ಆ್ಯಪ್ನಗರ

ಕ್ಯಾಡ್‌ ವಿರುದ್ಧ ಕೈ ನಾಯಕರ ಆಕ್ರೋಶ, ಬಂಧನ

ಪೌರತ್ವ ತಿದ್ದುಪಡಿ ಮಸೂದೆ ಕೈಬಿಡುವಂತೆ ಆಗ್ರಹಿಸಿ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್‌ ನೇತೃತ್ವದಲ್ಲಿಕಾಂಗ್ರೆಸ್‌ ಕಾರ್ಯಕರ್ತರು ಸೋಮವಾರ ಬೆಳಗ್ಗೆ ಉಪವಾಸ ಸತ್ಯಾಗ್ರಹ ನಡೆಸಿದರು.

Vijaya Karnataka 17 Dec 2019, 5:00 am
ಶಿವಮೊಗ್ಗ: ಪೌರತ್ವ ತಿದ್ದುಪಡಿ ಮಸೂದೆ ಕೈಬಿಡುವಂತೆ ಆಗ್ರಹಿಸಿ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್‌ ನೇತೃತ್ವದಲ್ಲಿಕಾಂಗ್ರೆಸ್‌ ಕಾರ್ಯಕರ್ತರು ಸೋಮವಾರ ಬೆಳಗ್ಗೆ ಉಪವಾಸ ಸತ್ಯಾಗ್ರಹ ನಡೆಸಿದರು.
Vijaya Karnataka Web 16SOM11_46
ಶಿವಮೊಗ್ಗದ ಗಾಂಧಿ ಪಾರ್ಕ್ ಮುಂದೆ ಕ್ಯಾಡ್‌ ವಿರೋಧಿಸಿ ಧರಣಿನಿರತ ಕಾಂಗ್ರೆಸ್‌ ಮುಖಂಡರನ್ನು ಬಂಧಿಸಿದ ಪೊಲೀಸರು.


ನಗರದ ಗಾಂಧಿ ಪಾರ್ಕ್ ಮುಂದೆ ಗಾಂಧೀಜಿ ಭಾವಚಿತ್ರವಿಟ್ಟು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಕ್ಕೆ ಕೆಲಹೊತ್ತು ಪರಿಸ್ಥಿತಿ ವಿಕೋಪಕ್ಕೆ ತಲುಪಿತ್ತು.

ಕೇಂದ್ರ ಸರಕಾರ ಪೌರತ್ವ ತಿದ್ದುಪಡಿ ಮಸೂದೆ ಜಾರಿಗೆ ತರುವ ಮೂಲಕ ದೇಶದ ಅಖಂಡತೆಗೆ ಭಂಗ ತರುವ ಕೆಲಸ ಮಾಡುತ್ತಿದೆ. ಇದರಿಂದ ದೇಶದ ಜನ ಆತಂಕದಲ್ಲಿದ್ದಾರೆ. ಹೀಗಾಗಿ, ಮಸೂದೆ ತಿದ್ದುಪಡಿ ಕೈಬಿಡಬೇಕೆಂದು ಆಗ್ರಹಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿಧರ್ಮಾಂಧತೆ ಆಧಾರದ ಮೇಲೆ ಯಾವುದೇ ಮಸೂದೆ ರಚಿಸಬಾರದು. ಇದು ಭಾರತೀಯ ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡುತ್ತದೆ. ಹೀಗಾಗಿ, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗೋಸ್ಕರ ಇದರ ತಿದ್ದುಪಡಿಯನ್ನು ಕೈಬಿಡಬೇಕು ಎಂದು ಮನವಿ ಮಾಡಿದರು.

ಉಪವಾಸ ಸತ್ಯಾಗ್ರಹಕ್ಕೆ ಅವಕಾಶ ನೀಡದಿದ್ದರೂ ಧರಣಿ ಮಾಡಲು ಮುಂದಾಗಿದ್ದಕ್ಕೆ ಪೊಲೀಸರು ಕಾಂಗ್ರೆಸ್‌ ಮುಖಂಡರನ್ನು ವಶಕ್ಕೆ ಪಡೆದು, ಬಿಡುಗಡೆ ಮಾಡಿದರು. ವಿಧಾನ ಪರಿಷತ್‌ ಸದಸ್ಯ ಆರ್‌.ಪ್ರಸನ್ನಕುಮಾರ್‌, ಜಿಲ್ಲಾಕಾಂಗ್ರೆಸ್‌ ಅಧ್ಯಕ್ಷ ಎಚ್‌.ಎಸ್‌.ಸುಂದರೇಶ್‌, ಎನ್‌.ರಮೇಶ್‌, ಇಸ್ಮಾಯಿಲ್‌ಖಾನ್‌, ಹಾಲಪ್ಪ, ವೇದಾ ವಿಜಯಕುಮಾರ್‌, ಮಂಗಳಾ ಅಣ್ಣಪ್ಪ, ರಮೇಶ್‌ ಹಗ್ಡೆ, ಎಸ್‌.ಬಿ.ಅಶೋಕ್‌ ಕುಮಾರ್‌ ಇತರರು ಪಾಲ್ಗೊಂಡಿದ್ದರು.

===
ದೇಶದ ಐಕ್ಯತೆಗೆ ಮಾರಕವಾಗಿರುವ ಸಂವಿಧಾನದ ಆಶಯಗಳಿಗೆ ಧಕ್ಕೆ ತರುವ, ಪ್ರಜಾಪ್ರಭುತ್ವ ವಿರೋಧಿ ವಿಧೇಯಕ ಜಾರಿಗೊಳಿಸಬಾರದು.

- ಕೆ.ಬಿ. ಪ್ರಸನ್ನಕುಮಾರ್‌,
ಮಾಜಿ ಶಾಸಕ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ