ಸಾಗರ: ಈ ಬಾರಿಯ ಚುನಾವಣೆ ದೇಶದ ಹಿತದೃಷ್ಟಿಯಿಂದ ಮಹತ್ವದಾಗಿದ್ದು, ಕಾರ್ಯಕರ್ತರು ಬೂತ್ ಮಟ್ಟದ ಸಂಘಟನೆಯ ಕಾರ್ಯವನ್ನು ಅತ್ಯಂತ ನಿಷ್ಠೆಯಿಂದ ಮಾಡಬೇಕಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶೇಷ ಬೂತ್ ಪ್ರಮುಖರ ಸಭೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ದೇಶದ ಸಮಗ್ರ ಅಭಿವೃದ್ಧಿಗೆ ಮೋದಿಯವರ ಮಹಾತ್ವಾಕಾಂಕ್ಷೆ, ಪ್ರಾಮಾಣಿಕತೆ, ದೂರಾಲೋಚನೆ ಸಹಕಾರಿಯಾಗಲಿದೆ. ಬೂತ್ ಮಟ್ಟದ ಕಾರ್ಯಕರ್ತರು ಮೋದಿಯವರ ಮಹತ್ವ ಮತ್ತು ದೇಶದ ಸಮಗ್ರ ಅಭಿವೃದ್ಧಿಯ ಚಿಂತನೆಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.
ಶಾಸಕರಾದ ಎಚ್.ಹಾಲಪ್ಪ ಮತ್ತು ಕುಮಾರ್ ಬಂಗಾರಪ್ಪ , ರಾಜ್ಯ ಉಪಾಧ್ಯಕ್ಷ ಭಾನುಪ್ರಕಾಶ್, ಜಿಲ್ಲಾ ಉಪಾಧ್ಯಕ್ಷ ಯು.ಎಚ್.ರಾಮಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಡಿ.ಮೇಘರಾಜ್, ಮಂಡಲದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಜರಿದ್ದರು.
ತಾಲೂಕು ಅಧ್ಯಕ್ಷ ಪ್ರಸನ್ನ ಕೆರೆಕೈ ಅಧ್ಯಕ್ಷ ತೆ ವಹಿಸಿದ್ದರು. ವಿ.ಮಹೇಶ ಸ್ವಾಗತಿಸಿ, ದೇವೇಂದ್ರಪ್ಪ ಯಲಕುಂದ್ಲಿ ವಂದಿಸಿದರು. ಗಣೇಶ ಪ್ರಸಾದ್ ನಿರೂಪಿಸಿದರು.
ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶೇಷ ಬೂತ್ ಪ್ರಮುಖರ ಸಭೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ದೇಶದ ಸಮಗ್ರ ಅಭಿವೃದ್ಧಿಗೆ ಮೋದಿಯವರ ಮಹಾತ್ವಾಕಾಂಕ್ಷೆ, ಪ್ರಾಮಾಣಿಕತೆ, ದೂರಾಲೋಚನೆ ಸಹಕಾರಿಯಾಗಲಿದೆ. ಬೂತ್ ಮಟ್ಟದ ಕಾರ್ಯಕರ್ತರು ಮೋದಿಯವರ ಮಹತ್ವ ಮತ್ತು ದೇಶದ ಸಮಗ್ರ ಅಭಿವೃದ್ಧಿಯ ಚಿಂತನೆಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.
ಶಾಸಕರಾದ ಎಚ್.ಹಾಲಪ್ಪ ಮತ್ತು ಕುಮಾರ್ ಬಂಗಾರಪ್ಪ , ರಾಜ್ಯ ಉಪಾಧ್ಯಕ್ಷ ಭಾನುಪ್ರಕಾಶ್, ಜಿಲ್ಲಾ ಉಪಾಧ್ಯಕ್ಷ ಯು.ಎಚ್.ರಾಮಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಡಿ.ಮೇಘರಾಜ್, ಮಂಡಲದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಜರಿದ್ದರು.
ತಾಲೂಕು ಅಧ್ಯಕ್ಷ ಪ್ರಸನ್ನ ಕೆರೆಕೈ ಅಧ್ಯಕ್ಷ ತೆ ವಹಿಸಿದ್ದರು. ವಿ.ಮಹೇಶ ಸ್ವಾಗತಿಸಿ, ದೇವೇಂದ್ರಪ್ಪ ಯಲಕುಂದ್ಲಿ ವಂದಿಸಿದರು. ಗಣೇಶ ಪ್ರಸಾದ್ ನಿರೂಪಿಸಿದರು.