ಆ್ಯಪ್ನಗರ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ: ಐಜಿಪಿ ರವಿ ಸುದ್ದಿಗೋಷ್ಠಿ

ಕೋಟೆ ಮತ್ತು ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 10 ಪ್ರಕರಣ ದಾಖಲಾಗಿದೆ. ಶಾಂತಿ ನೆಲೆಸಲು ಹಲವಾರು ಕ್ರಮ ಕೈಗೊಳ್ಳಲಾಗಿದೆ. ಚಿತ್ರದುರ್ಗ, ಹಾವೇರಿ ಮತ್ತು ದಾವಣಗೆರೆಯಿಂದ ಪೊಲೀಸರ ನಿಯೋಜನೆ ಮಾಡಲಾಗಿದೆ. 148 ಪ್ರದೇಶಗಳನ್ನು ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದೆ. 9 ಚೆಕ್ ಪೋಸ್ಟ್ ಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಹೊರಗಿನಿಂದ ಜನರು ಬಂದು ದೊಂಬಿ ಮಾಡದಂತೆ ಚೆಕ್ ಪೋಸ್ಟ್‌ಗಳಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Vijaya Karnataka Web 4 Dec 2020, 1:03 pm
ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ನಾಗೇಶ್ ಎಂಬುವವರ ಮೇಲೆ ನಡೆದ ಹಲ್ಲೆಯಿಂದ ಹಲವೆಡೆ ಪರಿಸ್ಥಿತಿ ಬಿಗಡಾಯಿಸಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಶನಿವಾರದವರೆಗೂ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್‌ ವರಿಷ್ಠರು ಆದೇಶ ಹೊರಡಿಸಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ.
Vijaya Karnataka Web shimoga


ಈ ಹಿನ್ನೆಲೆ ಈ ಬಗ್ಗೆ ಮಾಹಿತಿ ನೀಡಿರುವ ಐಜಿಪಿ ರವಿ, ಕೋಟೆ ಮತ್ತು ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 10 ಪ್ರಕರಣ ದಾಖಲಾಗಿದೆ. ಶಾಂತಿ ನೆಲೆಸಲು ಹಲವಾರು ಕ್ರಮ ಕೈಗೊಳ್ಳಲಾಗಿದೆ. ಚಿತ್ರದುರ್ಗ, ಹಾವೇರಿ ಮತ್ತು ದಾವಣಗೆರೆಯಿಂದ ಪೊಲೀಸರ ನಿಯೋಜನೆ ಮಾಡಲಾಗಿದೆ. 148 ಪ್ರದೇಶಗಳನ್ನು ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದೆ. 9 ಚೆಕ್ ಪೋಸ್ಟ್ ಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಹೊರಗಿನಿಂದ ಜನರು ಬಂದು ದೊಂಬಿ ಮಾಡದಂತೆ ಚೆಕ್ ಪೋಸ್ಟ್‌ಗಳಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಘಟನೆ ಹಿನ್ನೆಲೆ ಏನು?
ದುಷ್ಕರ್ಮಿಗಳು ಬಜರಂಗದಳದ ಸಹ ಸಂಚಾಲಕನ ಮೇಲೆ ಗುರುವಾರ ಬೆಳಗ್ಗೆ ಹಲ್ಲೆ ನಡೆಸಿದ್ದರು. ಇದರಿಂದಾಗಿ ಗಾಂಧಿಬಜಾರ್‌ನ ಚೋರ್‌ ಬಜಾರ್‌ನಲ್ಲಿ ಒಂದು ಕೋಮಿನ ಜನರು ಮತ್ತೊಂದು ಕೋಮಿನವರನ್ನು ಗುರಿಯಾಗಿಸಿಕೊಂಡು ಹಲವರನ್ನು ಅಟ್ಟಾಡಿಸಿಕೊಂಡು ಹೊಡೆದರೆ, ಇದೇ ದ್ವೇಷದಲ್ಲಿ ಮತ್ತೊಂದು ಕೋಮು ರವಿವರ್ಮ ಬೀದಿಯಲ್ಲಿ ಗುಂಪುಗೂಡಿ ಪೊಲೀಸರ ಎದುರಿನಲ್ಲೇ ಮಚ್ಚು, ಲಾಂಗು ಮತ್ತು ಇತರೆ ಮಾರಕಾಸ್ತ್ರಗಳನ್ನು ಹಿಡಿದು ಹಲವು ವಾಹನಗಳನ್ನು ಜಖಂಗೊಳಿಸಿ ಭಯದ ವಾತಾವರಣ ಸೃಷ್ಟಿಸಿದರು.

ಶಿವಮೊಗ್ಗದಲ್ಲಿ ಗುಂಪು ಘರ್ಷಣೆ, ಪರಿಸ್ಥಿತಿ ಉದ್ವಿಗ್ನ, ಶನಿವಾರದವರೆಗೆ ನಿಷೇಧಾಜ್ಞೆ ಜಾರಿ

ಪೊಲೀಸರು ಗುಂಪನ್ನು ಚದುರಿಸಿ ಪರಿಸ್ಥಿತಿಯನ್ನು ತಹಬದಿಗೆ ತಂದರು. ಎರಡೂ ಕೋಮುಗಳ ನಡುವೆ ಮತ್ತೆ ಸಂಘರ್ಷ ನಡೆಯಬಹುದೆಂಬ ಆತಂಕದ ಹಿನ್ನೆಲೆಯಲ್ಲಿ ಪೊಲೀಸರು ಗಾಂಧಿಬಜಾರ್‌, ಮಹಾಕವಿ ಕಾಳಿದಾಸ ರಸ್ತೆ, ಕೃಷ್ಣರಾಜಪುರಂ ರಸ್ತೆ, ಹಳೇ ತೀರ್ಥಹಳ್ಳಿ ರಸ್ತೆ ಮತ್ತು ಅವುಗಳಿಗೆ ಹೊಂದಿಕೊಂಡ ರಸ್ತೆಗಳ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದರು. ಆನಂತರದಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದ ಎಲ್ಲ ರಸ್ತೆಗಳಲ್ಲೂ ವ್ಯಾಪಾರ ಕೇಂದ್ರಗಳನ್ನು ಬಂದ್‌ ಮಾಡಿಸಲಾಯಿತು. ಪೊಲೀಸ್‌ ಇಲಾಖೆ ಮನವಿ ಮೇರೆಗೆ ಮಧ್ಯಾಹ್ನದ ಬಳಿಕ ನಗರದೆಲ್ಲೆಡೆ ನಿಷೇಧಾಜ್ಞೆ ಜಾರಿಗೊಳಿಸಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ