ಶಿವಮೊಗ್ಗ: ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂದು ಬೀಗುತ್ತಿದ್ದ ಬಿಜೆಪಿಯವರಿಗೆ ಸ್ಥಳೀಯ ಸಂಸ್ಥೆ ಚುನಾವಣೆ ಮೂಲಕ ತಕ್ಕ ಉತ್ತರವನ್ನು ಜನರೇ ನೀಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್ ಹೇಳಿದರು.
ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿ.ಎಸ್.ಯಡಿಯೂರಪ್ಪ, ಬಿ.ವೈ.ರಾಘವೇಂದ್ರ, ಕೆ.ಎಸ್.ಈಶ್ವರಪ್ಪ ಸೇರಿದಂತೆ ಬಿಜೆಪಿ ನಾಯಕರು ಜಿಲ್ಲೆಯಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ. ನಮ್ಮ ವಿರುದ್ಧ ಸ್ಪರ್ಧೆ ಮಾಡದೆ ಇರುವ ಹಾಗೆ ಕಾಂಗ್ರೆಸ್ ಪಕ್ಷವನ್ನು ಮುಕ್ತಮಾಡುತ್ತೇವೆ ಎಂದು ಬೀಗುತ್ತಿದ್ದರು. ಆದರೆ, ಸ್ಥಳೀಯ ಸಂಸ್ಥೆಯ ಚುನಾವಣಾ ಫಲಿತಾಂಶ ಅವರಿಗೆ ತಕ್ಕ ಉತ್ತರ ನೀಡುವ ಮೂಲಕ ಬಿಜೆಪಿಯಿಂದ ಕಾಂಗ್ರೆಸ್ ಮುಕ್ತ ಸಾಧ್ಯವಿಲ್ಲ ಎಂದು ಮತದಾರರೇ ಸಾರಿ ಹೇಳಿದ್ದಾರೆ ಎಂದು ಕುಟುಕಿದರು.
ಕಾಂಗ್ರೆಸ್ ಎಂದಿಗೂ ನೆಲ ಕಚ್ಚುವುದಿಲ್ಲ. ಅದು ಭದ್ರವಾಗಿ ಬೇರೂರಿದೆ. ಬಿಜೆಪಿ ಗೆಲುವು ತಾತ್ಕಾಲಿಕ ಮಾತ್ರ. ಶಿಕಾರಿಪುರದಲ್ಲಿ ಯಡಿಯೂರಪ್ಪ ಅವರಿಗೆ ಮುಟ್ಟಿನೋಡಿಕೊಳ್ಳುವಂತೆ ಮತದಾರರು ಉತ್ತರ ಕೊಟ್ಟಿದ್ದಾರೆ. ಕೆ.ಎಸ್.ಈಶ್ವರಪ್ಪ ಮುಂತಾದವರು ಇನ್ನಾದರೂ ತಮ್ಮ ಅಹಂಕಾರದ ಮಾತುಗಳನ್ನು ಬಿಡಬೇಕು ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ಮಾತನಾಡಿ, ಶಿಕಾರಿಪುರ ಮತ್ತು ಶಿರಾಳಕೊಪ್ಪದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷ ದ ಮೈತ್ರಿ ಕೂಟಕ್ಕೆ ಸ್ಪಷ್ಟ ಬಹುಮತ ಸಿಕ್ಕಿದ್ದು, ಅಲ್ಲಿ ಅಧಿಕಾರ ಹಿಡಿಯುತ್ತಿದೆ. ಸೊರಬದಲ್ಲಿ ಕೂಡ ಸಮಬಲ ಹೊಂದಿದ್ದು, ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಯತ್ನಿಸಲಾಗುತ್ತಿದೆ ಎಂದರು.
ಬಿ.ಎಸ್.ಯಡಿಯೂರಪ್ಪ ಅವರ ಸ್ವ ಕ್ಷೇತ್ರವಾದ ಶಿಕಾರಿಪುರದಲ್ಲಿಯೇ ಅಲ್ಲಿನ ಜನ ಅವರ ವಿರುದ್ಧ ಮತ ಹಾಕಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಯಡಿಯೂರಪ್ಪ ನವರನ್ನು ನೋಡಿ ಅಲ್ಲಿನ ಜನರು ಮತ ಹಾಕಲಿಲ್ಲ ಎನ್ನುವುದು ಈಗ ಸಾಬೀತಾಗಿದೆ. ಮೋದಿ ಅಲೆಯಲ್ಲಿ ಗೆದ್ದು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎನ್ನುವವರಿಗೆ ಸ್ಥಳೀಯ ಚುನಾವಣೆಯಲ್ಲಿ ಜನತೆ ಸ್ಪಷ್ಟ ಉತ್ತರ ನೀಡಿದ್ದಾರೆ ಎಂದರು.
ಚುನಾವಣೆಗಳಲ್ಲಿ ಸೋಲು-ಗೆಲುವು ಅನಿವಾರ್ಯ. ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಕಾಂಗ್ರೆಸಿಗರಲ್ಲಿ ಹುಮ್ಮಸ್ಸು ತಂದಿದೆ. ಎಲ್ಲೆಲ್ಲಿ ನಾವು ಹಿಂದಿದ್ದೇವೆಯೋ ಅಲ್ಲಿ ಸಂಘಟನೆಯನ್ನು ಮತ್ತೆ ಬಲಪಡಿಸಿ ಪಕ್ಷವನ್ನು ಸದೃಢವಾಗಿ ಕಟ್ಟುತ್ತೇವೆ ಎಂದರು.
ಮುಖಂಡರಾದ ಎಂ.ರವಿಕುಮಾರ್, ವಿಶ್ವನಾಥ್ ಕಾಶಿ, ಆರ್.ನಾಗರಾಜ್, ಚಂದ್ರಭೂಪಾಲ್ ಮತ್ತಿತರರು ಇದ್ದರು.
---------
ಇವಿಎಂ ತನಿಖೆ ಆಗಲಿ
ಕಳೆದ ಲೋಕಸಭೆ ಚುನಾವಣೆಯಲ್ಲಿ ದೇಶದ ಹಲವು ರಾಜ್ಯದಲ್ಲಿ ಚಲಾವಣೆ ಆದ ಮತ ಮತ್ತು ಎಣಿಕೆಯಾದ ಮತದಲ್ಲಿ ವ್ಯತ್ಯಾಸ ಕಂಡುಬಂದಿದೆ. ಇದಕ್ಕೆ ಇವಿಎಂನ ತಾಂತ್ರಿಕ ದೋಷ ಕಾರಣ ಇರಬಹುದು ಎನ್ನುವ ಮಾಹಿತಿ ಮಾಧ್ಯಮಗಳಲ್ಲಿ ಹರಿದಾಡಿದೆ. ಹಲವರ ಅನುಮಾನವೂ ಇದೇ ಆಗಿರುವುದರಿಂದ ಚುನಾವಣೆ ಆಯೋಗ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ಮಾಡುವುದು ಒಳಿತು.
-ಎಚ್.ಎಸ್.ಸುಂದರೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ.
ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿ.ಎಸ್.ಯಡಿಯೂರಪ್ಪ, ಬಿ.ವೈ.ರಾಘವೇಂದ್ರ, ಕೆ.ಎಸ್.ಈಶ್ವರಪ್ಪ ಸೇರಿದಂತೆ ಬಿಜೆಪಿ ನಾಯಕರು ಜಿಲ್ಲೆಯಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ. ನಮ್ಮ ವಿರುದ್ಧ ಸ್ಪರ್ಧೆ ಮಾಡದೆ ಇರುವ ಹಾಗೆ ಕಾಂಗ್ರೆಸ್ ಪಕ್ಷವನ್ನು ಮುಕ್ತಮಾಡುತ್ತೇವೆ ಎಂದು ಬೀಗುತ್ತಿದ್ದರು. ಆದರೆ, ಸ್ಥಳೀಯ ಸಂಸ್ಥೆಯ ಚುನಾವಣಾ ಫಲಿತಾಂಶ ಅವರಿಗೆ ತಕ್ಕ ಉತ್ತರ ನೀಡುವ ಮೂಲಕ ಬಿಜೆಪಿಯಿಂದ ಕಾಂಗ್ರೆಸ್ ಮುಕ್ತ ಸಾಧ್ಯವಿಲ್ಲ ಎಂದು ಮತದಾರರೇ ಸಾರಿ ಹೇಳಿದ್ದಾರೆ ಎಂದು ಕುಟುಕಿದರು.
ಕಾಂಗ್ರೆಸ್ ಎಂದಿಗೂ ನೆಲ ಕಚ್ಚುವುದಿಲ್ಲ. ಅದು ಭದ್ರವಾಗಿ ಬೇರೂರಿದೆ. ಬಿಜೆಪಿ ಗೆಲುವು ತಾತ್ಕಾಲಿಕ ಮಾತ್ರ. ಶಿಕಾರಿಪುರದಲ್ಲಿ ಯಡಿಯೂರಪ್ಪ ಅವರಿಗೆ ಮುಟ್ಟಿನೋಡಿಕೊಳ್ಳುವಂತೆ ಮತದಾರರು ಉತ್ತರ ಕೊಟ್ಟಿದ್ದಾರೆ. ಕೆ.ಎಸ್.ಈಶ್ವರಪ್ಪ ಮುಂತಾದವರು ಇನ್ನಾದರೂ ತಮ್ಮ ಅಹಂಕಾರದ ಮಾತುಗಳನ್ನು ಬಿಡಬೇಕು ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ಮಾತನಾಡಿ, ಶಿಕಾರಿಪುರ ಮತ್ತು ಶಿರಾಳಕೊಪ್ಪದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷ ದ ಮೈತ್ರಿ ಕೂಟಕ್ಕೆ ಸ್ಪಷ್ಟ ಬಹುಮತ ಸಿಕ್ಕಿದ್ದು, ಅಲ್ಲಿ ಅಧಿಕಾರ ಹಿಡಿಯುತ್ತಿದೆ. ಸೊರಬದಲ್ಲಿ ಕೂಡ ಸಮಬಲ ಹೊಂದಿದ್ದು, ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಯತ್ನಿಸಲಾಗುತ್ತಿದೆ ಎಂದರು.
ಬಿ.ಎಸ್.ಯಡಿಯೂರಪ್ಪ ಅವರ ಸ್ವ ಕ್ಷೇತ್ರವಾದ ಶಿಕಾರಿಪುರದಲ್ಲಿಯೇ ಅಲ್ಲಿನ ಜನ ಅವರ ವಿರುದ್ಧ ಮತ ಹಾಕಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಯಡಿಯೂರಪ್ಪ ನವರನ್ನು ನೋಡಿ ಅಲ್ಲಿನ ಜನರು ಮತ ಹಾಕಲಿಲ್ಲ ಎನ್ನುವುದು ಈಗ ಸಾಬೀತಾಗಿದೆ. ಮೋದಿ ಅಲೆಯಲ್ಲಿ ಗೆದ್ದು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎನ್ನುವವರಿಗೆ ಸ್ಥಳೀಯ ಚುನಾವಣೆಯಲ್ಲಿ ಜನತೆ ಸ್ಪಷ್ಟ ಉತ್ತರ ನೀಡಿದ್ದಾರೆ ಎಂದರು.
ಚುನಾವಣೆಗಳಲ್ಲಿ ಸೋಲು-ಗೆಲುವು ಅನಿವಾರ್ಯ. ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಕಾಂಗ್ರೆಸಿಗರಲ್ಲಿ ಹುಮ್ಮಸ್ಸು ತಂದಿದೆ. ಎಲ್ಲೆಲ್ಲಿ ನಾವು ಹಿಂದಿದ್ದೇವೆಯೋ ಅಲ್ಲಿ ಸಂಘಟನೆಯನ್ನು ಮತ್ತೆ ಬಲಪಡಿಸಿ ಪಕ್ಷವನ್ನು ಸದೃಢವಾಗಿ ಕಟ್ಟುತ್ತೇವೆ ಎಂದರು.
ಮುಖಂಡರಾದ ಎಂ.ರವಿಕುಮಾರ್, ವಿಶ್ವನಾಥ್ ಕಾಶಿ, ಆರ್.ನಾಗರಾಜ್, ಚಂದ್ರಭೂಪಾಲ್ ಮತ್ತಿತರರು ಇದ್ದರು.
---------
ಇವಿಎಂ ತನಿಖೆ ಆಗಲಿ
ಕಳೆದ ಲೋಕಸಭೆ ಚುನಾವಣೆಯಲ್ಲಿ ದೇಶದ ಹಲವು ರಾಜ್ಯದಲ್ಲಿ ಚಲಾವಣೆ ಆದ ಮತ ಮತ್ತು ಎಣಿಕೆಯಾದ ಮತದಲ್ಲಿ ವ್ಯತ್ಯಾಸ ಕಂಡುಬಂದಿದೆ. ಇದಕ್ಕೆ ಇವಿಎಂನ ತಾಂತ್ರಿಕ ದೋಷ ಕಾರಣ ಇರಬಹುದು ಎನ್ನುವ ಮಾಹಿತಿ ಮಾಧ್ಯಮಗಳಲ್ಲಿ ಹರಿದಾಡಿದೆ. ಹಲವರ ಅನುಮಾನವೂ ಇದೇ ಆಗಿರುವುದರಿಂದ ಚುನಾವಣೆ ಆಯೋಗ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ಮಾಡುವುದು ಒಳಿತು.
-ಎಚ್.ಎಸ್.ಸುಂದರೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ.