ಆ್ಯಪ್ನಗರ

ರಾಷ್ಟ್ರಧ್ವಜ ಗೌರವದ ಸಂಕೇತ

ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ರಾಷ್ಟ್ರಧ್ವಜಕ್ಕೆ ಆಗುವ ಅಪಮಾನ ತಡೆಗಟ್ಟಬೇಕು ಹಾಗೂ ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಚಿಹ್ನೆಯ ಕುರಿತು ಜಾಗೃತಿ ಮೂಡಿಸಬೇಕೆಂದು ಒತ್ತಾಯಿಸಿ ಗುರುವಾರ ಹಿಂದೂ ಜನಜಾಗೃತಿ ಸಮಿತಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಲಾಯಿತು.

Vijaya Karnataka 3 Aug 2019, 5:00 am
ಸಾಗರ: ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ರಾಷ್ಟ್ರಧ್ವಜಕ್ಕೆ ಆಗುವ ಅಪಮಾನ ತಡೆಗಟ್ಟಬೇಕು ಹಾಗೂ ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಚಿಹ್ನೆಯ ಕುರಿತು ಜಾಗೃತಿ ಮೂಡಿಸಬೇಕೆಂದು ಒತ್ತಾಯಿಸಿ ಗುರುವಾರ ಹಿಂದೂ ಜನಜಾಗೃತಿ ಸಮಿತಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಲಾಯಿತು.
Vijaya Karnataka Web SMR-01SGR6


ರಾಷ್ಟ್ರಧ್ವಜ ರಾಷ್ಟ್ರ ಗೌರವದ ಸಂಕೇತ. ಆದರೆ, ಇತ್ತೀಚಿನ ವರ್ಷಗಳಲ್ಲಿ ಭಾರತೀಯರಿಗೆ ರಾಷ್ಟ್ರಧ್ವಜದ ಮಹತ್ವ ಅರ್ಥವಾಗುತ್ತಿಲ್ಲ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ರಾಷ್ಟ್ರೀಯ ಹಬ್ಬದ ಸಂದರ್ಭ ಪ್ಲಾಸ್ಟಿಕ್‌ ಮತ್ತು ಕಾಗದದಿಂದ ತಯಾರಿಸಿದ ರಾಷ್ಟ್ರಧ್ವಜದ ಬಳಕೆ ಹೆಚ್ಚುತ್ತಿದೆ ಎಂದು ದೂರಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ಪ್ಲಾಸ್ಟಿಕ್‌ ಮತ್ತು ಕಾಗದದಿಂದ ತಯಾರಿಸಿದ ರಾಷ್ಟ್ರಧ್ವಜ ತಯಾರಿಕೆ ಮತ್ತು ಮಾರಾಟವನ್ನು ನಿಷೇಧಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಸಮಿತಿಯ ಶಾಂತಾ, ಶೈಲ, ಲಕ್ಷ್ಮೀ, ಕೆ.ಎಚ್‌.ಸುದರ್ಶನ್‌, ಕೆ.ವಿ.ಪ್ರವೀಣ, ರಾಜು ಬಿ. ಮಡಿವಾಳ, ಕುಮಾರ್‌, ಶ್ರೀಧರ ಸಾಗರ್‌ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ