ಆ್ಯಪ್ನಗರ

ಪ್ರೀತಂ ಗೌಡ ನಿವಾಸ ಮೇಲೆ ಕಲ್ಲುತೂರಾಟ ವಿರೋಧಿಸಿ ಪ್ರತಿಭಟನೆ

ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಂ ಗೌಡ ಅವರ ನಿವಾಸ ಮೇಲೆ ಜೆಡಿಎಸ್‌ ಕಾರ್ಯಕರ್ತರು ನಡೆಸಿರುವ ಕಲ್ಲುತೂರಾಟ ಖಂಡಿಸಿ ನಗರದ ಶಿವಪ್ಪ ನಾಯಕ ಪ್ರತಿಮೆ ಎದುರು ಜಿಲ್ಲಾ ಬಿಜೆಪಿ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.

Vijaya Karnataka 15 Feb 2019, 5:00 am
ಶಿವಮೊಗ್ಗ : ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಂ ಗೌಡ ಅವರ ನಿವಾಸ ಮೇಲೆ ಜೆಡಿಎಸ್‌ ಕಾರ್ಯಕರ್ತರು ನಡೆಸಿರುವ ಕಲ್ಲುತೂರಾಟ ಖಂಡಿಸಿ ನಗರದ ಶಿವಪ್ಪ ನಾಯಕ ಪ್ರತಿಮೆ ಎದುರು ಜಿಲ್ಲಾ ಬಿಜೆಪಿ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
Vijaya Karnataka Web protest against stone stroke
ಪ್ರೀತಂ ಗೌಡ ನಿವಾಸ ಮೇಲೆ ಕಲ್ಲುತೂರಾಟ ವಿರೋಧಿಸಿ ಪ್ರತಿಭಟನೆ


ಈ ಸಂದರ್ಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರಕಾರ ಶಕುನಿ ರಾಜಕಾರಣ ನಡೆಸುತ್ತಿದೆ. ರಾಯಚೂರಿನ ದೇವಾಲಯಕ್ಕೆ ಭೇಟಿ ನೀಡಿದ ಯಡಿಯೂರಪ್ಪ ಅವರನ್ನು ಷಡ್ಯಂತ್ರದಿಂದ ತಾವೇ ಶಾಸಕರ ಪುತ್ರರನ್ನು ಅಲ್ಲಿಗೆ ಕಳುಹಿಸಿ, ಆಡಿಯೊ ರೆಕಾರ್ಡ್‌ ಮಾಡಿಸಿ ನಂತರ ಬ್ಲಾಕ್‌ ಮೇಲೆ ತಂತ್ರ ಅನುಸರಿಸಿದ್ದಾರೆ. ಯಾವುದೇ ಕಾರಣಕ್ಕೂ ಯಡಿಯೂರಪ್ಪ ಅವರನ್ನು ಕಟ್ಟಿಹಾಕಲು ಸಾಧ್ಯವಿಲ್ಲ ಎಂದರು.

ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಎಸ್‌.ದತ್ತಾತ್ರಿ ಮಾತನಾಡಿ, ಕೇವಲ 38 ಶಾಸಕರನ್ನು ಇಟ್ಟುಕೊಂಡು ಅಧಿಕಾರಕ್ಕೆ ಬಂದ ಜೆಡಿಎಸ್‌ ಅಧಿಕಾರಕ್ಕೆ ಬಂದ ಕೂಡಲೇ ಗೂಂಡಾ ವರ್ತನೆ ತೋರುತ್ತಿದ್ದು, ರಾಜ್ಯದ ಅಭಿವೃದ್ಧಿಯನ್ನು ಬಿಟ್ಟು ಆಡಿಯೊ ಟೇಪನ್ನು ಹಿಡಿದು ಬ್ಲಾಕ್‌ಮೇಲ್‌ ತಂತ್ರ ಅನುಸರಿಸಿದ್ದಾರೆ. ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ನೈತಿಕತೆ ಇದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಆಡಿಯೊ ಪ್ರಕರಣವನ್ನು ಎಸ್‌ಐಟಿಗೆ ತನಿಖೆಗೆ ನೀಡಿವ ಮೂಲಕ ಮುಖ್ಯಮಂತ್ರಿಗಳು ಷಡ್ಯಂತ್ರ ಮಾಡುತ್ತಿದ್ದಾರೆ. ಬಿಜೆಪಿ ಶಾಸಕರನ್ನು ಎದರಿಸಲು ಹಲ್ಲೆಗೆ ಮುಂದಾಗಿದ್ದಾರೆ. ಇದನ್ನು ಬಿಜೆಪಿ ಪ್ರಬಲವಾಗಿ ಖಂಡಿಸುತ್ತದೆ ಎಂದರು.

ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಡಿ.ಎಸ್‌.ಅರುಣ್‌, ನಾಗರಾಜ್‌, ಸೋಮಸುಂದರ್‌, ರುದ್ರೇಶ್‌, ಮಲತೇಶ್‌, ಪಾಲಿಕೆ ಸದಸ್ಯರಾದ ಸುರೇಖಾ ಮುರುಳೀಧರ್‌, ಸುನಿತಾ ಅಣ್ಣಪ್ಪ, ಸಂಗೀತ ನಾಗರಾಜ್‌ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ