ಆ್ಯಪ್ನಗರ

ಪಂಜಾಬ್‌ ಮಾದರಿ ನೌಕರರ ಕಾಯಂಗೊಳಿಸಿ

ಹೊರಗುತ್ತಿಗೆ ಪದ್ಧತಿ ರದ್ದು ಪಡಿಸಿ, ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಎಲ್ಲನೌಕರರನ್ನು ಕಾಯಂಗೊಳಿಸಬೇಕೆಂದು ಜಿಲ್ಲಾಧಿಧಿಕಾರಿ ಕಚೇರಿ ಎದುರು ಸೋಮವಾರ ರಾಜ್ಯ ಸರಕಾರಿ ದಿನಗೂಲಿ ನೌಕರರ ಸಂಘ ಪ್ರತಿಭಟನೆ ನಡೆಸಿತು.

Vijaya Karnataka 14 Jan 2020, 5:00 am
ಶಿವಮೊಗ್ಗ: ಹೊರಗುತ್ತಿಗೆ ಪದ್ಧತಿ ರದ್ದು ಪಡಿಸಿ, ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಎಲ್ಲನೌಕರರನ್ನು ಕಾಯಂಗೊಳಿಸಬೇಕೆಂದು ಜಿಲ್ಲಾಧಿಧಿಕಾರಿ ಕಚೇರಿ ಎದುರು ಸೋಮವಾರ ರಾಜ್ಯ ಸರಕಾರಿ ದಿನಗೂಲಿ ನೌಕರರ ಸಂಘ ಪ್ರತಿಭಟನೆ ನಡೆಸಿತು.
Vijaya Karnataka Web 13SOM21_46
ಶಿವಮೊಗ್ಗದ ಜಿಲ್ಲಾಧಿಧಿಕಾರಿ ಕಚೇರಿ ಎದುರು ಸೋಮವಾರ ರಾಜ್ಯ ಸರಕಾರಿ ದಿನಗೂಲಿ ನೌಕರರ ಸಂಘದಿಂದ ಪ್ರತಿಭಟನೆ ನಡೆಯಿತು.


ಹೊರಗುತ್ತಿಗೆ ಪದ್ಧತಿ ರದ್ದು ಮಾಡಬೇಕು, ಈಗ ಹೊರಗುತ್ತಿಗೆ ಮೇಲೆ ಕೆಲಸ ಮಾಡುತ್ತಿರುವ ಎಲ್ಲನೌಕರರನ್ನು ಕಾಯಂಗೊಳಿಸಬೇಕು ಮತ್ತು ಸೌಲಭ್ಯಗಳನ್ನು ವಿಸ್ತರಿಸಬೇಕು, ತುಟ್ಟಿಭತ್ಯೆ ಹಾಗೂ ಮನೆಬಾಡಿಗೆ ಭತ್ಯೆ ಹೆಚ್ಚಿಸಬೇಕು, ಖಾಲಿ ಹುದ್ದೆಗಳಿಗೆ ಇವರನ್ನೇ ನೇಮಿಸಬೇಕೆಂದು ಆಗ್ರಹಿಸಿದರು.

ದಿನಗೂಲಿ ನೌಕರರಾಗಿದ್ದು ನಿವೃತ್ತಿಯಾದವರಿಗೆ 8 ವರ್ಷಗಳ ಗರಿಷ್ಟ ಹೆಚ್ಚುವರಿ ಅರ್ಹತೆ ನೀಡಬೇಕು. ಹೊಸ ಪಿಂಚಣಿಯಂತೆ ವೇತನ ನೀಡಬೇಕು, ವ್ಯತ್ಯಾಸದ ಬಾಕಿ ಹಣ ತುಂಬಬೇಕು. ಇತ್ತೀಚೆಗೆ ಆರೋಗ್ಯ ಇಲಾಖೆಯಲ್ಲಿವಜಾ ಮಾಡಿರುವ ನೌಕರರನ್ನು ಮರು ನೇಮಕ ಮಾಡಿಕೊಳ್ಳಬೇಕು, ಪಂಜಾಬ್‌ ಮಾದರಿಯಲ್ಲಿಎಲ್ಲನೌಕರರನ್ನು ಕಾಯಂಗೊಳಿಸಬೇಕೆಂದು ಆಗ್ರಹಿಸಿದರು.

ಈ ಸಂದರ್ಭ ಜಿಲ್ಲಾಘಟಕದ ಅಧ್ಯಕ್ಷ ಎಂ.ಆರ್‌.ದೊರೆಸ್ವಾಮಿ, ಪ್ರಮುಖರಾದ ಆರ್‌.ಚಂದ್ರಶೇಖರ್‌, ಕೆ.ಎಂ.ಅಣ್ಣಪ್ಪ, ಲೀಲಾ, ಶಿವನಗೌಡ, ಜಯಪ್ಪ, ರವಿ, ಮೂಕಾಂಬಿಕಾ, ನವೀನ್‌, ಸುನಿಲ್‌, ನಾಗರಾಜ್‌, ರುದ್ರೇಶ್‌ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ