ಆ್ಯಪ್ನಗರ

ಪಾಲಿಕೆ ಸಭೆ ಕರೆಯಲು ಆಗ್ರಹ

ನಗರದ ಪೌರ ಸಮಸ್ಯೆಗಳ ಕುರಿತು ಚರ್ಚಿಸುವುದಕ್ಕಾಗಿ ಕೂಡಲೇ ಮಹಾನಗರ ಪಾಲಿಕೆ ಸಭೆ ಕರೆಯುವಂತೆ ಪಾಲಿಕೆ ಪ್ರತಿಪಕ್ಷ ನಾಯಕ ಬಿ.ಎ. ರಮೇಶ್‌ ಹೆಗ್ಡೆ ಆಗ್ರಹಿಸಿದ್ದಾರೆ.

Vijaya Karnataka 5 Jun 2019, 5:00 am
ಶಿವಮೊಗ್ಗ : ನಗರದ ಪೌರ ಸಮಸ್ಯೆಗಳ ಕುರಿತು ಚರ್ಚಿಸುವುದಕ್ಕಾಗಿ ಕೂಡಲೇ ಮಹಾನಗರ ಪಾಲಿಕೆ ಸಭೆ ಕರೆಯುವಂತೆ ಪಾಲಿಕೆ ಪ್ರತಿಪಕ್ಷ ನಾಯಕ ಬಿ.ಎ. ರಮೇಶ್‌ ಹೆಗ್ಡೆ ಆಗ್ರಹಿಸಿದ್ದಾರೆ.
Vijaya Karnataka Web request to call a meeting
ಪಾಲಿಕೆ ಸಭೆ ಕರೆಯಲು ಆಗ್ರಹ


ಲೋಕಸಭೆ ಚುನಾವಣೆ ಪ್ರಯುಕ್ತ ಎರಡೂವರೆ ತಿಂಗಳಿಂದ ಪಾಲಿಕೆ ಸ್ಥಾಯಿ ಸಮಿತಿಗಳ ಸಭೆ ಹಾಗೂ ಸಾಮಾನ್ಯ ಸಭೆ ನಡೆದಿಲ್ಲ. ಇದರಿಂದಾಗಿ, ಆಡಳಿತ ವ್ಯವಸ್ಥೆ ಕುಂಠಿತವಾಗಿದೆ. ಸಾರ್ವಜನಿಕರು ತೀವ್ರ ತೊಂದರೆಗೆ ಒಳಗಾಗಿದ್ದಾರೆ. ಆದ್ದರಿಂದ, ಕೂಡಲೇ ಸಭೆ ಕರೆಯುವಂತೆ ಮೇಯರ್‌ಗೆ ಒತ್ತಾಯಿಸಿದ್ದಾರೆ.

ಪಾಲಿಕೆ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ಕುಡಿಯುವ ನೀರು, ಕಸ ವಿಲೇವಾರಿ, ಬೀದಿ ದೀಪ, ಒಳಚರಂಡಿ ನಿರ್ವಹಣೆ ಸಮಸ್ಯೆ ತೀವ್ರವಾಗಿದೆ. ಈಗಾಗಲೇ ಮಂಡ್ಲಿ ಪಂಪ್‌ ಹೌಸ್‌ ಬಳಿ ಹಾಗೂ ತುಂಗಾ ಅಣೆಕಟ್ಟು ಬಳಿ ನದಿ ನೀರಿನ ಪ್ರಮಾಣ ಕಡಿಮೆ ಆಗಿರುವ ಕಾರಣ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಲಿದೆ.

ಕಂದಾಯ ವಿಭಾಗದಲ್ಲಿ ಖಾತೆ ವರ್ಗಾವಣೆ ಹಾಗೂ ಆಸ್ತಿ ತೆರಿಗೆ ನಿರ್ಧಾರ ವಿಷಯದಲ್ಲಿ ನಾಗರಿಕರಿಗೆ ತೊಂದರೆ ಆಗುತ್ತಿದೆ. ಹೊಸದಾಗಿ ಜಾರಿಗೆ ತಂದಿರುವ ಕಟ್ಟಡ ಪರವಾನಗಿ ನಿಯಮಾವಳಿ ಹಾಗೂ ಘನ ತ್ಯಾಜ್ಯ ಸೆಸ್‌ ಬಗ್ಗೆ ಚರ್ಚಿಸಲು ಕೂಡಲೇ ಸಭೆ ಕರೆಯುವಂತೆ ಆಗ್ರಹಿಸಿದ್ದಾರೆ.

ರಾಜ ಕಾಲುವೆಗಳ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಮೃತ ಯೋಜನೆ ಹಾಗೂ ರಾಜ್ಯ ಸರಕಾರದ ಆಡಳಿತಾತ್ಮಕ ಅನುಮೋದನೆ ಪಡೆದಿರುವ ಅಂದಾಜು 22.22 ಕೋಟಿ ರೂ. ವೆಚ್ಚದ ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯ ಕಾಮಗಾರಿ ಅನುಷ್ಠಾನ ಹಾಗೂ ಯಂತ್ರೋಪಕರಣಗಳ ಖರೀದಿ ಪ್ರಕ್ರಿಯೆಯ ವಿಳಂಬ ನೀತಿ ಬಗ್ಗೆ ಚರ್ಚಿಸಲು ಕೂಡಲೇ ಸಭೆ ಕರೆಯಬೇಕು. ಇಲ್ಲವಾದ್ದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ