ಆ್ಯಪ್ನಗರ

ರಾಜ್ಯಪಾಲ ಹುದ್ದೆ ನಿರ್ವಹಣೆಗೆ ಸಿದ್ಧ: ಡಿಎಚ್‌ಎಸ್‌

ಯಾವುದೇ ಹುದ್ದೆಯ ಆಕಾಂಕ್ಷಿ ನಾನಲ್ಲ. ಆದರೆ, ಪಕ್ಷ ತಮ್ಮನ್ನು ಗುರುತಿಸಿ ರಾಜ್ಯಪಾಲರ ಹುದ್ದೆ ನೀಡಿದರೆ ನಿರ್ವಹಿಸಲು ಸಿದ್ಧನಿದ್ದೇನೆ ಎಂದು ಸಭಾಪತಿ ಡಿ.ಎಚ್‌.ಶಂಕರ ಮೂರ್ತಿ ಹೇಳಿದರು.

Vijaya Karnataka 9 Jun 2018, 5:00 am
ಶಿವಮೊಗ್ಗ : ಯಾವುದೇ ಹುದ್ದೆಯ ಆಕಾಂಕ್ಷಿ ನಾನಲ್ಲ. ಆದರೆ, ಪಕ್ಷ ತಮ್ಮನ್ನು ಗುರುತಿಸಿ ರಾಜ್ಯಪಾಲರ ಹುದ್ದೆ ನೀಡಿದರೆ ನಿರ್ವಹಿಸಲು ಸಿದ್ಧನಿದ್ದೇನೆ ಎಂದು ಸಭಾಪತಿ ಡಿ.ಎಚ್‌.ಶಂಕರ ಮೂರ್ತಿ ಹೇಳಿದರು.
Vijaya Karnataka Web ready to manage governor post dhs
ರಾಜ್ಯಪಾಲ ಹುದ್ದೆ ನಿರ್ವಹಣೆಗೆ ಸಿದ್ಧ: ಡಿಎಚ್‌ಎಸ್‌


ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ತಮ್ಮ ವಿಧಾನಪರಿಷತ್‌ ಸದಸ್ಯತ್ವ ಜೂನ್‌ನಲ್ಲಿ ಮುಗಿಯಲಿದೆ. ತಾವು ಈ ಭಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೆ. ಅದರಂತೆ ನಡೆದುಕೊಂಡಿದ್ದೇನೆ. ಆದರೆ, ಸಾರ್ವಜನಿಕ ಕ್ಷೇತ್ರ ಮತ್ತು ರಾಜಕೀಯ ನಿವೃತ್ತಿ ಘೋಷಿಸಿರಲಿಲ್ಲ. ನನಗೆ ಪಕ್ಷ ರಾಜ್ಯಪಾಲರ ಹುದ್ದೆಗೆ ಆಯ್ಕೆ ಮಾಡಿದಲ್ಲಿ ನಿರ್ವಹಿಸಲು ಸಿದ್ಧನಿದ್ದೇನೆ ಎಂದರು.

ತಾವು ಯೋಜನಾ ಆಯೋಗದ ಅಧ್ಯಕ್ಷ , ಪ್ರತಿಪಕ್ಷ ನಾಯಕನಾಗಿ ಈಗ ಸಭಾಪತಿಯಾಗಿ ಕೆಲಸ ನಿರ್ವಹಿಸಿದ್ದೇನೆ. ಪಕ್ಷ ನೀಡಿದ ಎಲ್ಲ ಹುದ್ದೆಯನ್ನ ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಿದ್ದೇನೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ