ಆ್ಯಪ್ನಗರ

ಸ್ವಚ್ಛಮೇವ ಜಯತೆ ನಿಮಿತ್ತ ಚಿತ್ರಕಲಾ ಸ್ಪರ್ಧೆ

ಸ್ವಚ್ಛ ಮೇವ ಜಯತೆ ಮತ್ತು ಜಲಾಮೃತ ಮಾಸಿಕ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಶುಕ್ರವಾರ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಯಿತು.

Vijaya Karnataka 7 Jul 2019, 5:00 am
ಶಿವಮೊಗ್ಗ: ಸ್ವಚ್ಛ ಮೇವ ಜಯತೆ ಮತ್ತು ಜಲಾಮೃತ ಮಾಸಿಕ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಶುಕ್ರವಾರ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಯಿತು.
Vijaya Karnataka Web SMR-5ganesh4


ಪ್ರೌಢಶಾಲಾ ವಿಭಾಗ ಮತ್ತು ಪದವಿಪೂರ್ವ ವಿಭಾಗದಲ್ಲಿ ಸ್ಪರ್ಧೆ ನಡೆಸಲಾಯಿತು. ಸ್ಪರ್ಧೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಕ್ಕಾಗಿ ಈ ಕೆಳಕಂಡಂತೆ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು ವಿಭಾಗದಲ್ಲಿ ಆಯ್ಕೆ ಮಾಡಲಾಯಿತು.

ಪ್ರೌಢಶಾಲಾ ವಿಭಾಗದಿಂದ ನಗರದ ಸೆಂಟ್‌ ಥಾಮಸ್‌ ಶಾಲೆ ವಿದ್ಯಾರ್ಥಿನಿ ಗಾನವಿ ಪ್ರಥಮ, ದ್ವಿತೀಯ ಸ್ಥಾನವನ್ನು ಭದ್ರಾವತಿಯ ಪೂರ್ಣಪ್ರಜ್ಞ ಎಜುಕೇಶನ್‌ ಸೆಂಟರ್‌ನ ವಿದ್ಯಾರ್ಥಿ ಸ್ವರೂಪ್‌ ಡಿ ಹಾಗೂ ತೃತೀಯ ಬಹುಮಾನವನ್ನು ಹೊಸನಗರದ ಸಂಪೇಕಟ್ಟೆ ಸರಕಾರಿ ಪ್ರೌಢಶಾಲೆಯ ಕೆ.ಅನುಷಾ ಪಡೆದುಕೊಂಡರು.

ಪದವಿಪೂರ್ವ ಕಾಲೇಜು ವಿಭಾಗದಲ್ಲಿ ತೀರ್ಥಹಳ್ಳಿ ಸರಕಾರಿ ಕಾಲೇಜಿನ ವಿದ್ಯಾರ್ಥಿ ಎ.ದಸ್ತಗಿರ್‌ ಪ್ರಥಮ, ಶಿಕಾರಿಪುರ ಪದವಿಪೂರ್ವ ಕಾಲೇಜಿನ ಬಿ.ಎ.ತಿಲಕ್‌ ಕುಮಾರ್‌ ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ತೀರ್ಥಹಳ್ಳಿ ವಾಗ್ದೇವಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಜಿ.ಎ.ನಾಗಶ್ರೀ ಪಡೆದುಕೊಂಡರು.

ಸ್ಪರ್ಧೆಯನ್ನು ಜಿಪಂ ಸಿಇಓ ಶಿವರಾಮೇಗೌಡ ಸ್ಪರ್ಧೆಗೆ ಚಾಲನೆ ನೀಡಿದರು. ಸಾರ್ವಜನಿಕ ಶಿಕ್ಷ ಣ ಇಲಾಖೆಯ ರಮೇಶ್‌ ಹಾಗೂ ಪದವಿಪೂರ್ವ ಶಿಕ್ಷ ಣ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ