ಆ್ಯಪ್ನಗರ

ಕೆಎಫ್‌ಡಿ ಸಂಶೋಧನೆಗೆ ರೋಟರಿ ನೆರವು

ಮಂಗನ ಕಾಯಿಲೆಗೆ ಔಷಧ ಕಂಡುಹಿಡಿಯಲು ಮತ್ತು ಲಸಿಕೆಯನ್ನು ಮತ್ತಷ್ಟು ಉತ್ತಮ ಪಡಿಸಲು ಅಗತ್ಯವಾದ ಸಂಶೋಧನೆಗೆ ನೆರವು ನೀಡುವಂತೆ ಅಂತಾರಾಷ್ಟ್ರೀಯ ರೋಟರಿ ಸಂಸ್ಥೆಗಳ ಗಮನ ಸೆಳೆಯಲಾಗುವುದು ಎಂದು ರೋಟರಿ ಜಿಲ್ಲಾ ಮಾಜಿ ಗವರ್ನರ್‌ ಎಚ್‌.ಎಲ್‌.ರವಿ ಹೇಳಿದರು.

Vijaya Karnataka 5 Feb 2019, 6:21 pm
ಶಿವಮೊಗ್ಗ: ಮಂಗನ ಕಾಯಿಲೆಗೆ ಔಷಧ ಕಂಡುಹಿಡಿಯಲು ಮತ್ತು ಲಸಿಕೆಯನ್ನು ಮತ್ತಷ್ಟು ಉತ್ತಮ ಪಡಿಸಲು ಅಗತ್ಯವಾದ ಸಂಶೋಧನೆಗೆ ನೆರವು ನೀಡುವಂತೆ ಅಂತಾರಾಷ್ಟ್ರೀಯ ರೋಟರಿ ಸಂಸ್ಥೆಗಳ ಗಮನ ಸೆಳೆಯಲಾಗುವುದು ಎಂದು ರೋಟರಿ ಜಿಲ್ಲಾ ಮಾಜಿ ಗವರ್ನರ್‌ ಎಚ್‌.ಎಲ್‌.ರವಿ ಹೇಳಿದರು.
Vijaya Karnataka Web 4SMG10


ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ಇತ್ತೀಚೆಗೆ ರೋಟರಿ ಸದಸ್ಯರು ಮತ್ತು ಸಾರ್ವಜನಿಕರಿಗೆ ಏರ್ಪಡಿಸಲಾಗಿದ್ದ ಮಂಗನ ಕಾಯಿಲೆ ನಿಯಂತ್ರಣದಲ್ಲಿ ನಮ್ಮ ಜವಾಬ್ದಾರಿ ಕುರಿತ ಸಂವಾದದಲ್ಲಿ ಅವರು ಮಾತನಾಡಿದರು.

ಜಾಗತಿಕ ಮಟ್ಟದಲ್ಲಿ ಪೋಲಿಯೊ ನಿರ್ಮೂಲನೆಯಲ್ಲಿ ಮಹತ್ವದ ಪಾತ್ರವಹಿಸಿರುವ ರೋಟರಿ ಸಂಸ್ಥೆ ನಿರ್ಲಕ್ಷ ಕ್ಕೊಳಗಾಗಿರುವ ಮಂಗನಕಾಯಿಲೆ ಬಗ್ಗೆ ಗಮನಹರಿಸಿದಲ್ಲಿ ಮುಂದಿನ ದಿನಗಳಲ್ಲಿ ಆಗಬಹುದಾದ ಅನಾಹುತಗಳನ್ನು ನಿಯಂತ್ರಿಸಲು ಸಾಧ್ಯ ಎಂದರು.

ಮಂಗನಕಾಯಿಲೆ ಕುರಿತು ಮಾತನಾಡಿದ ಭದ್ರಾವತಿ ತಾಲೂಕು ಆರೋಗ್ಯಾಧಿಕಾರಿ ಡಾ.ಗುಡದಪ್ಪ ಕಸಬಿ ಅವರು, ಕ್ಯಾಸನೂರು ಅರಣ್ಯ ಕಾಯಿಲೆಯು ಸೋಂಕು ಹರಡುವಿಕೆ, ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ಇಲಾಖೆ ಕೈಗೊಂಡಿರುವ ನಿಯಂತ್ರಣ ಕ್ರಮಗಳ ಕುರಿತು ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಸಾರ್ವಜನಿಕರ ಪ್ರಶ್ನೆಗಳಿಗೂ ಉತ್ತರ ನೀಡಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷ ಎ.ಒ.ಮಹೇಶ್‌, ಉಪಾಧ್ಯಕ್ಷ ಜಿ.ವಿಜಯಕುಮಾರ್‌, ಜಂಟಿ ಕಾರ್ಯದರ್ಶಿ ಮಂಜುನಾಥ್‌ ಕದಂ, ಮಾಜಿ ಅಧ್ಯಕ್ಷ ಪುರುಷೋತ್ತಮ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ