ಶಿವಮೊಗ್ಗ: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಖಾಕಿ ಕಾವಲು ಕಲ್ಪಿಸಲಾಗಿದೆ.
ಮಾರ್ಚ್ 1ರಿಂದ 18ರವರೆಗೆ ನಡೆಯಲಿರುವ ಪರೀಕ್ಷೆಗೆ ಜಿಲ್ಲೆಯಲ್ಲಿ 18,666 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಇದರಲ್ಲಿ 16,069 ಹೊಸಬರು, 1,533 ಪುನರಾವರ್ತಿತ ಹಾಗೂ 1,064 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕಳೆದ ಸಾಲಿನಲ್ಲಿ 19,081 ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದರು. ಈ ಸಲ ಸಂಖ್ಯೆಯಲ್ಲಿ ಅಲ್ಪಪ್ರಮಾಣದ ಇಳಿಕೆಯಾಗಿದೆ. 8,142 ಬಾಲಕರು ಮತ್ತು 10,524 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ.
ಪಾರದರ್ಶಕ ಮತ್ತು ದೋಷರಹಿತವಾಗಿ ಪರೀಕ್ಷೆ ನಡೆಸುವುದಕ್ಕೆ ಒತ್ತು ನೀಡಲಾಗುತ್ತಿದ್ದು, ಹಲವು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾ ವ್ಯಾಪ್ತಿಯ ಪರೀಕ್ಷೆ ಕೇಂದ್ರಗಳಲ್ಲಿ ಅವ್ಯವಹಾರ ನಡೆಯದಂತೆ ಮೇಲುಸ್ತುವಾರಿ ಮತ್ತು ಮಾರ್ಗದರ್ಶಕರನ್ನು ನೇಮಿಸಿ ಅವರಿಗೆ ಜವಾಬ್ದಾರಿ ವಹಿಸಲಾಗಿದೆ.
ಉಪನ್ಯಾಸಕರು, ಪ್ರಾಚಾರ್ಯರು ಸೇರಿ 700 ಜನರನ್ನು ಪರೀಕ್ಷೆ ಕರ್ತವ್ಯಕ್ಕೆ ನಿಯುಕ್ತಿಗೊಳಿಸಲಾಗಿದೆ. ಜಿಲ್ಲಾಮಟ್ಟದಲ್ಲಿ ಕೇಂದ್ರಗಳಿಗೆ ಭೇಟಿ ನೀಡಲು ವಿಚಕ್ಷಣ ಜಾಗೃತ ದಳಗಳನ್ನು ರಚಿಸಲಾಗಿದೆ. ಇವರು ಪರೀಕ್ಷೆ ಕೇಂದ್ರಗಳ ಮೇಲೆ ನಿಗಾ ಇಡಲಿದ್ದಾರೆ. ಜತೆಗೆ, ಪಾರದರ್ಶಕತೆಗೆ ಒತ್ತು ನೀಡಲಿದ್ದಾರೆ. ಯಾವುದೇ ಅವ್ಯವಹಾರ ನಡೆಯುತ್ತಿರುವುದು ಗಮನಕ್ಕೆ ಬಂದರೆ ಕ್ರಮಕೈಗೊಳ್ಳಲಿದ್ದಾರೆ. ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಸಮೀಪದಲ್ಲಿರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಸೂಚಿಸಲಾಗಿದೆ.
* 33 ಪರೀಕ್ಷೆ ಕೇಂದ್ರ: ಜಿಲ್ಲೆಯಲ್ಲಿ ಒಟ್ಟು 33 ಪರೀಕ್ಷೆ ಕೇಂದ್ರಗಳನ್ನು ಗುರುತಿಸಲಾಗಿದೆ. ಶಿವಮೊಗ್ಗದಲ್ಲಿ 12, ಭದ್ರಾವತಿ 6, ತೀರ್ಥಹಳ್ಳಿ, ಶಿಕಾರಿಪುರದಲ್ಲಿ ತಲಾ 3, ಹೊಸನಗರ, ಸೊರಬ ತಲಾ 2, ಸಾಗರ 5 ಕೇಂದ್ರಗಳಿವೆ.
==============
(ಟೇಬಲ್)-ವಿದ್ಯಾರ್ಥಿಗಳ ಸಂಖ್ಯೆ
ವಿಷಯ 2017-18 2018-19
ಕಲಾ 4,991 5,244
ವಾಣಿಜ್ಯ 7,344 6,690
ವಿಜ್ಞಾನ 6,746 6,432
ಒಟ್ಟು 19,081 18,666
==============
ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಲ್ ಟಿಕೆಟ್ ತೋರಿಸಿದರೆ, ಅವರಿಗೆ ಪರೀಕ್ಷೆ ಕೇಂದ್ರವರೆಗೆ ಉಚಿತವಾಗಿ ಬಿಡುವಂತೆ ಎಲ್ಲ ಸಿಬ್ಬಂದಿಗೆ ಮಾಹಿತಿ ನೀಡಲಾಗಿದೆ. ಅದರಂತೆ, ಮಕ್ಕಳಿಗೆ ತೊಂದರೆ ಆಗದಂತೆ ಬಸ್ ಸೇವೆ ನೀಡಲಾಗುವುದು.
-ಎಚ್.ಎಸ್. ಸಿದ್ದೇಶ್, ನಿಲ್ದಾಣ ಅಧಿಕಾರಿ, ಶಿವಮೊಗ್ಗ
==============
ಪರೀಕ್ಷೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯ 33 ಕೇಂದ್ರಗಳಲ್ಲಿ ಮಾ.1ರಿಂದ ಪರೀಕ್ಷೆಗಳು ನಡೆಯಲಿದ್ದು, ಗೊಂದಲಗಳಾಗದಂತೆ ಎಚ್ಚರಿಕೆ ವಹಿಸಲಾಗಿದೆ.
ಎಲ್ಲ ವಿದ್ಯಾರ್ಥಿಗಳು ಸರಿಯಾಗಿ ಪರೀಕ್ಷೆ ಎದುರಿಸಲಿ ಗುಡ್ಲಕ್.
- ಮಹ್ಮದ್ ಇಮ್ತಿಯಾಜ್, ಉಪ ನಿರ್ದೇಶಕರು, ಪ.ಪೂ. ಶಿಕ್ಷಣ ಇಲಾಖೆ
===============
ಮಾರ್ಚ್ 1ರಿಂದ 18ರವರೆಗೆ ನಡೆಯಲಿರುವ ಪರೀಕ್ಷೆಗೆ ಜಿಲ್ಲೆಯಲ್ಲಿ 18,666 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಇದರಲ್ಲಿ 16,069 ಹೊಸಬರು, 1,533 ಪುನರಾವರ್ತಿತ ಹಾಗೂ 1,064 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕಳೆದ ಸಾಲಿನಲ್ಲಿ 19,081 ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದರು. ಈ ಸಲ ಸಂಖ್ಯೆಯಲ್ಲಿ ಅಲ್ಪಪ್ರಮಾಣದ ಇಳಿಕೆಯಾಗಿದೆ. 8,142 ಬಾಲಕರು ಮತ್ತು 10,524 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ.
ಪಾರದರ್ಶಕ ಮತ್ತು ದೋಷರಹಿತವಾಗಿ ಪರೀಕ್ಷೆ ನಡೆಸುವುದಕ್ಕೆ ಒತ್ತು ನೀಡಲಾಗುತ್ತಿದ್ದು, ಹಲವು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾ ವ್ಯಾಪ್ತಿಯ ಪರೀಕ್ಷೆ ಕೇಂದ್ರಗಳಲ್ಲಿ ಅವ್ಯವಹಾರ ನಡೆಯದಂತೆ ಮೇಲುಸ್ತುವಾರಿ ಮತ್ತು ಮಾರ್ಗದರ್ಶಕರನ್ನು ನೇಮಿಸಿ ಅವರಿಗೆ ಜವಾಬ್ದಾರಿ ವಹಿಸಲಾಗಿದೆ.
ಉಪನ್ಯಾಸಕರು, ಪ್ರಾಚಾರ್ಯರು ಸೇರಿ 700 ಜನರನ್ನು ಪರೀಕ್ಷೆ ಕರ್ತವ್ಯಕ್ಕೆ ನಿಯುಕ್ತಿಗೊಳಿಸಲಾಗಿದೆ. ಜಿಲ್ಲಾಮಟ್ಟದಲ್ಲಿ ಕೇಂದ್ರಗಳಿಗೆ ಭೇಟಿ ನೀಡಲು ವಿಚಕ್ಷಣ ಜಾಗೃತ ದಳಗಳನ್ನು ರಚಿಸಲಾಗಿದೆ. ಇವರು ಪರೀಕ್ಷೆ ಕೇಂದ್ರಗಳ ಮೇಲೆ ನಿಗಾ ಇಡಲಿದ್ದಾರೆ. ಜತೆಗೆ, ಪಾರದರ್ಶಕತೆಗೆ ಒತ್ತು ನೀಡಲಿದ್ದಾರೆ. ಯಾವುದೇ ಅವ್ಯವಹಾರ ನಡೆಯುತ್ತಿರುವುದು ಗಮನಕ್ಕೆ ಬಂದರೆ ಕ್ರಮಕೈಗೊಳ್ಳಲಿದ್ದಾರೆ. ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಸಮೀಪದಲ್ಲಿರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಸೂಚಿಸಲಾಗಿದೆ.
* 33 ಪರೀಕ್ಷೆ ಕೇಂದ್ರ: ಜಿಲ್ಲೆಯಲ್ಲಿ ಒಟ್ಟು 33 ಪರೀಕ್ಷೆ ಕೇಂದ್ರಗಳನ್ನು ಗುರುತಿಸಲಾಗಿದೆ. ಶಿವಮೊಗ್ಗದಲ್ಲಿ 12, ಭದ್ರಾವತಿ 6, ತೀರ್ಥಹಳ್ಳಿ, ಶಿಕಾರಿಪುರದಲ್ಲಿ ತಲಾ 3, ಹೊಸನಗರ, ಸೊರಬ ತಲಾ 2, ಸಾಗರ 5 ಕೇಂದ್ರಗಳಿವೆ.
==============
(ಟೇಬಲ್)-ವಿದ್ಯಾರ್ಥಿಗಳ ಸಂಖ್ಯೆ
ವಿಷಯ 2017-18 2018-19
ಕಲಾ 4,991 5,244
ವಾಣಿಜ್ಯ 7,344 6,690
ವಿಜ್ಞಾನ 6,746 6,432
ಒಟ್ಟು 19,081 18,666
==============
ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಲ್ ಟಿಕೆಟ್ ತೋರಿಸಿದರೆ, ಅವರಿಗೆ ಪರೀಕ್ಷೆ ಕೇಂದ್ರವರೆಗೆ ಉಚಿತವಾಗಿ ಬಿಡುವಂತೆ ಎಲ್ಲ ಸಿಬ್ಬಂದಿಗೆ ಮಾಹಿತಿ ನೀಡಲಾಗಿದೆ. ಅದರಂತೆ, ಮಕ್ಕಳಿಗೆ ತೊಂದರೆ ಆಗದಂತೆ ಬಸ್ ಸೇವೆ ನೀಡಲಾಗುವುದು.
-ಎಚ್.ಎಸ್. ಸಿದ್ದೇಶ್, ನಿಲ್ದಾಣ ಅಧಿಕಾರಿ, ಶಿವಮೊಗ್ಗ
==============
ಪರೀಕ್ಷೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯ 33 ಕೇಂದ್ರಗಳಲ್ಲಿ ಮಾ.1ರಿಂದ ಪರೀಕ್ಷೆಗಳು ನಡೆಯಲಿದ್ದು, ಗೊಂದಲಗಳಾಗದಂತೆ ಎಚ್ಚರಿಕೆ ವಹಿಸಲಾಗಿದೆ.
ಎಲ್ಲ ವಿದ್ಯಾರ್ಥಿಗಳು ಸರಿಯಾಗಿ ಪರೀಕ್ಷೆ ಎದುರಿಸಲಿ ಗುಡ್ಲಕ್.
- ಮಹ್ಮದ್ ಇಮ್ತಿಯಾಜ್, ಉಪ ನಿರ್ದೇಶಕರು, ಪ.ಪೂ. ಶಿಕ್ಷಣ ಇಲಾಖೆ
===============