ಆ್ಯಪ್ನಗರ

ಶಿಕಾರಿಪುರದಲ್ಲಿ ಕಾರ‍್ಯಕರ್ತರ ಹರ್ಷ

ದೇಶದ ಜನತೆ ಬಿಜೆಪಿ ಪರವಾಗಿ ತಮ್ಮ ಒಲವು ವ್ಯಕ್ತಪಡಿಸಿದ್ದಾರೆ, ಅವರ ವಿಶ್ವಾಸ ಉಳಿಸಿಕೊಂಡು ಹೋಗುವ ನಿಟ್ಟಿನಲ್ಲಿ ಕಾರ‍್ಯಕರ್ತರೂ ಎಚ್ಚರಿಕೆಯಿಂದ ಇರಬೇಕೆಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ‍್ಯದರ್ಶಿ ಕೆ.ಎಸ್‌.ಗುರುಮೂರ್ತಿ ಹೇಳಿದರು.

Vijaya Karnataka 24 May 2019, 5:00 am
ಶಿಕಾರಿಪುರ: ದೇಶದ ಜನತೆ ಬಿಜೆಪಿ ಪರವಾಗಿ ತಮ್ಮ ಒಲವು ವ್ಯಕ್ತಪಡಿಸಿದ್ದಾರೆ, ಅವರ ವಿಶ್ವಾಸ ಉಳಿಸಿಕೊಂಡು ಹೋಗುವ ನಿಟ್ಟಿನಲ್ಲಿ ಕಾರ‍್ಯಕರ್ತರೂ ಎಚ್ಚರಿಕೆಯಿಂದ ಇರಬೇಕೆಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ‍್ಯದರ್ಶಿ ಕೆ.ಎಸ್‌.ಗುರುಮೂರ್ತಿ ಹೇಳಿದರು.
Vijaya Karnataka Web SMR-23SKP1


ಪಟ್ಟಣದಲ್ಲಿ ಗುರುವಾರ ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಕಾರ‍್ಯಕರ್ತರಿಗೆ ಸಿಹಿ ವಿತರಿಸಿ ಸಂಭ್ರಮಿಸಿದ ನಂತರ ಅವರು ಮಾತನಾಡಿದರು. ಪಕ್ಷ ದ ಗೆಲುವಿಗಾಗಿ ಕಾರ‍್ಯಕರ್ತರು ಹಗಲಿರುಳು ಶ್ರಮಿಸಿದ್ದಾರೆ, ಅವರ ಪರಿಶ್ರಮಕ್ಕೆ ಮೀರಿ ಜನರು ಪ್ರತಿಫಲ ನೀಡಿದ್ದಾರೆ. ಜನರಿಗೆ ಎಷ್ಟೇ ಧನ್ಯವಾದ ಹೇಳಿದರೂ ಸಾಲದು ಎಂದರು. ಗೆಲುವು ಜವಾಬ್ದಾರಿ ಹೆಚ್ಚಿಸುತ್ತದೆ. ಪುರಸಭೆ ಚುನಾವಣೆಯಲ್ಲೂ ಕಾರ‍್ಯಕರ್ತರು ಪ್ರತಿ ಮನೆಗೆ ತೆರಳಿ ಮತಯಾಚನೆ ಮಾಡಬೇಕೆಂದರು.

ಚುನಾವಣೆ ಫಲಿತಾಂಶ ಪ್ರಕಟಗೊಂಡು ಬಿ.ವೈ.ರಾಘವೇಂದ್ರ ಬಹುಮತ ಪಡೆಯುತ್ತಿರುವ ಸುದ್ದಿ ಗೊತ್ತಾದಾಗ ಪಟ್ಟಣದ ಪ್ರಮುಖ ವೃತ್ತದಲ್ಲಿ ಪಟಾಕಿ ಸಿಡಿಸಿದರು. ಬಿಎಸ್‌ವೈ ಮನೆಗೆ ಆಗಮಿಸುವ ಕಾರ‍್ಯಕರ್ತರಿಗೆ ಸಿಹಿ ವಿತರಿಸಿ ಸಂಭ್ರಮಿಸಿದರು. ಫಲಿತಾಂಶ ವೀಕ್ಷ ಣೆಗಾಗಿ ದೊಡ್ಡ ಪರದೆ ವ್ಯವಸ್ಥೆ ಮಾಡಲಾಗಿತ್ತು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ