ಆ್ಯಪ್ನಗರ

ಅಭ್ಯಾಸ, ಅಧ್ಯಯನದಿಂದ ವ್ಯಕ್ತಿತ್ವ ವಿಕಸನ

ಅಭ್ಯಾಸ ಮತ್ತು ಅಧ್ಯಯನದಿಂದ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಚ್‌.ಕೆ.ಮೊಹಮ್ಮದ್‌ ಇಮ್ತಿಯಾಜ್‌ ಹೇಳಿದರು.

Vijaya Karnataka 21 Jul 2019, 5:00 am
ಶಿವಮೊಗ್ಗ: ಅಭ್ಯಾಸ ಮತ್ತು ಅಧ್ಯಯನದಿಂದ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಚ್‌.ಕೆ.ಮೊಹಮ್ಮದ್‌ ಇಮ್ತಿಯಾಜ್‌ ಹೇಳಿದರು.
Vijaya Karnataka Web SMG-2007-2-15-20SMG4


ನಗರದ ಕುವೆಂಪು ರಂಗಮಂದಿರದಲ್ಲಿ ಶನಿವಾರ ಸರಕಾರಿ ಪದವಿಪೂರ್ವ ಕಾಲೇಜು ಸಾಂಸ್ಕೃತಿಕ, ಕ್ರೀಡಾ, ಸಹ್ಯಾದ್ರಿ ರೋವರ್ಸ್‌ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.

ವ್ಯಕ್ತಿತ್ವ ವಿಕಸನಕ್ಕೆ ಪಠ್ಯೇತರ ಚಟುವಟಿಕೆಗಳು ಸಹಕಾರಿಯಾಗುತ್ತವೆ. ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೇ ಜವಾಬ್ದಾರಿ ಅರಿತು ಓದಬೇಕು. ಅಧ್ಯಯನದಿಂದ ವ್ಯಕ್ತಿತ್ವ ವಿಕಸನವಾಗುತ್ತದೆ. ಇದರೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಒತ್ತಡದಿಂದ ಹೊರಬರಬಹುದು ಎಂದರು.

ವಿದ್ಯಾರ್ಥಿಗಳು ಕೇವಲ ಪರೀಕ್ಷಾ ಸಮಯದಲ್ಲಿ ಅಲ್ಲದೇ ವರ್ಷ ಪೂರ್ತಿ ಓದಬೇಕು. ಪಠ್ಯ ಪುಸ್ತಕಗಳನ್ನು ಓದಬೇಕು, ಮನನ ಮಾಡಿಕೊಳ್ಳಬೇಕು, ಹಾಗಾದಾಗ ಮಾತ್ರ ಹೆಚ್ಚು ಅಂಕ ಪಡೆಯಲು ಸಾಧ್ಯ. ಪಿಯುಸಿ ಮಹತ್ತರ ಘಟ್ಟವಾಗಿದ್ದು, ಜೀವನದ ದಿಕ್ಕನ್ನು ನಿರ್ಧರಿಸುವ ಹಂತವಾಗಿದೆ. ಪೋಷಕರು ಕಷ್ಟ ಪಟ್ಟು ಮಕ್ಕಳನ್ನು ಕಾಲೇಜಿಗೆ ಕಳುಹಿಸುತ್ತಿದ್ದಾರೆ. ಆದರೆ ಕೆಲವರು ಅದರ ಅರಿವಿಲ್ಲದೆ ದುರುಪಯೋಗಪಡಿಸಿಕೊಳ್ಳುತ್ತಾರೆ. ಆಮೇಲೆ ಪಶ್ಚಾತಾಪ ಪಡುತ್ತಾರೆ ಎಂದರು.

ಇತಿಹಾಸ ಉಪನ್ಯಾಸಕಿ ಸರೋಜ ಹೆಗಡೆ ಅವರನ್ನು ಸನ್ಮಾನಿಸಲಾಯಿತು. ಪ್ರಾಂಶುಪಾಲ ಡಿ.ಕೆ.ಶ್ರೀನಿವಾಸ ಮೂರ್ತಿ ಅಧ್ಯಕ್ಷ ತೆ ವಹಿಸಿದ್ದರು. ರಂಗ ನಿರ್ದೇಶಕ ಸಾಸ್ವೆಹಳ್ಳಿ ಸತೀಶ್‌, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಚಂದ್ರಶೇಖರ್‌, ಭೀಮಪ್ಪ, ಟಿ.ಆರ್‌.ಗಾಯತ್ರಿ, ಆರ್‌.ನಟರಾಜ್‌, ಚಂದ್ರಶೇಖರ್‌(ರಾಜು) ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ