ಆ್ಯಪ್ನಗರ

ಶಿವಮೊಗ್ಗದಲ್ಲಿರೈತ ಸಂಘ ಪ್ರತಿಭಟನೆ

ಹೈನುಗಾರಿಕೆ, ಆಹಾರ ಮತ್ತು ಕೃಷಿ ಕ್ಷೇತ್ರಕ್ಕೆ ಮಾರಕವಾಗಿರುವ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ರೆಸೆಪ್‌) ಮುಕ್ತ ವ್ಯಾಪಾರಕ್ಕೆ ಪ್ರಧಾನ ಮಂತ್ರಿ ಸಹಿ ಹಾಕಬಾರದು ಎಂದು ಒತ್ತಾಯಿಸಿ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.

Vijaya Karnataka 1 Nov 2019, 5:00 am
ಶಿವಮೊಗ್ಗ: ಹೈನುಗಾರಿಕೆ, ಆಹಾರ ಮತ್ತು ಕೃಷಿ ಕ್ಷೇತ್ರಕ್ಕೆ ಮಾರಕವಾಗಿರುವ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ರೆಸೆಪ್‌) ಮುಕ್ತ ವ್ಯಾಪಾರಕ್ಕೆ ಪ್ರಧಾನ ಮಂತ್ರಿ ಸಹಿ ಹಾಕಬಾರದು ಎಂದು ಒತ್ತಾಯಿಸಿ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
Vijaya Karnataka Web 31GANESH1_46


ಕೇಂದ್ರ ಸರಕಾರವು ಏಷ್ಯಾದ 15 ದೇಶಗಳೊಂದಿಗೆ ಸೇರಿ ರೆಸೆಪ್‌ ಒಪ್ಪಂದ ಮಾಡಿಕೊಳ್ಳುವ ಸಲುವಾಗಿ ನವೆಂಬರ್‌ನಲ್ಲಿಮಾತುಕತೆ ಮುಗಿಸಿ ಸಹಿ ಹಾಕಿ ಇಲ್ಲಿಯ ರೈತರನ್ನು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿಸಲು ಉತ್ಸುಕದಲ್ಲಿದೆ ಎಂದು ಆರೋಪಿಸಿದರು.

ಈ ಒಪ್ಪಂದ ಮಾಡಿಕೊಳ್ಳುವುದರಿಂದ ಭಾರತದ ಆಹಾರ ಮತ್ತು ಕೃಷಿ ಕ್ಷೇತ್ರವು ನಷ್ಟಕ್ಕೆ ಗುರಿಯಾಗಬೇಕಾಗುತ್ತದೆ. ಅಲ್ಲದೇ, ಈ ಒಪ್ಪಂದದಿಂದ ಬೀಜ ಕಂಪನಿಗಳು ತಮ್ಮ ಬೌದ್ಧಿಕ ಆಸ್ತಿ ಹಕ್ಕುಗಳನ್ನು ರಕ್ಷಿಸಲು ಹೆಚ್ಚಿನ ಅಧಿಕಾರ ಪಡೆಯುವುದರಿಂದ ರೈತರು ಬೀಜಗಳನ್ನು ಉಳಿಸಿ ವಿನಿಮಯ ಮಾಡುವುದು ಅಪರಾಧವಾಗಬಹುದು. ಅಲ್ಲದೇ, ಬೀಜ ಮತ್ತು ಸಸ್ಯ ತಳಿಗಳ ಸಂರಕ್ಷಣೆ ಕಾಯಿದೆ ರದ್ದಾಗಬಹುದು. ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿಗಳು ಯಾವುದೇ ಕಾರಣಕ್ಕೂ ರೆಸೆಪ್‌ ಒಪ್ಪಂದಕ್ಕೆ ಸಹಿ ಹಾಕಬಾರದು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿರೈತಸಂಘದ ರಾಜ್ಯ ಗೌರವಾಧ್ಯಕ್ಷ ಎಚ್‌.ಆರ್‌.ಬಸವರಾಜಪ್ಪ, ಸಂಘದ ಪ್ರಮುಖರಾದ ಕೆ.ರಾಘವೇಂದ್ರ, ಹಿಟ್ಟೂರು ರಾಜು, ಟಿ.ಎಂ.ಚಂದ್ರಪ್ಪ, ಡಿ.ಎಚ್‌.ರಾಮಚಂದ್ರಪ್ಪ, ಪಿ.ಡಿ.ಮಂಜಪ್ಪ, ಇ.ಬಿ.ಜಗದೀಶ್‌, ಎಸ್‌.ಶಿವಮೂರ್ತಿ ಮತ್ತಿತರರು ಹಾಜರಿದ್ದರು.

--
ಸದ್ಯ ಭಾರತ ಹಾಲು ಉತ್ಪಾದನೆ ರಫ್ತು ಮಾಡುವ ಸಾಮರ್ಥ್ಯ ಹೊಂದಿದೆ. ಇಂತಹ ಸಮಯದಲ್ಲಿಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದರೆ ಹಾಲಿನ ಉತ್ಪನ್ನಗಳನ್ನು ತೆರಿಗೆ ರಹಿತವಾಗಿ ಆಮದು ಮಾಡಿಕೊಳ್ಳಲು ಅವಕಾಶ ಸಿಗುವುದರಿಂದ ಇಲ್ಲಿನ ರೈತರು ಸಂಕಷ್ಟ ಅನುಭವಿಸುತ್ತಾರೆ.
-ರಾಜ್ಯ ರೈತ ಸಂಘ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ