ಆ್ಯಪ್ನಗರ

ಶಿಮುಲ್‌ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಇಂದು

ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ವ್ಯಾಪ್ತಿಯ ಶಿವಮೊಗ್ಗ ಹಾಲು ಒಕ್ಕೂಟ(ಶಿಮುಲ್‌) ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಶುಕ್ರವಾರ ಬೆಳಗ್ಗೆ ನಡೆಯಲಿದೆ.

Vijaya Karnataka 10 May 2019, 5:00 am
ಶಿವಮೊಗ್ಗ: ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ವ್ಯಾಪ್ತಿಯ ಶಿವಮೊಗ್ಗ ಹಾಲು ಒಕ್ಕೂಟ(ಶಿಮುಲ್‌) ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಶುಕ್ರವಾರ ಬೆಳಗ್ಗೆ ನಡೆಯಲಿದೆ.
Vijaya Karnataka Web shimul chairman vice presidential election today
ಶಿಮುಲ್‌ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಇಂದು


ಶಿಮುಲ್‌ ಆವರಣದಲ್ಲಿ ಬೆಳಗ್ಗೆ 9ರಿಂದ 11ರ ವರೆಗೆ ನಾಮಪತ್ರ ಸಲ್ಲಿಕೆ, ಅದಾದ ಬಳಿಕ ನಾಮಪತ್ರ ಪರಿಶೀಲನೆ, ಹಿಂತೆಗೆದುಕೊಳ್ಳುವ ಪ್ರಕ್ರಿಯೆ ನಡೆಯಲಿದ್ದು 12ಗಂಟೆಗೆ ಮತದಾನ ನಡೆಯಲಿದೆ. ಮಧ್ಯಾಹ್ನ 1ಗಂಟೆಗೆ ಫಲಿತಾಂಶ ಘೋಷಣೆ ಮಾಡಲಾಗುತ್ತದೆ.

14 ಸದಸ್ಯ ಬಲದ ನಿರ್ದೇಶಕರಲ್ಲಿ ಜೆಡಿಎಸ್‌- ಕಾಂಗ್ರೆಸ್‌ ಬೆಂಬಲಿತ 11 ಮತ್ತು ಬಿಜೆಪಿ ಬೆಂಬಲಿತ ಮೂವರು ಸದಸ್ಯರು ಚುನಾಯಿತರಾಗಿದ್ದರೆ. ಇದರಲ್ಲಿ ನಾಲ್ವರು ಮಾಜಿ ಅಧ್ಯಕ್ಷರು, ಇಬ್ಬರು ಹಾಲಿ ನಿರ್ದೇಶಕರು ಚುನಾಯಿತರಾಗಿದ್ದಾರೆ. ವಿಶೇಷವೆಂದರೆ ಎಂಟು ಮಂದಿ ಹೊಸಬರು ಆಯ್ಕೆಯಾಗಿದ್ದು ಇದರಲ್ಲಿ ಮೊದಲ ಬಾರಿಗೆ ಮಹಿಳಾ ನಿರ್ದೇಶಕರೊಬ್ಬರು ಚುನಾಯಿತರಾಗಿದ್ದಾರೆ.

ಅಧ್ಯಕ್ಷ ಸ್ಥಾನಕ್ಕಾಗಿ ಮೈತ್ರಿಕೂಟದಲ್ಲಿ ಭಾರಿ ಪೈಪೋಟಿ ಏರ್ಪಟ್ಟಿದೆ. ಹಾಲಿ ಅಧ್ಯಕ್ಷ ವಿದ್ಯಾಧರ್‌ ಅವರು ಮೈತ್ರಿಕೂಟದಲ್ಲಿ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಕಳೆದ ಅವಧಿಯಲ್ಲಿ ಕೇವಲ ಒಂದು ವರ್ಷಕ್ಕೆ ಅಧ್ಯಕ್ಷರಾಗಿದ್ದ ಅವರು ಈ ಬಾರಿ ಮತ್ತೊಂದು ಅವಧಿಗೆ ಅಧ್ಯಕ್ಷರಾಗಿ ಮುಂದುವರಿಯಲು ಬಯಸಿದ್ದಾರೆ.

ಇವರಿಗೆ ಚಿತ್ರದುರ್ಗದ ತಿಪ್ಪೇಸ್ವಾಮಿ ಅವರು ಪ್ರಬಲ ಪೈಪೋಟಿ ನೀಡುತ್ತಿದ್ದಾರೆ. ತಿಪ್ಪೇಸ್ವಾಮಿ ಅವರು ಹಿಂದಿನ ಅವಧಿಯಲ್ಲಿ ಐದು ವರ್ಷ ಕೆಎಂಎಫ್‌ ಪ್ರತಿನಿಧಿಯಾಗಿದ್ದರು. ಹೀಗಾಗಿ ಈ ಬಾರಿ ತಮಗೆ ಅಧ್ಯಕ್ಷ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ ಎಂದು ಗೊತ್ತಾಗಿದೆ. ಎರಡೂ ಪಕ್ಷಗಳ ಮುಖಂಡರು ಇಬ್ಬರ ನಡುವೆ ಸಂಧಾನ ನಡೆಸಿದ್ದು ಶುಕ್ರವಾರ ಬೆಳಗ್ಗೆ ನಾಮಪತ್ರ ಸಲ್ಲಿಕೆ ಅವಧಿ ಅಂತ್ಯಕ್ಕೆ ಮುನ್ನ ಇದು ಗೊತ್ತಾಗಲಿದೆ. ಅಧ್ಯಕ್ಷರ ಆಯ್ಕೆಯ ಜತೆಯಲ್ಲೇ ಉಪಾಧ್ಯಕ್ಷರು ಮತ್ತು ಕೆಎಂಎಫ್‌ ಪ್ರತಿನಿಧಿಯ ಆಯ್ಕೆ ಸಹ ನಡೆಯಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ