ಆ್ಯಪ್ನಗರ

ಪತ್ನಿ ಆತ್ಮಹತ್ಯೆಗೆ ಪ್ರಚೋಚನೆ ನೀಡಿದ ಪತಿಗೆ ಸಜೆ

ಪತ್ನಿಗೆ ಹೊಡೆದು ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದ ಪತಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಸಜೆ ಮತ್ತು 5 ಸಾವಿರ ರೂ. ದಂಡ ವಿಧಿಸಿ ಗುರುವಾರ ತೀರ್ಪು ನೀಡಿದೆ.

Vijaya Karnataka 9 Mar 2019, 5:00 am
ಶಿವಮೊಗ್ಗ: ಪತ್ನಿಗೆ ಹೊಡೆದು ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದ ಪತಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಸಜೆ ಮತ್ತು 5 ಸಾವಿರ ರೂ. ದಂಡ ವಿಧಿಸಿ ಗುರುವಾರ ತೀರ್ಪು ನೀಡಿದೆ.
Vijaya Karnataka Web said to her husband who prompted suicide
ಪತ್ನಿ ಆತ್ಮಹತ್ಯೆಗೆ ಪ್ರಚೋಚನೆ ನೀಡಿದ ಪತಿಗೆ ಸಜೆ


ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಮಾರುತಿ ಅಲಿಯಾಸ್‌ ಶಶಿ ಶಿಕ್ಷೆಗೆ ಗುರಿಯಾದ ವ್ಯಕ್ತಿ. 2008ರಲ್ಲಿ ವಿಧವೆ ಜ್ಯೋತಿಲಕ್ಷ್ಮಿಯನ್ನು ಪ್ರೀತಿಸಿ ವಿವಾಹವಾಗಿದ್ದ. ಜ್ಯೋತಿಲಕ್ಷ್ಮಿಹೆಸರಲ್ಲಿ ಇದ್ದ ಆಶ್ರಯ ಮನೆಯನ್ನು ಮಾರಾಟ ಮಾಡಿ ಬೇಡೆ ಕಡೆ ಹೋಗೋಣವೆಂದು ಒತ್ತಾಯಿಸಿದ್ದ. ಇದಕ್ಕೆ ಪತ್ನಿ ನಿರಾಕರಿಸಿದ್ದರಿಂದ ಹಲವು ಬಾರಿ ಜಗಳವಾಗಿ ಪೊಲೀಸ್‌ ಠಾಣೆ ಮೆಟ್ಟಿಲು ತುಳಿದಿದ್ದರು. ಅದೇ ಕಾರಣಕ್ಕೆ ಹಲವು ಬಾರಿ ಪತ್ನಿಗೆ ಹಿಂಸೆ ನೀಡಿದ್ದ. 2015ನೇ ಆಗಸ್ಟ್‌ 12ರಂದು ಮಧ್ಯಾಹ್ನ ಇದೇ ವಿಚಾರವಾಗಿ ಜಗಳ ತೆಗೆದು ಪತ್ನಿಯನ್ನು ತೀವ್ರವಾಗಿ ಥಳಿಸಿದ್ದ.

ಇದರಿಂದ ನೊಂದ ಜ್ಯೋತಿಲಕ್ಷ್ಮಿ ಅದೇ ದಿನ ಸಂಜೆ 7.30ರ ಹೊತ್ತಿಗೆ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು. ತೀವ್ರ ಸುಟ್ಟಗಾಯಗಳಿಂದಾಗಿ ಆಕೆ ಮೃತಪಟ್ಟಿದ್ದರು. ವಿನೋಬನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ವಿರುದ್ಧ ದೋಷಾರೋಪ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಭಾವತಿ ಎಂ.ಹಿರೇಮಠ ಅವರು ಮಾರುತಿಗೆ 4 ವರ್ಷ ಕಠಿಣ ಸಜೆ ಮತ್ತು 5 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ವಿ.ಜಿ.ಯಳಗೇರಿ ವಾದಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ