ಆ್ಯಪ್ನಗರ

ಮೆಗ್ಗಾನ್‌ ಆಸ್ಪತ್ರೆಗೆ ಸ್ಕ್ಯಾ‌ನಿಂಗ್‌ ಸೌಲಭ್ಯ ಒದಗಿಸಿ

ಬಡ ರೋಗಿಗಳ ಅನುಕೂಲಕ್ಕಾಗಿ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸ್ಕ್ಯಾ‌ನಿಂಗ್‌ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದಿಂದ ಶನಿವಾರ ಶಾಸಕ ಕೆ.ಎಸ್‌.ಈಶ್ವರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

Vijaya Karnataka 19 Aug 2019, 12:11 am
ಶಿವಮೊಗ್ಗ : ಬಡ ರೋಗಿಗಳ ಅನುಕೂಲಕ್ಕಾಗಿ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸ್ಕ್ಯಾ‌ನಿಂಗ್‌ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದಿಂದ ಶನಿವಾರ ಶಾಸಕ ಕೆ.ಎಸ್‌.ಈಶ್ವರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
Vijaya Karnataka Web provide a scanning facility for meggan hospital
ಮೆಗ್ಗಾನ್‌ ಆಸ್ಪತ್ರೆಗೆ ಸ್ಕ್ಯಾ‌ನಿಂಗ್‌ ಸೌಲಭ್ಯ ಒದಗಿಸಿ


ಕಳೆದ ವರ್ಷದಿಂದ ಶಿವಮೊಗ್ಗದ ಪ್ರತಿಷ್ಠಿತ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸ್ಕ್ಯಾ‌ನಿಂಗ್‌ ಸೌಲಭ್ಯವಿಲ್ಲದೆ ಆಸ್ಪತ್ರೆಗೆ ಬರುವ ರೋಗಿಗಳು ಪರದಾಡುವಂತಾಗಿದೆ. ಇಲ್ಲಿಗೆ ಬರುವವರು ಬಡ ರೋಗಿಗಳೇ ಹೆಚ್ಚಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ಸ್ಕ್ಯಾ‌ನಿಂಗ್‌ ಇಲ್ಲದಿರುವುದರಿಂದ ಖಾಸಗಿ ಸ್ಕ್ಯಾ‌ನಿಂಗ್‌ಗಳಲ್ಲಿ ಸಾವಿರಾರು ರೂ. ಖರ್ಚು ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.

ಮೆಗ್ಗಾನ್‌ ಆಸ್ಪತ್ರೆಗೆ ಜಿಲ್ಲೆಯಿಂದ ಮಾತ್ರ ಇಲ್ಲದೇ ಹೊರ ಜಿಲ್ಲೆಗಳಿಂದಲೂ ರೋಗಿಗಳು ಬರುತ್ತಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿಯೇ ಸ್ಕ್ಯಾ‌ನಿಂಗ್‌ ಸೆಂಟರ್‌ ಇಲ್ಲದಿರುವುದರಿಂದ ಹೊರಗಡೆಯಿಂದ ಸ್ಕ್ಯಾ‌ನಿಂಗ್‌ ಮಾಡಿಸಿಕೊಂಡು ಬರಬೇಕಿದೆ. ಇದು ಬಡರೋಗಿಗಳಿಗೆ ಹೊರೆಯಾಗಿದೆ. ಜಿಲ್ಲೆಯವರೇ ಮುಖ್ಯಮಂತ್ರಿಯಾಗಿದ್ದರೂ ಮೆಗ್ಗಾನ್‌ನಂತ ದೊಡ್ಡ ಆಸ್ಪತ್ರೆಯಲ್ಲಿ ಸ್ಕ್ಯಾ‌ಂಗ್‌ ಸೆಂಟರ್‌ನಂತ ಸಮಸ್ಯೆಗಳು ಇನ್ನು ಜೀವಂತವಾಗಿರುವುದು ನಾಚಿಕೇಡಿನ ಸಂಗತಿ ಎಂದು ಆರೋಪಿಸಿದರು.

ಮೆಗ್ಗಾನ್‌ ಆಸ್ಪತ್ರೆಯ ಆಡಳಿತ ವರ್ಗದ ನಿಷ್ಕ್ರೀಯತೆ ಫಲವಾಗಿ ರೇಡಿಯಾಲಜಿಸ್ಟ್‌ಗಳು ಬೇರೆಡೆಗೆ ತೆರಳಿದ್ದಾರೆ. ಇದರಿಂದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸ್ಕ್ಯಾ‌ನಿಂಗ್‌ ಸೌಲಭ್ಯ ಇಲ್ಲದಂತಾಗಿದೆ. ಕೂಡಲೇ ಗಮನಹರಿಸಿ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸ್ಕ್ಯಾ‌ನಿಂಗ್‌ ಸೌಲಭ್ಯ ಕಲ್ಪಿಸಬೇಕು. ಈ ಮೂಲಕ ಬಡರೋಗಿಗಳಿಗೆ ನೆರವಾಗಬೇಕೆಂದು ಒತ್ತಾಯಿಸಿದರು.

ಈ ಸಂದರ್ಭ ಅಧ್ಯಯನ ಕೇಂದ್ರದ ಮುಖಂಡರಾದ ಕಲ್ಲೂರು ಮೇಘರಾಜ್‌, ಕೋಡ್ಲು ಶ್ರೀಧರ್‌, ಕಲ್ಲೂರು ಈರಪ್ಪ, ಹೊನ್ನಮ್ಮ ಮಾಲತೇಶ್‌ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ