ಆ್ಯಪ್ನಗರ

ಲೋಪರಹಿತ ಕರ್ತವ್ಯ ನಿರ್ವಹಣೆಗೆ ಸೂಚನೆ

ನಗರದ ಜಿಲ್ಲಾಮೆಗ್ಗಾನ್‌ ಆಸ್ಪತ್ರೆ ಸಂಬಂಧ ಸಾರ್ವಜನಿಕರಿಂದ ನಿರಂತರ ದೂರುಗಳು ಕೇಳಿಬರುತ್ತಿದ್ದು, ಲೋಪವಿಲ್ಲದೇ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಕೆಬಿ...

Vijaya Karnataka 5 Sep 2019, 5:00 am
ಶಿವಮೊಗ್ಗ: ನಗರದ ಜಿಲ್ಲಾಮೆಗ್ಗಾನ್‌ ಆಸ್ಪತ್ರೆ ಸಂಬಂಧ ಸಾರ್ವಜನಿಕರಿಂದ ನಿರಂತರ ದೂರುಗಳು ಕೇಳಿಬರುತ್ತಿದ್ದು, ಲೋಪವಿಲ್ಲದೇ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
Vijaya Karnataka Web notice for non corruption duty management
ಲೋಪರಹಿತ ಕರ್ತವ್ಯ ನಿರ್ವಹಣೆಗೆ ಸೂಚನೆ


ಆಸ್ಪತ್ರೆಯಲ್ಲಿನ ಸೌಲಭ್ಯಗಳನ್ನು ಪರಿಶೀಲಿಸಿದ ಬಳಿಕ ವೈದ್ಯರು ಹಾಗೂ ಸಾರ್ವಜನಿಕರೊಂದಿಗೆ ಚರ್ಚೆ ನಡೆಸಿದರು. ಆಸ್ಪತ್ರೆ ಹಾಗೂ ಇಲ್ಲಿಯ ವೈದ್ಯರ ಬಗ್ಗೆ ನಿತ್ಯ ಒಂದಿಲ್ಲೊಂದು ದೂರುಗಳು ಬರುತ್ತಿವೆ. ವೈದ್ಯರು ಹಾಗೂ ಆಡಳಿತ ನಡುವೆ ಸಮನ್ವಯದ ಕೊರತೆ ಕಾಣಿಸುತ್ತಿದೆ ಎಂದು ಹೇಳಿದರು.

ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವ ಉದ್ದೇಶದಿಂದ ಸರಕಾರಿ ಆಸ್ಪತ್ರೆಗಳಿದ್ದು, ಆರೋಗ್ಯ ಸೇವೆ ಪಡೆಯುವುದಕ್ಕಾಗಿ ಬರುವವರೊಂದಿಗೆ ಸರಿಯಾಗಿ ನಡೆದುಕೊಳ್ಳಬೇಕು. ಪ್ರತಿಯೊಬ್ಬ ಸಿಬ್ಬಂದಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಇನ್ಮುಂದೆಯಾದರೂ ದೂರುಗಳು ಬಾರದಂತೆ ಕೆಲಸ ಮಾಡಬೇಕು ಎಂದು ವೈದ್ಯಾಧಿಕಾರಿಗಳಿಗೆ ತಾಕೀತು ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ