ಆ್ಯಪ್ನಗರ

ಕಳಪೆ ಕಾಮಗಾರಿ ತನಿಖೆ

ಮಂಡಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿವಿವಿಧ ಯೋಜನೆಗಳಡಿ 2018-19ನೇ ಸಾಲಿನಲ್ಲಿನಡೆಸಲಾದ ಕಾಮಗಾರಿಗಳ ತನಿಖೆ ನಡೆಸಲಾಗುವುದು ಎಂದು ಜಿಲ್ಲಾಪಂಚಾಯಿತಿ ಸಿಇಒ ಎಂ.ಎಲ್‌.ವೈಶಾಲಿ ಅವರು ಭರವಸೆ ನೀಡಿದರು.

Vijaya Karnataka 13 Oct 2019, 5:00 am
ಶಿವಮೊಗ್ಗ :ಮಂಡಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿವಿವಿಧ ಯೋಜನೆಗಳಡಿ 2018-19ನೇ ಸಾಲಿನಲ್ಲಿನಡೆಸಲಾದ ಕಾಮಗಾರಿಗಳ ತನಿಖೆ ನಡೆಸಲಾಗುವುದು ಎಂದು ಜಿಲ್ಲಾಪಂಚಾಯಿತಿ ಸಿಇಒ ಎಂ.ಎಲ್‌.ವೈಶಾಲಿ ಅವರು ಭರವಸೆ ನೀಡಿದರು.
Vijaya Karnataka Web poor workshop investigation
ಕಳಪೆ ಕಾಮಗಾರಿ ತನಿಖೆ

ಗ್ರಾಮ ಪಂಚಾಯಿತಿ ಆವರಣದಲ್ಲಿಗುರುವಾರ 2018-19ನೇ ಸಾಲಿನ ವಾರ್ಷಿಕ ಜಮಾಬಂಧಿ ಕಾರ್ಯಕ್ರಮದಲ್ಲಿಅವರು ಗ್ರಾಮ ಪಂಚಾಯಿತಿಗೆ ವಿವಿಧ ಯೋಜನೆಗಳಡಿ ಬಿಡುಗಡೆಯಾದ ಅನುದಾನ, ನರೇಗಾ, 14ನೇ ಹಣಕಾಸು, ಅಭಿವೃದ್ಧಿ ಅನುದಾನ, ವಸತಿ ಯೋಜನೆ, ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯಡಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಅನುಷ್ಠಾನಗೊಳಿಸಿರುವ ಯೋಜನೆಗಳನ್ನು ಗ್ರಾಮಸ್ಥರ ಮುಂದೆ ಮಂಡಿಸಿದಾಗ ಕೆಲವು ಕಾಮಗಾರಿಗಳು ಕಳಪೆಯಾಗಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಬೇಕೆಂದು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ವೈಶಾಲಿ ಅವರು, ಕಳಪೆ ಆಗಿರುವ ಕಾಮಗಾರಿಗಳ ಪಟ್ಟಿ ನೀಡಿದಲ್ಲಿಅವುಗಳ ಬಗ್ಗೆ ತನಿಖೆ ನಡೆಸಲಾಗುವುದು. ಕಾಮಗಾರಿ ಕಳಪೆಯಾಗಿದ್ದಲ್ಲಿಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ