ಆ್ಯಪ್ನಗರ

ಉಚಿತ ಬಸ್‌ ಪಾಸ್‌ಗೆ ಆಗ್ರಹ

ರಾಜ್ಯ ಸರಕಾರ ಶಾಲೆ, ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಜಾತಿ ಭೇದವಿಲ್ಲದೆ ಉಚಿತಬಸ್‌ ಪಾಸ್‌ ನೀಡಬೇಕೆಂದು ಎಬಿವಿಪಿ ಕಾರ್ಯಕರ್ತರು ಮಂಗಳವಾರ ಹಳೇನಗರದ ಮಾಧವಾಚಾರ್‌ ವೃತ್ತದಲ್ಲಿ ರಸ್ತೆತಡೆ ನಡೆಸಿ ಪ್ರತಿಭಟಿಸಿದರು.

Vijaya Karnataka 20 Jun 2019, 5:00 am
ಭದ್ರಾವತಿ: ರಾಜ್ಯ ಸರಕಾರ ಶಾಲೆ, ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಜಾತಿ ಭೇದವಿಲ್ಲದೆ ಉಚಿತಬಸ್‌ ಪಾಸ್‌ ನೀಡಬೇಕೆಂದು ಎಬಿವಿಪಿ ಕಾರ್ಯಕರ್ತರು ಮಂಗಳವಾರ ಹಳೇನಗರದ ಮಾಧವಾಚಾರ್‌ ವೃತ್ತದಲ್ಲಿ ರಸ್ತೆತಡೆ ನಡೆಸಿ ಪ್ರತಿಭಟಿಸಿದರು.
Vijaya Karnataka Web SMR-19BDVT1


ಶಿಕ್ಷ ಣ ವ್ಯಾಪಾರೀಕರಣಗೊಂಡಿರುವ ಇಂದಿನ ದಿನಗಳಲ್ಲಿ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷ ಣ ಪಡೆಯುವುದು ಒಂದು ಸವಾಲಾಗಿ ಪರಿಣಮಿಸಿದೆ. ಇಂತಹ ಸಂದರ್ಭ ನಗರ ಮತ್ತು ಗ್ರಾಮಾಂತರ ಪ್ರದೇಶಗಳಿಂದ ಶಾಲೆ, ಕಾಲೇಜಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ವ್ಯವಸ್ಥೆ ಸರಕಾರ ನೀಡಿದ್ದಲ್ಲಿ ಅಸಂಖ್ಯಾತ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ಸಿಎಂ ಕುಮಾರಸ್ವಾಮಿ ಅವರು ಉಚಿತ ಬಸ್‌ ಪಾಸ್‌ ಎಲ್ಲ ವಿದ್ಯಾರ್ಥಿಗಳಿಗೆ ನೀಡುವ ಘೋಷಣೆ ಮಾಡಿದ್ದರೂ ಕಾರ‍್ಯರೂಪಕ್ಕೆ ಬಾರದೆ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದೆ. ಆದ್ದರಿಂದ ಕೂಡಲೇ ರಾಜ್ಯ ಸರಕಾರ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್‌ಪಾಸ್‌ ಸೌಲಭ್ಯ ಕಲ್ಪಿಸಬೇಕು. ಇಲ್ಲದಿದ್ದಲ್ಲಿ ಪರಿಷತ್‌ ವತಿಯಿಂದ ರಾಜ್ಯಾದ್ಯಂತ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ನಗರದ ತರೀಕೆರೆ ರಸ್ತೆಯ ಪದವಿಪೂರ್ವ ಕಾಲೇಜು, ಸಂಚಿಹೊನ್ನಮ್ಮ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಹಳೇನಗರದ ಮಾಧವಾಚಾರ್‌ ವೃತ್ತದ ಬಳಿ ಮಾನವ ಸರಪಳಿ ನಿರ್ಮಿಸಿ ರಸ್ತೆತಡೆ ನಡೆಸಿದರು. ವಿದ್ಯಾರ್ಥಿ ಮುಖಂಡ ಧನುಷ್‌ ಪ್ರತಿಭಟನೆ ನೇತೃತ್ವ ವಹಿಸಿದ್ದ. ಮುಖಂಡರಾದ ಮನು, ವಿಜಯ್‌, ಸುಮತಿ, ಮಾಧು, ಆದರ್ಶ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ