ಆ್ಯಪ್ನಗರ

ಪೌರ ಕಾರ್ಮಿಕನ ಮೇಲೆ ರಾಡ್‌ನಿಂದ ಹಲ್ಲೆ

ಪ್ಲಾಸ್ಟಿಕ್‌ ಬಳಸುತ್ತಿದ್ದ ಅಂಗಡಿಯೊಂದರ ಮೇಲೆ ಮಹಾನಗರ ಪಾಲಿಕೆ ಸಿಬ್ಬಂದಿ ಗುರುವಾರ ದಾಳಿ ನಡೆಸಿದ್ದು, ಈ ವೇಳೆ ವ್ಯಕ್ತಿಯೊಬ್ಬರು ರಾಡ್‌ನಿಂದ ಪೌರ ಕಾರ್ಮಿಕನ ಮೇಲೆ ಮಾಡಿದ್ದಾನೆ. ವಿನೋಬನಗರ ಪೊಲೀಸ್‌ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

Vijaya Karnataka 15 Nov 2019, 5:00 am
ಶಿವಮೊಗ್ಗ: ಪ್ಲಾಸ್ಟಿಕ್‌ ಬಳಸುತ್ತಿದ್ದ ಅಂಗಡಿಯೊಂದರ ಮೇಲೆ ಮಹಾನಗರ ಪಾಲಿಕೆ ಸಿಬ್ಬಂದಿ ಗುರುವಾರ ದಾಳಿ ನಡೆಸಿದ್ದು, ಈ ವೇಳೆ ವ್ಯಕ್ತಿಯೊಬ್ಬರು ರಾಡ್‌ನಿಂದ ಪೌರ ಕಾರ್ಮಿಕನ ಮೇಲೆ ಮಾಡಿದ್ದಾನೆ. ವಿನೋಬನಗರ ಪೊಲೀಸ್‌ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.
Vijaya Karnataka Web rawd attack on civilian worker
ಪೌರ ಕಾರ್ಮಿಕನ ಮೇಲೆ ರಾಡ್‌ನಿಂದ ಹಲ್ಲೆ


ನಿಷೇಧದ ಮಧ್ಯೆಯೂ ಕದ್ದುಮುಚ್ಚಿ ನಗರದೆಲ್ಲೆಡೆ ಪ್ಲಾಸ್ಟಿಕ್‌ ಬಳಕೆ ಮಾಡಲಾಗುತ್ತಿದೆ. ಇದರ ವಿರುದ್ಧ ಜಿಲ್ಲಾಡಳಿತ ಸಮರ ಸಾರಿದ್ದು, ಪಾಲಿಕೆಯಿಂದ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ, ವಿನೋಬ ನಗರ ಚೌಕಿ ಬಳಿಯ ಬಟ್ಟೆ ಅಂಗಡಿಯೊಂದರ ಮೇಲೆ ದಾಳಿ ಮಾಡಲಾಗಿದೆ. ಆಗ ಮಾಲೀಕರು ಅವಾಚ್ಯವಾಗಿ ಬೈಯ್ದು, ದಾಳಿ ಮಾಡಿದ್ದಾರೆ. ಗಾಯಗೊಂಡ ಪೌರ ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

460 ಕೆಜಿ ಪ್ಲಾಸ್ಟಿಕ್‌ ಜಪ್ತಿ
ಬುಧವಾರ ಮತ್ತು ಗುರುವಾರ ನಡೆದ ಕಾರ್ಯಾಚರಣೆಯಲ್ಲಿಒಟ್ಟು 460 ಕೆಜಿ ಪ್ಲಾಸ್ಟಿಕ್‌ ವಶಕ್ಕೆ ಪಡೆಯಲಾಗಿದೆ.

ಬುಧವಾರ ರಾತ್ರಿ 60 ಕೆಜಿ ಹಾಗೂ ಗುರುವಾರ ಬೆಳಗ್ಗೆಯಿಂದ ಗಾಂಧಿ ಬಜಾರ್‌ (370 ಕೆಜಿ), ಬಿಎಚ್‌ ರಸ್ತೆಯಲ್ಲಿ30 ಕೆಜಿ ಸೇರಿ ಒಟ್ಟು 400 ಕೆಜಿ ಜಪ್ತಿ ಮಾಡಲಾಗಿದೆ. ದಾಳಿ ನಿರಂತರವಾಗಿ ನಡೆಯಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ