ಆ್ಯಪ್ನಗರ

ಲಾಕ್‌ಡೌನ್‌ ಉಲ್ಲಂಘಿಸಿ ಮಸೀದಿಯಲ್ಲಿ ಪ್ರಾರ್ಥನೆ, ಶಿವಮೊಗ್ಗದಲ್ಲಿ 70 ಜನಕ್ಕೆ ಹೋಂ ಕ್ವಾರಂಟೈನ್‌

ಕೊರೊನಾ ನಿಯಂತ್ರಣಕ್ಕಾಗಿ ಸರಕಾರ ಲಾಕ್‌ಡೌನ್‌ ಘೋಷಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಹೇಳಿದ್ದರೂ, ಕೆಲವರು ಮಾತ್ರ ಧರ್ಮದ ಹೆಸರು ಹೇಳಿಕೊಂಡು ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿರುವುದು ಕಂಡುಬರುತ್ತಿದೆ. ಶಿವಮೊಗ್ಗದಲ್ಲಿಯೂ ಇದೇ ರೀತಿ ಘಟನೆ ನಡೆದಿದೆ.

Vijaya Karnataka Web 3 Apr 2020, 7:31 pm
ಶಿವಮೊಗ್ಗ: ಕೊರೊನಾ ನಿಯಂತ್ರಣಕ್ಕಾಗಿ ದೇಶಾದ್ಯಂತ ಲಾಕ್‌ಡೌನ್‌ ಘೋಷಿಸಿದ್ದರೂ ಮಸೀದಿಗಳಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸುವುದು ಮುಂದುವರೆದಿದೆ. ಇದು ಶಿವಮೊಗ್ಗ ಜಿಲ್ಲೆಯಲ್ಲಿಯೂ ಕಂಡುಬಂದಿದ್ದು, ಲಾಕ್‌ಡೌನ್‌ ಮತ್ತು ನಿಷೇಧಾಜ್ಞೆ ಆದೇಶ ಉಲ್ಲಂಘಿಸಿ ಮಸೀದಿಯೊಂದರಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ 77 ಜನರನ್ನು ಪೊಲೀಸರು ಹೋಮ್‌ ಕ್ವಾರಂಟೈನ್ನಲ್ಲಿ ಇರಿಸಿದ್ದಾರೆ.
Vijaya Karnataka Web Shivamogga


ಪ್ರಾರ್ಥನೆಯಲ್ಲಿ ಭಾಗಿಯಾದವರ ಪೈಕಿ ಏಳು ಮಂದಿಯಲ್ಲಿ ಜ್ವರದ ಲಕ್ಷಣಗಳು ಕಂಡು ಬಂದಿರುವುದು ಆತಂಕ ಸೃಷ್ಟಿಸಿದೆ. ತಾಲೂಕಿನ ಆಯನೂರು ಸಮೀಪದ ಕೆಸವಿನಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಶುಕ್ರವಾರದ ನಮಾಜ್ ಮಾಡಲು 70ಕ್ಕೂ ಹೆಚ್ಚು ಮಂದಿ ಸೇರಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಬಂದ ಪೊಲೀಸರು, ಮುಸ್ಲಿಂ ಬಾಂಧವರಿಗೆ ಎಚ್ಚರಿಕೆ ನೀಡಿ ಕೇಸ್‌ ದಾಖಲಿಸಿಕೊಂಡಿದ್ದಾರೆ.

ಪ್ರಾರ್ಥನೆ ಸಲ್ಲಿಸುತ್ತಿದ್ದವರನ್ನು ಮಸೀದಿಯಿಂದ ಹೊರಕಳುಹಿಸಿದ ಕುಂಸಿ ಠಾಣೆ ಪಿಎಸ್‌ಐ ನವೀನ್‌, ಎಲ್ಲರಿಗೂ ಹೋಂ ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚಿಸಿದ್ದಾರೆ. ಇನ್ನು, ಜ್ವರದಿಂದ ಬಳಲುತ್ತಿದ್ದ 7 ಜನರನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಘಟನೆ ಸಂಬಂಧ ಕುಂಸಿ‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ: ಹೋಮ್‌ ಕ್ವಾರಂಟೈನ್‌ ನಿಂದ ಹೊರಬಂದರೆ ವೀಸಾ ರದ್ದು ಮಾಡೋ ಎಚ್ಚರಿಕೆ

ಶಿವಮೊಗ್ಗದಲ್ಲಿ ಇದುವರೆಗೂ ಯಾವುದೇ ಕೊರೊನಾ ಪಾಸಿಟಿವ್‌ ಪ್ರಕರಣಗಳು ಕಂಡುಬಂದಿಲ್ಲ. ಆದರೆ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 128ಕ್ಕೇರಿದ್ದರೆ, ಮೂವರು ಮೃತಪಟ್ಟಿದ್ದಾರೆ. ಇನ್ನು, ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2000 ಗಡಿ ದಾಟಿದ್ದು, 50ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.

ಶಿವಮೊಗ್ಗ: ತಾಯಿ ಸತ್ತಾಗ ತವರಿಗೆ ಹೋಗಲು ಮಗಳ ಪರದಾಟ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ