ಆ್ಯಪ್ನಗರ

ಹೊಸನಗರದಲ್ಲಿ ಶಾಂತಿಯುತ ಮತದಾನ

ಇಲ್ಲಿನ ಪಟ್ಟಣ ಪಂಚಾಯಿತಿ ಸದಸ್ಯರ ಆಯ್ಕೆಗೆ ಬುಧವಾರ ನಡೆದ ಮತದಾನ ಶಾಂತಿಯುತವಾಗಿತ್ತು. ಪಟ್ಟಣದ 11 ವಾರ್ಡ್‌ಗಳಿದ್ದು, ಪ್ರತಿ ವಾರ್ಡ್‌ಗೆ ಒಂದರಂತೆ ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಮತದಾನ ಬೆಳಿಗ್ಗೆ ನೀರಸವಾಗಿ ಆರಂಭಗೊಂಡರೂ ಮದ್ಯಾಹ್ನದ ವೇಳೆಗೆ ಶೇ.50ರಷ್ಟನ್ನು ದಾಟಿತ್ತು. ಬಿರುಬಿಸಿಲಿನ ನಡುವೆಯೂ ಮತದಾರರು ಉತ್ಸಾಹದಿಂದ ಮತ ಚಲಾಯಿಸಿದರು.

Vijaya Karnataka 30 May 2019, 5:00 am
ಹೊಸನಗರ: ಇಲ್ಲಿನ ಪಟ್ಟಣ ಪಂಚಾಯಿತಿ ಸದಸ್ಯರ ಆಯ್ಕೆಗೆ ಬುಧವಾರ ನಡೆದ ಮತದಾನ ಶಾಂತಿಯುತವಾಗಿತ್ತು. ಪಟ್ಟಣದ 11 ವಾರ್ಡ್‌ಗಳಿದ್ದು, ಪ್ರತಿ ವಾರ್ಡ್‌ಗೆ ಒಂದರಂತೆ ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಮತದಾನ ಬೆಳಿಗ್ಗೆ ನೀರಸವಾಗಿ ಆರಂಭಗೊಂಡರೂ ಮದ್ಯಾಹ್ನದ ವೇಳೆಗೆ ಶೇ.50ರಷ್ಟನ್ನು ದಾಟಿತ್ತು. ಬಿರುಬಿಸಿಲಿನ ನಡುವೆಯೂ ಮತದಾರರು ಉತ್ಸಾಹದಿಂದ ಮತ ಚಲಾಯಿಸಿದರು.
Vijaya Karnataka Web SMR-29HOSP1


8,9 ಮತ್ತು 10ನೇ ವಾರ್ಡಿನಲ್ಲಿ ಕೆಲ ಮತದಾರರ ಹೆಸರು ನಾಪತ್ತೆಯಾಗಿದ್ದು, ತಮ್ಮ ಹಕ್ಕು ಚಲಾಯಿಸಲಾಗದೇ ವಾಪಾಸಾದರು. ಕಳೆದ ಲೋಕಸಭಾ ಚುನಾವಣೆಯ ಮತದಾರರ ಪಟ್ಟಿಯಲ್ಲಿ ಹೆಸರಿದ್ದು, ನಂತರದಲ್ಲಿ ಕೈಬಿಡಲಾಗಿದೆ. ಅಧಿಕಾರಿಗಳ ನಿರ್ಲಕ್ಷ ದಿಂದ ಮತಪಟ್ಟಿಯಲ್ಲಿ ಲೋಪ ಕಂಡುಬಂದಿದೆ. ಹೆಸರು ಬಿಟ್ಟು ಹೋದವರಿಗೆ ಮತದಾನಕ್ಕೆ ಅವಕಾಶ ನೀಡಬೇಕು ಎಂದು ಅಭ್ಯರ್ಥಿಗಳು ಚುನಾವಣಾಧಿಕಾರಿಗಳಿಗೆ ಮನವಿ ಮಾಡಿದರು. ಬಿಜೆಪಿ ಹಾಗೂ ಜೆಡಿಎಸ್‌- ಕಾಂಗ್ರೆಸ್‌ ಮೈತ್ರಿಕೂಟದ ತಲಾ ಹನ್ನೊಂದು ಹಾಗೂ ಮೂವರು ಪಕ್ಷೇತರರು ಸ್ಪರ್ಧಾಕಣದಲ್ಲಿದ್ದಾರೆ. ಮತ ಎಣಿಕೆ ಜೂ.3ರಂದು ನಡೆಯಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ