ಆ್ಯಪ್ನಗರ

‘ರಾಷ್ಟ್ರಾಭಿಮಾನಕ್ಕೆ ಶಿವಾಜಿ ಪ್ರೇರಣೆ’

ಹಿಂದೂ ಧರ್ಮವನ್ನು ಸಂರಕ್ಷಿಸುವ ಜತೆಗೆ ದೇಶಾಭಿಮಾನ ಮೈಗೂಡಿಸಿಕೊಂಡು ಆದರ್ಶ ಪುರುಷರಾಗಿದ್ದ ಛತ್ರಪತಿ ಶಿವಾಜಿ ಅವರ ವಿಚಾರಧಾರೆಗಳು ಎಲ್ಲರಿಗೂ ದಾರಿದೀಪವಾಗಿವೆ ಎಂದು ಚೈತ್ರಾ ಕುಂದಾಪುರ ಹೇಳಿದರು.

Vijaya Karnataka 2 Jul 2018, 5:00 am
ಶಿವಮೊಗ್ಗ: ಹಿಂದೂ ಧರ್ಮವನ್ನು ಸಂರಕ್ಷಿಸುವ ಜತೆಗೆ ದೇಶಾಭಿಮಾನ ಮೈಗೂಡಿಸಿಕೊಂಡು ಆದರ್ಶ ಪುರುಷರಾಗಿದ್ದ ಛತ್ರಪತಿ ಶಿವಾಜಿ ಅವರ ವಿಚಾರಧಾರೆಗಳು ಎಲ್ಲರಿಗೂ ದಾರಿದೀಪವಾಗಿವೆ ಎಂದು ಚೈತ್ರಾ ಕುಂದಾಪುರ ಹೇಳಿದರು.
Vijaya Karnataka Web shivaji spirit to patriot
‘ರಾಷ್ಟ್ರಾಭಿಮಾನಕ್ಕೆ ಶಿವಾಜಿ ಪ್ರೇರಣೆ’


ನಗರದ ಅಂಬೇಡ್ಕರ್‌ ಭವನದಲ್ಲಿ ಭಾನುವಾರ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್‌(ಕೆಕೆಎಂಪಿ), ಕೆಕೆಎಂಪಿ ಶಿವಮೊಗ್ಗ ಶಾಖೆ ಹಾಗೂ ಕ್ಷತ್ರಿಯ ಮರಾಠ ಕ್ಷೇಮಾಭಿವೃದ್ಧಿ ಸಂಘ ಏರ್ಪಡಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ 344ನೇ ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿ ಅವರು ಮಾತನಾಡಿದರು.

ರಾಷ್ಟಾಭಿಮಾನಕ್ಕೆ ಶಿವಾಜಿ ಎನ್ನುವ ಹೆಸರೇ ಪ್ರೇರಣಾ ಶಕ್ತಿ. ಇತಿಹಾಸ ಪ್ರಸಿದ್ಧ ಮರಾಠ ಸಾಮಾಜ್ಯ ಸ್ಥಾಪಿಸಿದ ಶಿವಾಜಿ ಚಿಕ್ಕವಯಸ್ಸಿನಲ್ಲೇ ದೇಶಾಭಿಮಾನ ಬೆಳೆಸಿಕೊಂಡಿದ್ದರು. ಸ್ವರಾಜ್ಯ ಕಲ್ಪನೆ ರೂವಾರಿಯಾಗಿದ್ದ ಶಿವಾಜಿಗೆ ಆತನ ತಾಯಿಯೇ ಉತ್ತಮ ವ್ಯಕ್ತಿತ್ವ ರೂಪಿಸುವ ಶಕ್ತಿಯಾಗಿದ್ದಳು ಎಂದರು.

ಶಾಸಕ ಕೆ.ಎಸ್‌.ಈಶ್ವರಪ್ಪ ಮಾತನಾಡಿ, ಛತ್ರಪತಿ ಶಿವಾಜಿ ಕೇವಲ ಒಂದು ಜಾತಿ, ಧರ್ಮ, ರಾಜ್ಯಕ್ಕೆ ಸೀಮಿತವಾಗಿಲ್ಲ. ಇಡೀ ದೇಶದ ಯುವಕರಿಗೆ ಸ್ಫೂರ್ತಿಯ ಸೆಲೆಯಾಗಿದ್ದಾರೆ. ಆ ಹಿನ್ನೆಲೆಯಲ್ಲಿ ಶಿವಾಜಿ ಜಯಂತಿಯನ್ನು ಸರಕಾರವೇ ಆಚರಿಸುವಂತಾಗಬೇಕೆಂದರು. ಶಿವಾಜಿ ಜಯಂತಿ ಕೇವಲ ಆಚರಣೆಗೆ ಸೀಮಿತವಾಗಬಾರದು. ಅವರ ಆದರ್ಶ ಪಾಲಿಸಬೇಕು. ಧೈರ್ಯ, ಸಾಹಸ ಎಲ್ಲರಿಗೂ ಮಾದರಿಯಾಗಬೇಕು. ಹಿಂದೂ ಸಾಮ್ರಾಜ್ಯ ಹಿಂದೂಗಳಿಗೆ ಮಾತ್ರ ಸೀಮಿತವಲ್ಲ. ಇದು ಇಲ್ಲಿರುವ ಎಲ್ಲರಿಗೂ ಅನ್ವಯವಾಗುತ್ತದೆ. ಈ ದೇಶದ ಅಂತಃಕರಣ ಹಿಂದುತ್ವ ಎಂಬುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕಿದೆ ಎಂದರು. ವಿಧಾನ ಪರಿಷತ್‌ ಸದಸ್ಯ ಎಸ್‌.ರುದ್ರೇಗೌಡ ಮಾತನಾಡಿದರು. ಕೆಕೆಎಂಪಿ ಅಧ್ಯಕ್ಷ ಎಸ್‌.ಸುರೇಶ್‌ರಾವ್‌ ಸಾಠೆ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಚಂದ್ರಶೇಖರ್‌, ಕೆಕೆಎಂಪಿ ಗೌವರ್ನಿಂಗ್‌ ಕೌನ್ಸಿಲ್‌ ಛೇರ್ಮನ್‌ ವಿ.ಎ.ರಾಣೇಜಿರಾವ್‌ ಸಾಠೆ, ಕೆಕೆಎಂಪಿ ರಾಜ್ಯ ಸಮಿತಿ ಸಲಹೆಗಾರ ಆರ್‌.ಚಂದ್ರರಾವ್‌ ಘಾರ್ಗೆ, ರಾಜ್ಯ ಉಪಾಧ್ಯಕ್ಷರಾದ ಟಿ.ಆರ್‌.ವೆಂಕಟರಾವ್‌ ಚೌಹಾಣ್‌ ಮತ್ತಿತರರು ಇದ್ದರು. ಇದೇ ವೇಳೆ ಸಮಾಜದ ಬಾಂಧವರಿಗೆ ವೃದ್ಧಾಪ್ಯ ವೇತನ ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.


ನೆರೆಯ ದೇಶಗಳ ಶತ್ರುಗಳಿಗಿಂತ ನಮ್ಮ ನಡುವೆಯೇ ಇದ್ದು ಧರ್ಮದ ಅವಹೇಳನ ಮಾಡುವವರು ಮತ್ತು ಧರ್ಮ ವಿಭಜನೆ ಮಾಡುವವರು ನಿಜವಾದ ಶತ್ರುಗಳು. ಜಾತಿ, ಧರ್ಮದ ಹೆಸರಲ್ಲಿ ಸಮಾಜ ಒಡೆಯುವ ಕೆಲಸ ಮಾಡಲಾಗುತ್ತಿದೆ. ಇಂಥವರ ಬಗ್ಗೆ ಜಾಗೃತವಾಗಿರಬೇಕು. ನಮ್ಮ ಹೆಣ್ಣು ಮಕ್ಕಳ ಮಾನ, ಪ್ರಾಣ ಉಳಿಸುವ ಕೆಲಸವನ್ನು ನಾವೇ ಮಾಡಬೇಕಿದೆ.

-ಚೈತ್ರಾ ಕುಂದಾಪುರ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ