಕ್ಷ ರವಿ, ಅಬ್ದುಲ್‌, ಗಿರೀಶ್‌, ಶಿವು, ಭರತ್‌, ಸಂದೀಪ್‌, ಪ್ರಮೋದ್‌, ಆಕಾಶ್‌, ಮಂಜು ಪುರಲೆ, ಪ್ರಮೋದ್‌, ಪ್ರಜ್ವಲ್‌, ಶಿವು, ಅಭಿ, ನರಸಿಂಹ ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ