ಆ್ಯಪ್ನಗರ

ಜಾತಿ ವ್ಯವಸ್ಥೆ ದೇಶಕ್ಕೆ ಅಂಟಿದ ಶಾಪ

ಜಾತಿ ವ್ಯವಸ್ಥೆ ದೇಶಕ್ಕೆ ಅಂಟಿದ ಶಾಪವಾಗಿದ್ದು, ಸಮಾಜದಲ್ಲಿ ಎಲ್ಲಿಯವರೆಗೆ ಅಸಾಮಾನತೆ, ಮೇಲು ಕೀಳು, ಭೇದಭಾವ ಹೋಗುವುದಿಲ್ಲವೋ ಅಲ್ಲಿಯವರೆಗೆ ಬುದ್ಧ, ಬಸವ, ಗಾಂಧಿಧಿ, ಅಂಬೇಡ್ಕರ್‌ ಚಿಂತನೆಗಳು ಪ್ರಸ್ತುತವಾಗುತ್ತವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಧಿಕಾರದ ಅಧ್ಯಕ್ಷ ಪ್ರೊ.ಎಸ್‌.ಜಿ.ಸಿದ್ದರಾಮಯ್ಯ ಹೇಳಿದರು.

Vijaya Karnataka 8 Jun 2019, 5:00 am
ಶಿವಮೊಗ್ಗ : ಜಾತಿ ವ್ಯವಸ್ಥೆ ದೇಶಕ್ಕೆ ಅಂಟಿದ ಶಾಪವಾಗಿದ್ದು, ಸಮಾಜದಲ್ಲಿ ಎಲ್ಲಿಯವರೆಗೆ ಅಸಾಮಾನತೆ, ಮೇಲು ಕೀಳು, ಭೇದಭಾವ ಹೋಗುವುದಿಲ್ಲವೋ ಅಲ್ಲಿಯವರೆಗೆ ಬುದ್ಧ, ಬಸವ, ಗಾಂಧಿಧಿ, ಅಂಬೇಡ್ಕರ್‌ ಚಿಂತನೆಗಳು ಪ್ರಸ್ತುತವಾಗುತ್ತವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಧಿಕಾರದ ಅಧ್ಯಕ್ಷ ಪ್ರೊ.ಎಸ್‌.ಜಿ.ಸಿದ್ದರಾಮಯ್ಯ ಹೇಳಿದರು.
Vijaya Karnataka Web SMG-0706-2-15-7GANESH6


ನಗರದ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಶುಕ್ರವಾರ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಬುದ್ಧ, ಬಸವ, ಗಾಂಧಿಧಿ, ಅಂಬೇಡ್ಕರ್‌ ಚಿಂತನೆಗಳ ವರ್ತಮಾನದ ಬಿಕ್ಕಟ್ಟುಗಳ ಕುರಿತು ವಿಚಾರ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಚಾತುರ್ವರ್ಣ ಪದ್ಧತಿ ಸಮಾಜವನ್ನು ಒಗ್ಗೂಡಿಸುವ ಬದಲು ಛಿದ್ರ ಮಾಡಿದೆ. ದೇಶದ ಸಂಸ್ಕೃತಿ, ಪರಂಪರೆ ಎಲ್ಲ ಧರ್ಮದ ಭಾಷೆಗಳನ್ನು ಒಪ್ಪಿಕೊಂಡಿದ್ದೇವೆ. ಸಮಾನತೆಗೆ ಮಾರಕವಾಗಿರುವ ಜಾತಿ ವ್ಯವಸ್ಥೆಯ ನಿರ್ಮೂಲನೆಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದರು.

ದೇಶದಲ್ಲಿ ಸಾವಿರಾರು ವರ್ಷದಿಂದ ನಡೆಯುತ್ತಿದ್ದ ಶೋಷಣೆಯ ನಿರ್ಮೂಲನೆಗೆ ಹಾಗೂ ಶೋಷಿತರ ನೋವಿನ ಕೂಗಿನಿಂದ ಅಂಬೇಡ್ಕರ್‌ ಜನಿಸಿದರು. ಶೋಷಿತರಿಗೆ ಆಶಾಕಿರಣವಾದರು. ಹೊಸ ಸಮಾಜ ನಿರ್ಮಾಣಕ್ಕೆ ಶ್ರಮಿಸಿದರು. ಅಂಬೇಡ್ಕರ್‌ ಮತ್ತು ಮಹಾತ್ಮ ಗಾಂಧಿ ಜಗತ್ತಿನ ಪ್ರಭಾವಿ ವ್ಯಕ್ತಿಗಳು. ಇವರ ನಡುವೆ ವೈಚಾರಿಕ ವಾಗಿ ಹಲವು ಭಿನ್ನಾಭಿಪ್ರಾಯಗಳಿದ್ದರೂ ಅವು ಪರಸ್ಪರ ಪೂರಕವಾಗಿವೆ ಎಂದರು.

ಜಾತಿ ವ್ಯವಸ್ಥೆ ವಿರುದ್ಧ ಬುದ್ಧ, ಬಸವ, ಗಾಂಧಿಧಿ ಅಂಬೇಡ್ಕರ್‌ ಹೋರಾಟ ಮಾಡಿದ್ದಾರೆ. ಇವರುಗಳೆಲ್ಲರೂ ಸಶಕ್ತ ರೀತಿಯಲ್ಲಿ ಹೋರಾಟವನ್ನು ಮೂಡಿಸಿದರು. 45 ವರ್ಷಗಳ ಕಾಲ ಬುದ್ಧ ಹೋರಾಟ ಮಾಡಿದ. ಆದರೆ, ಬೌದ್ಧ ಧರ್ಮವನ್ನು ದೇಶದಿಂದ ಹೊರಗೆ ಹಾಕಲಾಯಿತು ಎಂದರು.

ಬಸವಣ್ಣ ಜಾತಿ ವ್ಯವಸ್ಥೆ ವಿರುದ್ಧ ಕಡೇವರೆಗೂ ಹೋರಾಟ ನಡೆಸಿದರು. ಅವರ ಹೋರಾಟದ ಪರಿಣಾಮವಾಗಿ ಸಮಾಜದಲ್ಲಿ ಸಾಮಾಜಿಕ ಪರಿವರ್ತನೆಯಾಯಿತು. ಅಕ್ಷ ರವನ್ನು ಪಡೆಯಲು ಸಾಧ್ಯವಿಲ್ಲದ ವರ್ಗದಲ್ಲಿ ಅಂಬೇಡ್ಕರ್‌ ಜನಿಸಿ, ವಿಶ್ವದ ಮಹಾನ್‌ ಜ್ಞಾನಿಯಾದರು. ದೇಶದ ವರ್ಣ ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತಿದರು ಎಂದರು.

ಕಾರ್ಯಕ್ರಮದಲ್ಲಿ ಸಾಹಿತಿಗಳಾದ ಡಾ.ಸಣ್ಣರಾಮ, ಡಾ.ಪ್ರಶಾಂತ್‌ ಬಿ.ನಾಯಕ, ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಸ್‌.ಎನ್‌.ನಾಗರಾಜ್‌, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿ ವೇದಿಕೆ ಅಧ್ಯಕ್ಷ ಡಿ. ಮಂಜುನಾಥ್‌ ಮತ್ತಿತರರು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ