ಆ್ಯಪ್ನಗರ

ಶಿಕ್ಷಣದ ಮೂಲಕ ಸಂಸ್ಕಾರ ನೀಡಿ

ಪ್ರತಿಯೊಬ್ಬರೂ ಶಿಕ್ಷ ಣದ ಮೂಲಕ ಮಕ್ಕಳಿಗೆ ಸಂಸ್ಕಾರ ನೀಡಿ, ಅವರು ತಮ್ಮ ಬದುಕನ್ನು ತಾವು ಕಟ್ಟಿಕೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಆದಿಚುಂಚನಗಿರಿ ಶಿವಮೊಗ್ಗ ಶಾಖಾಮಠದ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹೇಳಿದರು.

Vijaya Karnataka 13 Feb 2019, 5:00 am
ಸೊರಬ: ಪ್ರತಿಯೊಬ್ಬರೂ ಶಿಕ್ಷ ಣದ ಮೂಲಕ ಮಕ್ಕಳಿಗೆ ಸಂಸ್ಕಾರ ನೀಡಿ, ಅವರು ತಮ್ಮ ಬದುಕನ್ನು ತಾವು ಕಟ್ಟಿಕೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಆದಿಚುಂಚನಗಿರಿ ಶಿವಮೊಗ್ಗ ಶಾಖಾಮಠದ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹೇಳಿದರು.
Vijaya Karnataka Web SMR-11srbp4


ತಾಲೂಕಿನ ನಿಸರಾಣಿಯಲ್ಲಿ ತಾಲೂಕು ಒಕ್ಕಲಿಗರ ಸಂಘ ಸೋಮವಾರ ಹಮ್ಮಿಕೊಂಡಿದ್ದ ಸತ್ಯನಾರಾಯಣಪೂಜೆ ಹಾಗೂ ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ ಹಾಗೂ ಮಾರಿಕಾಂಬ ದೇವಸ್ಥಾನದ ಅಡಿಗಲ್ಲು ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಶಿಕ್ಷ ಣದ ಮೂಲಕ ಸಮಾಜವನ್ನು ಅಭಿವೃದ್ಧಿಪಡಿಸಬಹುದು. ಸಮಾಜ ಕಟ್ಟುವಲ್ಲಿ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು. ತಾಲೂಕಿನಲ್ಲಿ ಒಕ್ಕಲಿಗ ಸಮಾಜ ಹಿಂದುಳಿದಿದೆ. ಹಿಂದುಳಿದ ಮಕ್ಕಳಿಗೆ ನಮ್ಮ ಮಠದಿಂದ ಶಿಕ್ಷ ಣ ಕೊಡಲು ಸಿದ್ಧರಿದ್ದು, ಆಸಕ್ತರು ಮುಂದಾಗಬೇಕು. ಅಲ್ಲದೆ ಸಮಾಜದ ಅಭಿವೃದ್ಧಿ ಕೆಲಸಗಳಿಗೆ ಶ್ರೀಮಠದ ಸಹಕಾರ ಎಂದಿಗೂ ಇರುತ್ತದೆ ಎಂದರು.

ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀಮಂಗಳನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಈ ಸಂದರ್ಭ ನಾಟಿವೈದ್ಯರು, ವಕೀಲರು ಹಾಗೂ ಸಮಾಜದ ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸಲಾಯಿತು. ಸಮಾಜದ ಗೌರವಾಧ್ಯಕ್ಷ ಮಂಜಪ್ಪ ಡಿ.ಬಿ. ಬನದಕೊಪ್ಪ ಅಧ್ಯಕ್ಷ ತೆ ವಹಿಸಿದ್ದರು.

ಸಮಾಜದ ಅಧ್ಯಕ್ಷ ಉಮೇಶ ವಿ. ಭದ್ರಾಪುರ, ಎಪಿಎಂಸಿ ಅಧ್ಯಕ್ಷ ಕೆ. ಅಜ್ಜಪ್ಪ, ಜಿ.ಪಂ. ಸದಸ್ಯೆ ತಾರಾ ಶಿವಾನಂದಪ್ಪ, ಜ್ಯೋತಿ ನಾರಾಯಣ, ಅನಿತಾ ಚಂದ್ರಪ್ಪ, ಕೃಷ್ಣಪ್ಪ, ಗುಂಡಪ್ಪ ಸಾಗರ, ಭೈರಪ್ಪ, ಉಮಾಕಾಂತ, ಶ್ರೀಧರ, ಇಂದಿರಾಗೌಡ, ಶಶಿಕುಮಾರ ನಲ್ಲೂರು ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ