ಆ್ಯಪ್ನಗರ

ಮಳೆಗಾಲದಲ್ಲಿ ರಸ್ತೆ, ಚರಂಡಿ ಕಾಮಗಾರಿ ಬೇಡ

ಮಳೆಗಾಲದಲ್ಲಿ ನಡೆಸುತ್ತಿರುವ ರಸ್ತೆ, ಚರಂಡಿ ಕಾಮಗಾರಿ ನಿಲ್ಲಿಸುವಂತೆ ಆಗ್ರಹಿಸಿ ಸೋಮವಾರ ಅಣ್ಣಾಹಜಾರೆ ಹೋರಾಟ ಸಮಿತಿ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

Vijaya Karnataka 16 Jul 2019, 5:00 am
ಶಿವಮೊಗ್ಗ: ಮಳೆಗಾಲದಲ್ಲಿ ನಡೆಸುತ್ತಿರುವ ರಸ್ತೆ, ಚರಂಡಿ ಕಾಮಗಾರಿ ನಿಲ್ಲಿಸುವಂತೆ ಆಗ್ರಹಿಸಿ ಸೋಮವಾರ ಅಣ್ಣಾಹಜಾರೆ ಹೋರಾಟ ಸಮಿತಿ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
Vijaya Karnataka Web SMR-15GANESH3


ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಬಿಡಿ ವಲಯದ ಕೆಲ ವಾರ್ಡ್‌ಗಳಲ್ಲಿ ಸ್ಮಾರ್ಟ್‌ಸಿಟಿ ವತಿಯಿಂದ ಕಾಮಗಾರಿ ಆರಂಭಿಸಲಾಗಿದೆ. ಮಳೆಗಾಲದಲ್ಲಿ ಕಾಮಗಾರಿ ಮಾಡುವುದರಿಂದ ಗುಣಮಟ್ಟದ ಕಾಮಗಾರಿ ಕೊಡಲು ಸಾಧ್ಯವಿಲ್ಲ ಎಂಬ ಸಾಮಾನ್ಯ ಜ್ಞಾನವೂ ಎಂಜಿನಿಯರ್‌ಗಳಿಗೆ ಇಲ್ಲ ಎಂದು ಟೀಕಿಸಿದರು.

ಮಳೆಗಾಲದಲ್ಲಿ ನಡೆಯುತ್ತಿರುವ ಕಾಮಗಾರಿ ಪರಿಶೀಲಿಸಿದಾಗ ಮಳೆ ನೀರಿಗೆ ಸಿಮೆಂಟ್‌ ಕೊಚ್ಚಿಹೋಗಿದೆ. ಅಲ್ಲಲ್ಲಿ ಕಿತ್ತು ಬರುತ್ತಿದೆ. ಇಂತಹ ಅವೈಜ್ಞಾನಿಕ ಕಾಮಗಾರಿ ಕೂಡಲೇ ಸ್ಥಗಿತಗೊಳಿಸಿ ಮಳೆಗಾಲ ಮುಗಿದ ನಂತರ ಈ ಕಾಮಗಾರಿ ನಡೆಸಬೇಕೆಂದು ಆಗ್ರಹಿಸಿದರು. ಈ ಸಂದರ್ಭ ಸಮಿತಿ ಪ್ರಮುಖರಾದ ಟಿ.ಎಂ.ಅಶೋಕ್‌ ಯಾದವ್‌, ಕೆ.ಟಿ.ಗಂಗಾಧರ್‌, ಶೇಖರ್‌ ಗೌಳೇರ್‌, ಸತೀಶ್‌ ಕುಮಾರ್‌ಶೆಟ್ಟಿ, ಅಶ್ವಥ್‌ ನಾರಾಯಣ್‌, ಬಾಬು ಮತ್ತಿತರರು ಹಾಜರಿದ್ದರು.

-------

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ