ಆ್ಯಪ್ನಗರ

ಕಂದಾಯ ನಿರೀಕ್ಷ ಕನಿಗೆ 1ವರ್ಷ ಸಜೆ

ಜಮೀನು ಪೋಡಿ ಮಾಡಿಕೊಡಲು ರೈತರಿಂದ ಲಂಚ ಪಡೆದು ಲೋಕಾಯುಕ್ತರಿಗೆ ಸಿಕ್ಕಿಬಿದ್ದಿದ್ದ ಕಂದಾಯ ನಿರೀಕ್ಷಕನಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 1 ವರ್ಷ ಸಜೆ ಮತ್ತು 50ಸಾವಿರ ರೂ. ದಂಡ ವಿಧಿಸಿ ಬುಧವಾರ ತೀರ್ಪು ನೀಡಿದೆ.

Vijaya Karnataka 8 Feb 2019, 5:00 am
ಶಿವಮೊಗ್ಗ : ಜಮೀನು ಪೋಡಿ ಮಾಡಿಕೊಡಲು ರೈತರಿಂದ ಲಂಚ ಪಡೆದು ಲೋಕಾಯುಕ್ತರಿಗೆ ಸಿಕ್ಕಿಬಿದ್ದಿದ್ದ ಕಂದಾಯ ನಿರೀಕ್ಷಕನಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 1 ವರ್ಷ ಸಜೆ ಮತ್ತು 50ಸಾವಿರ ರೂ. ದಂಡ ವಿಧಿಸಿ ಬುಧವಾರ ತೀರ್ಪು ನೀಡಿದೆ.
Vijaya Karnataka Web punishment for revenue inspector
ಕಂದಾಯ ನಿರೀಕ್ಷ ಕನಿಗೆ 1ವರ್ಷ ಸಜೆ


ಸಾಗರ ಕಸಬ ಹೋಬಳಿ ಕಂದಾಯ ನಿರೀಕ್ಷಕ ಆನಂದ ನಾಯ್ಕ್‌ ಶಿಕ್ಷೆಗೆ ಗುರಿಯಾದ ಅಧಿಕಾರಿ. ಇವರು 2011ನೆ ಜೂನ್‌ನಲ್ಲಿ ಶಿಕಾರಿಪುರದಲ್ಲಿ ಸೇವೆ ಸಲ್ಲಿಸುವಾಗ ಸಂಜೀವ ನಾಯ್ಡು ಎಂಬುವರಿಂದ ಜಮೀನಿನ ಪೋಡಿ ಮಾಡಿಕೊಡಲು 5ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದರು.

ಪ್ರಕರಣದ ವಿಚಾರಣೆ ನಡಿಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪ್ರಭಾವತಿ ಎಂ. ಹಿರೇಮಠ್‌ ಅವರು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಲೋಕಾಯುಕ್ತದ ಪರವಾಗಿ ಸಾರ್ವಜನಿಕ ಅಭಿಯೋಜಕರಾದ ಬಿ.ವಿ.ಗೀತಾ ಶಿವಮೂರ್ತಿ ವಾದಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ