ಆ್ಯಪ್ನಗರ

​​​ಸಕ್ರೆಬೈಲು ಆನೆ ಬಿಡಾರದ 'ರಂಗ' ಆನೆ ಕಾಡಾನೆ ದಾಳಿಗೆ ಬಲಿ

ಎಲ್ಲರನ್ನು ತನ್ನ ಆಕರ್ಷಣೆಯಿಂದ ಆಕರ್ಷಿಸುತ್ತಿದ್ದ ರಂಗ ಆನೆ ಕಾಡಾನೆ ದಾಳಿಗೆ ಬಲಿಯಾಗಿದೆ. ಸರಪಳಿಯಿಂದ ಕಟ್ಟಿ ಹಾಕಲಾಗಿದ್ದ ರಂಗನ ಮೇಲೆ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದ್ದು, ಇದರಿಂದ ರಂಗ ಅಸಹಾಯಕನಾಗಿ ದಂತ ತಿವಿತಕ್ಕೆ ಬಲಿಯಾಗಿದ್ದಾನೆ.

Vijaya Karnataka Web 24 Oct 2020, 11:48 am
ಶಿವಮೊಗ್ಗ: ಎಲ್ಲರನ್ನು ಆಕರ್ಷಿಸುತ್ತಿದ್ದ ರಂಗ ಎನ್ನುವ ಆನೆಯೊಂದು ಸಾವನ್ನಪ್ಪಿದೆ. ಸಕ್ರೆಬೈಲು ಆನೆ ಬಿಡಾರದ ಅತ್ಯಂತ ಆಕರ್ಷಣೆಯ ಆನೆ ರಂಗ (35) ಅ.24 ರಂದು ಕಾಡಾನೆ ದಾಳಿಗೆ ಬಲಿಯಾಗಿದೆ.
Vijaya Karnataka Web ಆನೆ ರಂಗ


ತನ್ನ ಮೈಕಟ್ಟಿನಿಂದಲೇ ಎಲ್ಲರನ್ನು ಆಕರ್ಷಿಸಿದ್ದ ರಂಗ, ಎಲ್ಲರ ಪ್ರೀತಿಗೆ ಪಾತ್ರವಾಗಿತ್ತು. ಸಕ್ರೆಬೈಲು ಆನೆ ಬಿಡಾರದಲ್ಲಿ ಇದ್ದ ರಂಗನನ್ನು ಸರಪಳಿಯಲ್ಲಿ ಬಂಧಿಸಲಾಗಿತ್ತು. ಈ ಸಂದರ್ಭದಲ್ಲಿ ಮಧ್ಯರಾತ್ರಿ ಕಾಡಾನೆಯೊಂದು ರಂಗನಿದ್ದ ಬಿಡಾರಕ್ಕೆ ಬಂದಿದೆ.

ಸರಪಳಿಯಿಂದ ಕಟ್ಟಿ ಹಾಕಲಾಗಿದ್ದ ರಂಗನ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಇದರಿಂದ ರಂಗ ಅಸಹಾಯಕನಾಗಿ ದಂತ ತಿವಿತಕ್ಕೆ ಬಲಿಯಾಗಿದ್ದಾನೆ.
ಆನೆಗಳು ಪ್ರೀತಿಯಿಂದ `ನಮಸ್ತೆ' ಹೇಳುವುದು ಹೀಗೆ : ಹೃದಯಸ್ಪರ್ಶಿ ಫೋಟೋವಿದು
ಸಕ್ರೆಬೈಲು ಕ್ಯಾಂಪ್ ನಲ್ಲಿ ಹುಟ್ಟಿದ ರಂಗ ಗೀತಾ ಆನೆಯ ಮರಿಯಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಮತ್ತು ವೈದರ ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ