ಆ್ಯಪ್ನಗರ

ಪೊಲೀಸ್‌ ವಶದಲ್ಲಿ ವ್ಯಕ್ತಿ ಸಾವು: ಕುಟುಂಬದ ಆಕ್ರೋಶ

ಭದ್ರಾವತಿ ತಾಲೂಕು ಆಗರದಹಳ್ಳಿ ಕ್ಯಾಂಪಿನ ಬಾಲೇಶ್ ಪೊಲೀಸರ ವಶದಲ್ಲಿ ಮೃತಪಟ್ಟ ವ್ಯಕ್ತಿ. ಪೊಲೀಸರು ಹೊಡೆದಿದ್ದರಿಂದ ಬಾಲೇಶ್ ಮೃತಪಟ್ಟಿರುವುದಾಗಿ ಸಂಬಂಧಿಕರ ಆರೋಪಿಸಿದ್ದಾರೆ. ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಎಸ್.ಪಿ. ಡಾ.ಎಂ.ಅಶ್ವಿನಿ ಅವರು, 'ಇದು ಲಾಕಪ್'ಡೆತ್ ಅಲ್ಲ. ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ' ತಿಳಿಸಿದ್ದಾರೆ.

Vijaya Karnataka Web 7 Jun 2019, 10:54 am
ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕು ಹೊಳೆಹೊನ್ನೂರು ಠಾಣೆ ಪೊಲೀಸರ ವಶದಲ್ಲಿದ್ದ ವ್ಯಕ್ತಿ ಅನುಮಾನಾಸ್ಪದ ಸಾವನ್ನಪ್ಪಿದ್ದಾನೆ.
Vijaya Karnataka Web Custodial death


ಭದ್ರಾವತಿ ತಾಲೂಕು ಆಗರದಹಳ್ಳಿ ಕ್ಯಾಂಪಿನ ಬಾಲೇಶ್ ಪೊಲೀಸರ ವಶದಲ್ಲಿ ಮೃತಪಟ್ಟ ವ್ಯಕ್ತಿ. ಪೊಲೀಸರು ಹೊಡೆದಿದ್ದರಿಂದ ಬಾಲೇಶ್ ಮೃತಪಟ್ಟಿರುವುದಾಗಿ ಸಂಬಂಧಿಕರ ಆರೋಪಿಸಿದ್ದಾರೆ.

ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಎಸ್.ಪಿ. ಡಾ.ಎಂ.ಅಶ್ವಿನಿ ಅವರು, 'ಇದು ಲಾಕಪ್' ಡೆತ್ ಅಲ್ಲ. ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ' ತಿಳಿಸಿದ್ದಾರೆ.

ಆಗಿದ್ದೇನು?:
ಗುರುವಾರ ಮಧ್ಯಾಹ್ನ ಹೊಳೆಹೊನ್ನೂರು ಠಾಣೆ ಪೊಲೀಸರು ಶಿವಮೊಗ್ಗ ಎಸ್‍ಪಿ ಕಚೇರಿಗೆ ಬಾಲೇಶ್‍ನನ್ನು ಕರೆತಂದಿದ್ದರು. ರಾತ್ರಿ ಸುಮಾರು 9.30ಕ್ಕೆ ಮನೆಯವರಿಗೆ ಕರೆ ಮಾಡಿ ಮೆಗ್ಗಾನ್ ಆಸ್ಪತ್ರೆಗೆ ಬರಲು ಹೇಳಿದ್ದಾರೆ. ಮೆಗ್ಗಾನ್ ಆಸ್ಪತ್ರೆಗೆ ಬಂದಾಗ ಬಾಲೇಶ್ ಮೃತಪಟ್ಟಿರುವುದನ್ನು ನೋಡಿ ಕುಟುಂಬಸ್ಥರು ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಲೇಶ್ ಸಾವಿಗೆ ಪೊಲೀಸರೇ ಕಾರಣ ಅಂತ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆಪಾದಿಸಿದ್ದಾರೆ. ಮೃತ ದೇಹವನ್ನು ಕುಟುಂಬಸ್ಥರು ತೆಗೆದುಕೊಂಡು ಹೋಗಿದ್ದಾರೆ‌.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ