ಆ್ಯಪ್ನಗರ

ರಥಸಪ್ತಮಿ ರಥೋತ್ಸವ ಆಚರಣೆ

ಹಳೇನಗರದ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದಲ್ಲಿ ಮಂಗಳವಾರ ಬೆಳಗ್ಗೆ ರಥಸಪ್ತಮಿ ಪ್ರಯುಕ್ತ ರಥೋತ್ಸವ ಏರ್ಪಡಿಸಲಾಗಿತ್ತು.

Vijaya Karnataka 13 Feb 2019, 5:00 am
ಭದ್ರಾವತಿ: ಹಳೇನಗರದ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದಲ್ಲಿ ಮಂಗಳವಾರ ಬೆಳಗ್ಗೆ ರಥಸಪ್ತಮಿ ಪ್ರಯುಕ್ತ ರಥೋತ್ಸವ ಏರ್ಪಡಿಸಲಾಗಿತ್ತು.
Vijaya Karnataka Web SMR-12BDVT5


ಮೂಲದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಗರುಡಾರೂಢ ಭೂದೇವಿ, ಶ್ರೀದೇವಿ ಸಹಿತನಾದ ಶ್ರೀನಿವಾಸನ ಉತ್ಸವಮೂರ್ತಿಯನ್ನು ಪುಷ್ಪಾಲಂಕೃತವಾದ ಚಿಕ್ಕರಥದಲ್ಲಿರಿಸಿ ರಥಬೀದಿಯಲ್ಲಿ ರಥೋತ್ಸವ ನಡೆಸಲಾಯಿತು.

ಭಕ್ತಾದಿಗಳು ಮನೆಮುಂದೆ ರಂಗವಲ್ಲಿ ಹಾಕಿ ಸ್ವಾಮಿಯ ರಥವನ್ನು ಸ್ವಾಗತಿಸುವ ಮೂಲಕ ಹಣ್ಣುಕಾಯಿ ಸಮರ್ಪಿಸಿ ಭಕ್ತಿ ಮೆರೆದರು. ಇದೇ ಸಂದರ್ಭದಲ್ಲಿ ಭಕ್ತಾದಿಗಳು ಉಚ್ಛಸ್ವರದಲ್ಲಿ ಗೋವಿಂದ ನಾಮಸ್ಮರಣೆ ಮಾಡುತ್ತಾ ರಥವನ್ನು ಎಳೆದರು.

ದೇವಾಲಯಕ್ಕೆ ರಥ ಹಿಂದಿರುಗಿಬಂದ ನಂತರ ಅಷ್ಠಾವದಾನ ಸೇವೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ