ಆ್ಯಪ್ನಗರ

ಡಾ.ರಾಜ್‌ ನಿಜ ಜೀವನದಲ್ಲೂ ಹೀರೊ

ಡಾ. ರಾಜ್‌ಕುಮಾರ್‌ ಅವರು ತೆರೆಯ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಹೀರೊ ಆಗಿದ್ದರು ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ್‌ ಹೇಳಿದರು.

Vijaya Karnataka 25 Apr 2019, 5:00 am
ಶಿವಮೊಗ್ಗ : ಡಾ. ರಾಜ್‌ಕುಮಾರ್‌ ಅವರು ತೆರೆಯ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಹೀರೊ ಆಗಿದ್ದರು ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ್‌ ಹೇಳಿದರು.
Vijaya Karnataka Web SMG-2404-2-15-24SMG11


ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಡಾ.ರಾಜ್‌ಕುಮಾರ್‌ ಜಯಂತಿ ಅಂಗವಾಗಿ ನಗರದ ಕುವೆಂಪು ರಂಗಮಂದಿರದಲ್ಲಿ ಬುಧವಾರ ಆಯೋಜಿಸಿದ್ದ 'ಸಂಗೀತ ರಸ ಸಂಜೆ ಕಾರ್ಯಕ್ರಮ'ವನ್ನು ಜಿಲ್ಲಾಧಿಕಾರಿ ಕೆ.ಎ.ದಯಾನಂದ್‌ ಉದ್ಘಾಟಿಸಿದರು.

ಡಾ. ರಾಜ್‌ ಅವರು ಸಾಮಾಜಿಕ ಕಳಕಳಿ ಹೊಂದಿದ್ದ ನಟರಾಗಿದ್ದರು. ಗೋಕಾಕ್‌ ಚಳವಳಿ ಸಂದರ್ಭದಲ್ಲಿ ನಾಯಕತ್ವ ವಹಿಸಿ ಕನ್ನಡಿಗರನ್ನು ಒಂದುಗೂಡಿಸಿದವರು. ಅದೇರೀತಿ, ಉತ್ತರ ಕರ್ನಾಟಕದಲ್ಲಿ ಪ್ರವಾಹದಿಂದಾಗಿ ಕಷ್ಟದಲ್ಲಿದ್ದ ಜನರ ಕಷ್ಟಗಳಿಗೆ ಸ್ಪಂದಿಸಿದ್ದರು. ಇಂತಹ ನಟ ಪ್ರತಿಯೊಬ್ಬರಿಗೂ ಮಾದರಿಯಾಗಬೇಕು. ಇವರಲ್ಲಿನ ಗುಣಗಳು ಇಂದಿನ ಯುವಪೀಳಿಗೆ ಅನುಸರಿಸಬೇಕು. ಮಾನವ ಅಂತಃಕರಣ ಹೊಂದಿದ್ದ ಇವರನ್ನು ಎಂದೂ ಮರೆಯಲಾಗದು ಎಂದು ತಿಳಿಸಿದರು.

ರಾಜ್‌ಕುಮಾರ್‌ ಅವರು ಶಿವಮೊಗ್ಗದ ಕುವೆಂಪು ರಂಗಮಂದಿರ ಕಟ್ಟಡ ಪೂರ್ಣಗೊಳಿಸಲು ರಸಮಂಜರಿ ಕಾರ್ಯಕ್ರಮ ನಡೆಸಿ ಟಿಕೆಟ್‌ ಮೂಲಕ ಹಣ ಸಂಗ್ರಹಿಸಿ ನೀಡಿದ್ದನ್ನು ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.

ಬೆಳ್ಳಿಮಂಡಲದ ಸಂಚಾಲಕ ವೈದ್ಯ ಪ್ರಾಸ್ತಾವಿಕ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ವೆಂ. ನಾಯ್ಕ್‌, ವಾರ್ತಾ ಇಲಾಖೆಯ ಶಫಿ ಸಾದುದ್ದಿನ್‌, ಮಾರುತಿ ಇತರರಿದ್ದರು. ಗಾಯಕಿ ಸುರೇಖಾ ಹೆಗ್ಡೆ ಹಾಗೂ ತಂಡದಿಂದ ಡಾ.ರಾಜ್‌ಕುಮಾರ್‌ ಅವರ ಸಿನಿಮಾಗಳ ಜನಪ್ರಿಯ ಹಾಡುಗಳ ಗಾಯನ ನಡೆಯಿತು.

==========

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ