ಆ್ಯಪ್ನಗರ

ನಾವ್‌ ಆಪರೇಷನ್‌ ಕಮಲಕ್ಕೆ ಕೈಹಾಕಲ್ಲ

'ನಾವು ಯಾವುದೇ ಕಾರಣಕ್ಕೂ ಆಪರೇಷನ್‌ ಕಮಲಕ್ಕೆ ಕೈಹಾಕುವುದಿಲ್ಲ. ಕಾಂಗ್ರೆಸ್‌, ಜೆಡಿಎಸ್‌ ಶಾಸಕರಲ್ಲಿರುವ ಅಸಮಾಧಾನವೇ ಸರಕಾರವನ್ನು ಬೀಳಿಸಲಿದೆ' ಎಂದು ಶಾಸಕ ಕೆ.ಎಸ್‌. ಈಶ್ವರಪ್ಪ ಪುರುಚ್ಛಸಿದರು.

Vijaya Karnataka 25 Dec 2018, 5:00 am
Vijaya Karnataka Web SMR-24sgr13
ಶಿವಮೊಗ್ಗ : 'ನಾವು ಯಾವುದೇ ಕಾರಣಕ್ಕೂ ಆಪರೇಷನ್‌ ಕಮಲಕ್ಕೆ ಕೈಹಾಕುವುದಿಲ್ಲ. ಕಾಂಗ್ರೆಸ್‌, ಜೆಡಿಎಸ್‌ ಶಾಸಕರಲ್ಲಿರುವ ಅಸಮಾಧಾನವೇ ಸರಕಾರವನ್ನು ಬೀಳಿಸಲಿದೆ' ಎಂದು ಶಾಸಕ ಕೆ.ಎಸ್‌. ಈಶ್ವರಪ್ಪ ಪುರುಚ್ಛಸಿದರು.

ಬೊಮ್ಮನಕಟ್ಟೆ ಬಡಾವಣೆಯಲ್ಲಿ ಸೇತುವೆ ಉದ್ಘಾಟನೆ ಹಾಗೂ 75 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಸೋಮವಾರ ಚಾಲನೆ ನೀಡಿ ಮಾತನಾಡಿದ ಅವರು, ಶಿವಮೊಗ್ಗದ ನಗರದ ಅಭಿವೃದ್ಧಿಗೆ ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.

ನಗರದ ಪ್ರಗತಿ ಸೇರಿದಂತೆ ಸೌಲಭ್ಯಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಬಿಜೆಪಿ ಮೊದಲ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದರು.

ಗೋಪಾಲಗೌಡ ಬಡಾವಣೆಯಲ್ಲಿ ವಾರ್ಡ್‌ ನಂ. 17ರ ವಿವಿಧ ರಸ್ತೆಗಳ ಕಾಂಕ್ರಿಟೀಕರಣ ಕಾಮಗಾರಿಗೆ ಈಶ್ವರಪ್ಪ ಭೂಮಿ ಪೂಜೆ ನೆರವೇರಿಸಿದರು.

ಮೇಯರ್‌ ಲತಾ ಗಣೇಶ್‌, ಉಪ ಮೇಯರ್‌ ಎಸ್‌.ಎನ್‌. ಚನ್ನಬಸಪ್ಪ, ಪಾಲಿಕೆ ಸದಸ್ಯ ಜ್ಞಾನೇಶ್ವರ್‌, ವಿಶ್ವಾಸ್‌,ಧೀರರಾಜ್‌ ಹೊನ್ನವಿಲೆ, ನಾಗರಾಜ್‌ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ