ಆ್ಯಪ್ನಗರ

ಎರಡನೇ ದಿನವೂ ಶಿವಮೊಗ್ಗ ಜಿಲ್ಲೆ ಸಹಜ

ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಮುಷ್ಕರಕ್ಕೆ ಎರಡನೇ ದಿನವಾದ ಬುಧವಾರವೂ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನಗರ ಸಹಜ ಸ್ಥಿತಿಯಲ್ಲಿತ್ತು.

Vijaya Karnataka 10 Jan 2019, 5:00 am
ಶಿವಮೊಗ್ಗ: ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಮುಷ್ಕರಕ್ಕೆ ಎರಡನೇ ದಿನವಾದ ಬುಧವಾರವೂ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನಗರ ಸಹಜ ಸ್ಥಿತಿಯಲ್ಲಿತ್ತು.
Vijaya Karnataka Web SMR-9ganesh2


ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ, ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್‌, ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಹೋರಾಟ ನಡೆಸಿದರು. ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಹೊರತುಪಡಿಸಿ ಖಾಸಗಿ ವಾಹನಗಳ ಸಂಚಾರ, ಶಾಲೆ, ಕಾಲೇಜು, ಕಚೇರಿ, ಕಾರ್ಖಾನೆಗಳು, ಬ್ಯಾಂಕ್‌, ಚಿತ್ರಮಂದಿರ, ಅಂಗಡಿ ಮುಂಗಟ್ಟು, ಪೆಟ್ರೋಲ್‌ ಬಂಕ್‌, ಹೋಟೆಲ್‌ಗಳು ಎಂದಿನಂತೆ ವಹಿವಾಟು ನಡೆಸಿದವು.

ಜೆಸಿಟಿಯು ಪ್ರತಿಭಟನೆ: ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಜೆಸಿಟಿಯು ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಎರಡನೇ ದಿನವೂ ಹೋರಾಟ ಮುಂದುವರಿದಿದ್ದು, ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಹೊಸ ಆರ್ಥಿಕ ನೀತಿಗಳಿಂದಾಗಿ ರೈತರು, ಕಾರ್ಮಿಕರು, ನೌಕರರು, ಕೃಷಿಕೂಲಿ ಕಾರ್ಮಿಕರು ಗಂಭೀರ ಪರಿಸ್ಥಿತಿ ಎದುರಿಸುವಂತಾಗಿದೆ. ದೇಶದ ಆರ್ಥಿಕ ಸಾರ್ವಭೌಮತೆಗೆ ಧಕ್ಕೆ ತರುವ ನೀತಿಗಳನ್ನು ಕೇಂದ್ರ ಸರಕಾರ ಜಾರಿಗೊಳಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಕಾರ್ಮಿಕರಿಗೆ ಕನಿಷ್ಟ ವೇತನ, ಸಾಮಾಜಿಕ ಭದ್ರತೆ, ಸಾಮಾಜಿಕ ಸ್ಥಾನಮಾನ, ಸ್ಕಿಮ್‌ ವರ್ಕರ್‌ಗಳ ಸವಲತ್ತು, ಖಾಸಗೀಕರಣ, ಗುತ್ತಿಗೆ ಪದ್ಧತಿಗೆ ವಿರೋಧ ಮತ್ತಿತರ 12 ಅಂಶಗಳಬೇಡಿಕೆಗಳ ಸನ್ನದನ್ನು ಕೇಂದ್ರ ಸರಕಾರ ಕಡೆಗಣಿಸಿದೆ ಎಂದು ದೂರಿದರು. ಪ್ರತಿಭಟನೆಯಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಸಂಚಾಲಕ ಹಾಗೂ ಸಿಐಟಿಯು ಅಧ್ಯಕ್ಷ ಎಸ್‌.ಬಿ.ಶಿವಶಂಕರ್‌, ರಾಜು ಚಿನ್ನಸ್ವಾಮಿ, ಗೋವಿಂದರಾಜು, ತುಳಸಿಪ್ರಭ ಸೇರಿದಂತೆ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ