ಆ್ಯಪ್ನಗರ

ಎಂಎಲ್‌ಸಿ ಕಚೇರಿ ಉದ್ಘಾಟನೆ

ಶಿವಮೊಗ್ಗ ಉಪ ವಿಭಾಗಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ವಿಧಾನ ಪರಿಷತ್‌ ಸದಸ್ಯ ಎಸ್‌.ರುದ್ರೇಗೌಡ ಅವರ ಕಚೇರಿಯನ್ನು ಗುರುವಾರ ಉದ್ಘಾಟಿಸಲಾಯಿತು.

Vijaya Karnataka 28 Jun 2019, 5:00 am
ಶಿವಮೊಗ್ಗ: ಶಿವಮೊಗ್ಗ ಉಪ ವಿಭಾಗಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ವಿಧಾನ ಪರಿಷತ್‌ ಸದಸ್ಯ ಎಸ್‌.ರುದ್ರೇಗೌಡ ಅವರ ಕಚೇರಿಯನ್ನು ಗುರುವಾರ ಉದ್ಘಾಟಿಸಲಾಯಿತು.
Vijaya Karnataka Web 27SMG4-1


ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಮತ್ತಿತರರು ಕಚೇರಿ ಉದ್ಘಾಟನೆ ಸಂದರ್ಭದಲ್ಲಿ ಹಾಜರಿದ್ದು ಶುಭಕೋರಿದರು. ಈ ಸಂದರ್ಭ ಮಾತನಾಡಿದ ರುದ್ರೇಗೌಡರು, ಕಳೆದ ಒಂದು ವರ್ಷದಿಂದ ಮನೆಯಲ್ಲೇ ಸಾರ್ವಜನಿಕರ ಅಹವಾಲನ್ನು ಸ್ವೀಕರಿಸುತ್ತಿದ್ದೆ. ಬಿಜೆಪಿ ಜಿಲ್ಲಾಧ್ಯಕ್ಷ ಸಹ ಆಗಿರುವುದರಿಂದ ಪಕ್ಷದ ಜಿಲ್ಲಾ ಕಚೇರಿಯಲ್ಲೂ ಅಹವಾಲು ಸ್ವೀಕರಿಸಲಾಗುತ್ತಿತ್ತು. ಜಿಲ್ಲಾಡಳಿತವು ಈಗ ಹೊಸ ಕಚೇರಿ ಒದಗಿಸಿದೆ. ಇನ್ನು ಮುಂದೆ ಸಾರ್ವಜನಿಕರು ಕಚೇರಿಗೆ ಆಗಮಿಸಿ ತಮ್ಮ ಸಮಸ್ಯೆ ಅಹವಾಲುಗಳನ್ನು ಸಲ್ಲಿಸಬಹುದು ಎಂದರು.

ಪಕ್ಷದ ಪ್ರಮುಖರಾದ ಎಸ್‌.ಎಸ್‌.ಜ್ಯೋತಿ ಪ್ರಕಾಶ್‌, ಎನ್‌.ಜೆ.ರಾಜಶೇಖರ್‌, ಡಿ.ಎಸ್‌.ಅರುಣ್‌, ಪುರುಷೋತ್ತಮ್‌ ಮತ್ತು ಪಕ್ಷದ ಕಾರ್ಯಕರ್ತರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ