ಆ್ಯಪ್ನಗರ

ರಾಷ್ಟ್ರೀಯ ವಿಪತ್ತು ಘೋಷಣೆಗೆ ಆಗ್ರಹ

ರಾಜ್ಯದಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು. ನೆರೆ ಸಂತ್ರಸ್ತರಿಗೆ ತಕ್ಷ ಣ ಪರಿಹಾರ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿಯು ಜಿಲ್ಲಾಡಳಿತಕ್ಕೆ ಮಂಗಳವಾರ ಮನವಿ ಸಲ್ಲಿಸಿತು.

Vijaya Karnataka 21 Aug 2019, 5:00 am
ಶಿವಮೊಗ್ಗ : ರಾಜ್ಯದಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು. ನೆರೆ ಸಂತ್ರಸ್ತರಿಗೆ ತಕ್ಷ ಣ ಪರಿಹಾರ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿಯು ಜಿಲ್ಲಾಡಳಿತಕ್ಕೆ ಮಂಗಳವಾರ ಮನವಿ ಸಲ್ಲಿಸಿತು.
Vijaya Karnataka Web request for national disaster declaration
ರಾಷ್ಟ್ರೀಯ ವಿಪತ್ತು ಘೋಷಣೆಗೆ ಆಗ್ರಹ


ಶಿವಮೊಗ್ಗ ಸೇರಿ ರಾಜ್ಯದ ವಿವಿಧೆಡೆ ನೆರೆಯಿಂದ ಲಕ್ಷಾಂತರ ಕುಟುಂಬಗಳು ಮನೆ, ಕೃಷಿ ಭೂಮಿ ಹಾಗೂ ಜನ, ಜಾನುವಾರುಗಳನ್ನು ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಅವರ ಸಹಾಯಕ್ಕೆ ರಾಜ್ಯ ಸರಕಾರ ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದು ಸಮಿತಿಯು ಜಿಲ್ಲಾಡಳಿತ ಮೂಲಕ ರಾಜ್ಯ ಸರಕಾರಕ್ಕೆ ಸಲ್ಲಿಸಿದ್ದ ಮನವಿ ಪತ್ರದಲ್ಲಿ ಒತ್ತಾಯಿಸಿದೆ.

ರಾಜ್ಯದಲ್ಲಿ ಉಂಟಾಗಿರುವ ಪರಿಸ್ಥಿತಿ ಪರಿಗಣಿಸಿ ಕೇಂದ್ರ ಸರಕಾರವು 'ರಾಷ್ಟ್ರೀಯ ವಿಪತ್ತು' ಎಂದು ಘೋಷಿಸಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಕೇಂದ್ರದ ಮೇಲೆ ಒತ್ತಡ ಹೇರಬೇಕು. ಸಂತ್ರಸ್ತರಿಗೆ ಸಿಗಬೇಕಾದ ಪರಿಹಾರ ಕೂಡ ವಿಳಂಬವಾಗದಂತೆ ಸರಕಾರ ಕಾರ್ಯಪ್ರವೃತ್ತವಾಗಬೇಕು ಎಂದು ಆಗ್ರಹಿಸಿದ್ದಾರೆ.

* ತಕ್ಷಣ ಪ್ರತಿ ಕುಟುಂಬಕ್ಕೆ 10 ಸಾವಿರ ಪರಿಹಾರ ನೀಡಿ: ತಕ್ಷ ಣ ಪ್ರತಿ ಸಂತ್ರಸ್ತ ಕುಟುಂಬಕ್ಕೆ 10 ಸಾವಿರ ರೂ. ಗಳನ್ನು ಅವರ ಬ್ಯಾಂಕ್‌ ಖಾತೆಗೆ ಆರಂಭಿಕ ಪರಿಹಾರವಾಗಿ ಜಮಾ ಮಾಡಬೇಕು. ಪೂರ್ಣ ಮತ್ತು ಭಾಗಶಃ ಹಾನಿಗೊಳಗಾದ ಮನೆಗಳಿಗೆ ರಾಜೀವ್‌ ಗಾಂಧಿ ವಸತಿ ನಿಗಮ ವತಿಯಿಂದ ಮನೆ ಒದಗಿಸುವಂತೆ ಮತ್ತು ಸಂತ್ರಸ್ತ ಕುಟುಂಬಕ್ಕೆ ಶಾಶ್ವತ ಪರಿಹಾರ ನೀಡಬೇಕು. ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ನಷ್ಟದ ಅಂದಾಜು ಪಟ್ಟಿ ತಯಾರಿಸಿ ಕೂಡಲೇ ಪರಿಹಾರ ಬಿಡುಗಡೆ ಗೊಳಿಸಬೇಕೆಂದು ಕೋರಿದ್ದಾರೆ.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಎಸ್‌. ಸುಂದರೇಶ್‌, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್‌, ಪ್ರಮುಖರಾದ ಪಿ.ವಿ.ವಿಶ್ವನಾಥ್‌, ರಾಮೇಗೌಡ, ಚಂದ್ರಭೂಪಾಲ್‌, ಅನಿತಾ ಕುಮಾರಿ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ