ಆ್ಯಪ್ನಗರ

ಪರಿಶಿಷ್ಟರ ಒಕ್ಕಲೆಬ್ಬಿಸುವಿಕೆಗೆ ವಿರೋಧ

ತಾಲೂಕಿನ ಮಾರಶೆಟ್ಟಿಹಳ್ಳಿ ಗ್ರಾಪಂ ವ್ಯಾಪ್ತಿಯ ತಟ್ಟೆಹಳ್ಳಿ ಸುತ್ತಮುತ್ತಲಿನ 18 ಕೆರೆಗಳ ಪೈಕಿ 10 ಕೆರೆಗಳಲ್ಲಿ ಸುಮಾರು 20 ಪರಿಶಿಷ್ಟ ಕುಟುಂಬಗಳು ಹಲವಾರು ವರ್ಷಗಳಿಂದ ಕೆರೆಗಳನ್ನು ಅಭಿವೃದ್ಧಿಪಡಿಸಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಇವರನ್ನು ತಾಲೂಕು ಆಡಳಿತ ಒಕ್ಕಲೆಬ್ಬಿಸದಂತೆ ದಸಂಸ ಸೋಮವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿತು.

Vijaya Karnataka 2 Jul 2019, 6:39 pm
ಭದ್ರಾವತಿ: ತಾಲೂಕಿನ ಮಾರಶೆಟ್ಟಿಹಳ್ಳಿ ಗ್ರಾಪಂ ವ್ಯಾಪ್ತಿಯ ತಟ್ಟೆಹಳ್ಳಿ ಸುತ್ತಮುತ್ತಲಿನ 18 ಕೆರೆಗಳ ಪೈಕಿ 10 ಕೆರೆಗಳಲ್ಲಿ ಸುಮಾರು 20 ಪರಿಶಿಷ್ಟ ಕುಟುಂಬಗಳು ಹಲವಾರು ವರ್ಷಗಳಿಂದ ಕೆರೆಗಳನ್ನು ಅಭಿವೃದ್ಧಿಪಡಿಸಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಇವರನ್ನು ತಾಲೂಕು ಆಡಳಿತ ಒಕ್ಕಲೆಬ್ಬಿಸದಂತೆ ದಸಂಸ ಸೋಮವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿತು.
Vijaya Karnataka Web SMR-1BDVT1


ಪ್ರತಿಭಟನೆ ನೇತೃತ್ವ ವಹಿಸಿದ್ದ ದಸಂಸ ಜಿಲ್ಲಾ ಸಂಚಾಲಕ ಚಿನ್ನಯ್ಯ ಮಾತನಾಡಿ, ತಟ್ಟೆಹಳ್ಳಿ ಸುತ್ತಮುತ್ತ 18ಕ್ಕೂ ಹೆಚ್ಚು ಕೆರೆಗಳಿವೆ. ಇವುಗಳಲ್ಲಿ ಮೇಲ್ವರ್ಗದ ಬಲಾಢ್ಯರು ಅರಕೆ, ತೆಂಗು ಮುಂತಾದ ಬೆಳೆ ಬೆಳೆದು ತೋಟ ನಿರ್ಮಿಸಿಕೊಂಡಿದ್ದಾರೆ. ಪರಿಶಿಷ್ಟ ಕುಟುಂಬಗಳು ಕೇವಲ 20 ಗುಂಟೆ ಅಥವಾ 10 ಗುಂಟೆ ಜಾಗದಲ್ಲಿ ಭತ್ತ, ರಾಗಿ ಹಾಗೂ ಜೋಳ ಬೆಳೆದು ಅನೇಕ ವರ್ಷಗಳಿಂದ ಜೀವನ ಸಾಗಿಸುತ್ತಿದ್ದಾರೆ. ಇವರನ್ನು ಒಕ್ಕಲೆಬ್ಬಿಸಬಾರದೆಂದು ಒತ್ತಾಯಿಸಿದರು.

2010-11ರಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 3 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಿರುವ ದಾಸನಕಟ್ಟೆ ಮತ್ತು ಮಾತಮ್ಮ ಕೆರೆಗಳನ್ನು ಬಲಾಢ್ಯರ ತಪ್ಪು ಮಾಹಿತಿ ಮೇರೆಗೆ ತಹಸೀಲ್ದಾರರು ಇದೇ ಕೆರೆಗಳನ್ನು ಅಭಿವೃದ್ಧಿಪಡಿಸಲು ಮುಂದಾಗಿರುವುದು ಖಂಡನೀಯ. ಬಳಸೋಕೆರೆ ಮತ್ತು ಸರಕಾರಿ ಕೆರೆ ಅಭಿವೃದ್ಧಿಗೆ ಮುಂದಾಗಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ದಸಂಸ ರಾಜ್ಯ ಖಜಾಂಚಿ ಭದ್ರಾವತಿ ಸತ್ಯ, ಈಶ್ವರಪ್ಪ, ಕಾಣಿಕ್ಯರಾಜ್‌, ಕೆ.ಸುರೇಶ್‌, ಸಂದೀಪ್‌, ದಾಸ, ನರಸಿಂಹ, ನರಸಮ್ಮ, ಸುಮನ್‌ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ