ಆ್ಯಪ್ನಗರ

ಕುಂದು ಕೊರತೆ ನಿವಾರಣೆ ಭರವಸೆ

ಕಾಲೇಜಿನ ಕುಂದು ಕೊರತೆಗಳನ್ನು ಪರಿಹರಿಸುವುದಾಗಿ ಶಾಸಕ ಕೆ.ಬಿ.ಅಶೋಕ್‌ ನಾಯ್ಕ್‌ ಭರವಸೆ ನೀಡಿದರು.

Vijaya Karnataka 25 Aug 2019, 5:00 am
ಶಿವಮೊಗ್ಗ: ಕಾಲೇಜಿನ ಕುಂದು ಕೊರತೆಗಳನ್ನು ಪರಿಹರಿಸುವುದಾಗಿ ಶಾಸಕ ಕೆ.ಬಿ.ಅಶೋಕ್‌ ನಾಯ್ಕ್‌ ಭರವಸೆ ನೀಡಿದರು.
Vijaya Karnataka Web SMG-2408-2-15-24SMG10


ತಾಲೂಕಿನ ಕುಂಸಿ ಸರಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಸಂಘ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಕಾಲೇಜಿನ ಅನೇಕ ಬೇಡಿಕೆಗಳನ್ನೊಳಗೊಂಡ ಮನವಿ ಸ್ವೀಕರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಹಿತ ಹಾಗೂ ಅವರ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಕಲ್ಪಿಸುವುದು ಆದ್ಯ ಜವಾಬ್ದಾರಿ ಎಂದರು.

ವಿದ್ಯಾರ್ಥಿಗಳು ಸತತ ಪರಿಶ್ರಮ ಹಾಗೂ ಯೋಜನಾಬದ್ಧ ಅಭ್ಯಾಸ ಮಾಡಿದ್ದಲ್ಲಿ ಪರೀಕ್ಷೆಯಲ್ಲಿ ಯಶಸ್ಸನ್ನು ಸಾಧಿಸಬಹುದು ಎಂದು ಹೇಳಿದರು.

ಕುಂಸಿ ಜಿಲ್ಲಾ ಪಂಚಾಯಿತಿ ಸದಸ್ಯ ತಮ್ಮಡಿಹಳ್ಳಿ ನಾಗರಾಜ್‌ ಮಾತನಾಡಿ, ಯುವಪೀಳಿಗೆ ಜ್ಞಾನ ಸಂಪಾದಿಸಿ ಪ್ರಬುದ್ಧವಾಗಲು ನಿರಂತರ ಅಧ್ಯಯನದೊಂದಿಗೆ ಕ್ರೀಡೆ ಇನ್ನಿತರ ಚಟುವಟಿಕೆಗಳು ಸಹಕಾರಿಯಾಗಿವೆ ಎಂದು ಅಭಿಪ್ರಾಯಪಟ್ಟರು.

ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪರಮೇಶ್ವರಪ್ಪ ಉಪಸ್ಥಿತರಿದ್ದರು. ಪ್ರಾಂಶುಪಾಲ ಕೆ.ಅರವಿಂದ ಕುಮಾರ್‌ ಅಧ್ಯಕ್ಷ ತೆ ವಹಿಸಿದ್ದರು. ಶ್ರೀಧರ್‌ ನಿರೂಪಿಸಿ, ಉಪನ್ಯಾಸಕಿ ಸಂಧ್ಯಾ ಸ್ವಾಗತಿಸಿದರು. ಮಂಜುಳಾ ಧೇಯವಾಕ್ಯ ಬೋಧಿಸಿ, ಜಾಕೀರ್‌ ಹುಸೇನ್‌ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ