ಆ್ಯಪ್ನಗರ

ಶ್ರೀಗಂಧ ಅಕ್ರಮ ಸಾಗಣೆ, ಬಂಧನ

ಶ್ರೀಗಂಧ ಕಳ್ಳ ಸಾಗಣೆ ಮಾಡುತ್ತಿದ್ದ ವ್ಯಕ್ತಿಯನ್ನು ಪಟ್ಟಣ ವಲಯ ಅರಣ್ಯಾಧಿಕಾರಿ ನೇತೃತ್ವದ ತಂಡ ಶನಿವಾರ ಬಂಧಿಸಿದೆ.

Vijaya Karnataka 5 Aug 2019, 5:00 am
ಶಿರಾಳಕೊಪ್ಪ : ಶ್ರೀಗಂಧ ಕಳ್ಳ ಸಾಗಣೆ ಮಾಡುತ್ತಿದ್ದ ವ್ಯಕ್ತಿಯನ್ನು ಪಟ್ಟಣ ವಲಯ ಅರಣ್ಯಾಧಿಕಾರಿ ನೇತೃತ್ವದ ತಂಡ ಶನಿವಾರ ಬಂಧಿಸಿದೆ.
Vijaya Karnataka Web SMR-04SLKP01 PHOTO 01


ಮತ್ತಿಕೋಟೆ ಗ್ರಾಮದ ಗೋಪಿ ಬಂಧಿತ ಆರೋಪಿ. ಮತ್ತೊಬ್ಬ ಆರೋಪಿ, ಅದೇ ಗ್ರಾಮದ ಅಪ್ರೋಜ್‌ ಪರಾರಿಯಾಗಿದ್ದಾನೆ. ಅಂದಾಜು 1 ಲಕ್ಷ ರೂ. ಮೌಲ್ಯದ 35 ಕೆ.ಜಿ ತೂಕದ ಶ್ರೀಗಂಧದ ತುಂಡುಗಳು ಹಾಗೂ ಬೈಕ್‌ ಅನ್ನು ಅರಣ್ಯ ಇಲಾಖೆಯವರು ವಶಪಡಿಸಿಕೊಂಡಿದ್ದಾರೆ.

ಬಸವನಂದಿಹಳ್ಳಿ ಸರ್ವೆ ನಂ, 46ರ ಅರಣ್ಯದಲ್ಲಿ ಬೆಳೆದಿದ್ದ ಶ್ರೀಗಂಧದ 3 ಮರಗಳನ್ನು ಕಡಿದು ಸಾಗಿಸುತ್ತಿದ್ದಾಗ, ಹಳೆಮುತ್ತಿಗೆ, ಅಡಗಂಟಿ ಮಾರ್ಗದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ಮಾಡಿದ್ದಾರೆ. ಶಿರಾಳಕೊಪ್ಪ ವಲಯ ಮಂಚಿಕೊಪ್ಪ ಅರಣ್ಯ ಶಾಖೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಎಸ್‌.ವಿ.ಮಂಜುನಾಥ, ಉಪವಲಯ ಅರಣ್ಯಾಧಿಕಾರಿಗಳಾದ ಬಸವರಾಜ್‌ ಮೇಳಳ್ಳಿ, ಎಚ್‌.ಪ್ರವೀಣ್‌, ರಾಘವನ್‌, ಶ್ರೀಕಾಂತ್‌ ರಾತೋಡ್‌, ಶಿವಕುಮಾರ ಮತ್ತಿತರರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ