ಆ್ಯಪ್ನಗರ

ಆರಗರಿಂದ ರಸ್ತೆ ಕಾಮಗಾರಿ ಪರಿಶೀಲನೆ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಲಾಖೆ ಅನುಷ್ಠಾನಗೊಳಿಸುತ್ತಿರುವ ಆಗುಂಬೆ- ತೀರ್ಥಹಳ್ಳಿ ಮಾರ್ಗದ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯನ್ನು ಬುಧವಾರ ಶಾಸಕ ಆರಗಜ್ಞಾನೇಂದ್ರ ಪರಿಶೀಲಿಸಿದರು.

Vijaya Karnataka 21 Feb 2019, 5:00 am
ತೀರ್ಥಹಳ್ಳಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಲಾಖೆ ಅನುಷ್ಠಾನಗೊಳಿಸುತ್ತಿರುವ ಆಗುಂಬೆ- ತೀರ್ಥಹಳ್ಳಿ ಮಾರ್ಗದ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯನ್ನು ಬುಧವಾರ ಶಾಸಕ ಆರಗಜ್ಞಾನೇಂದ್ರ ಪರಿಶೀಲಿಸಿದರು.
Vijaya Karnataka Web SMR-20TTH3


ಪಟ್ಟಣದ ಬಾಳೇಬೈಲಿನಿಂದ ಮೇಗರವಳ್ಳಿವರೆಗೆ ಮೊದಲ ಹಂತದಲ್ಲಿ ಅಭಿವೃದ್ಧಿಗೊಳ್ಳುವ ಸುಮಾರು 74 ಕೋಟಿ ರೂ. ವೆಚ್ಚದ ಕಾಮಗಾರಿ ಕುರಿತು ಅಧಿಕಾರಿಗಳು, ಗುತ್ತಿಗೆದಾರರಿಂದ ಮಾಹಿತಿ ಪಡೆದರು.

ಗಂಟೆಹಕ್ಕಲು ಸಮೀಪದ ತಿರುವು ರಸ್ತೆ ಮಾರ್ಗವನ್ನು ಬದಲಾಯಿಸಿ ನೇರಗೊಳಿಸುವುದರಿಂದ ವಾಸದ ಮನೆಗೆ ಆಗುತ್ತಿರುವ ತೊಂದರೆ ಪರಿಹಾರಕ್ಕೆ ಆರಗಜ್ಞಾನೇಂದ್ರ ಅವರು ಅಧಿಕಾರಿಗಳ ಜತೆ ಚರ್ಚಿಸಿದರು. ರಸ್ತೆ ಮಾರ್ಗದ ಅಭಿವೃದ್ಧಿಯಿಂದ ತೊಂದರೆಗೆ ಒಳಗಾಗುವ ವಾಸದ ಮನೆಗಳಿಗೆ ಭೇಟಿ ನೀಡಿ ಕುಟುಂಬಸ್ಥರೊಂದಿಗೆ ಮಾತನಾಡಿದರು. ಈ ಸಂದರ್ಭ ಕಾಮಗಾರಿ ಗುತ್ತಿಗೆ ನಿರ್ವಹಿಸುತ್ತಿರುವ ನ್ಯಾಷನಲ್‌ ಸಮೂಹ ಸಂಸ್ಥೆ ಮುಖ್ಯಸ್ಥ ಇಬ್ರಾಹಿ ಷರೀಫ್‌, ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ