ಆ್ಯಪ್ನಗರ

ಸಿದ್ದರಾಮಯ್ಯ ಜನತೆ ಮುಂದೆ ಕ್ಷಮೆಯಾಚಿಸಲಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರ ಬಗ್ಗೆ ಏಕವಚನದಲ್ಲಿ ಮಾತನಾಡುವ ಮೂಲಕ ದೇಶದ ಜನತೆಗೆ ನೋವುಂಟು ಮಾಡಿದ್ದಾರೆ. ಹೀಗಾಗಿ ಅವರು ಜನತೆ ಮುಂದೆ ಕ್ಷಮೆಯಾಚಿಸಬೇಕೆಂದು ಶಾಸಕ ಕೆ.ಎಸ್‌.ಈಶ್ವರಪ್ಪ ಒತ್ತಾಯಿಸಿದರು.

Vijaya Karnataka 7 May 2019, 5:00 am
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರ ಬಗ್ಗೆ ಏಕವಚನದಲ್ಲಿ ಮಾತನಾಡುವ ಮೂಲಕ ದೇಶದ ಜನತೆಗೆ ನೋವುಂಟು ಮಾಡಿದ್ದಾರೆ. ಹೀಗಾಗಿ ಅವರು ಜನತೆ ಮುಂದೆ ಕ್ಷಮೆಯಾಚಿಸಬೇಕೆಂದು ಶಾಸಕ ಕೆ.ಎಸ್‌.ಈಶ್ವರಪ್ಪ ಒತ್ತಾಯಿಸಿದರು.
Vijaya Karnataka Web KS Eshwarappa-new.1


ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಸಿದ್ದರಾಮಯ್ಯ ಅವರು ರಾಜ್ಯಕ್ಕೆ ಮಾತ್ರ ಮುಖ್ಯಮಂತ್ರಿ ಆದವರು, ಮೋದಿ ದೇಶಕ್ಕೆ ಪ್ರಧಾನಿಯಾಗಿದ್ದಾರೆ. ಅವರನ್ನು ಜಗತ್ತೆ ಮೆಚ್ಚಿಕೊಂಡು ಕೊಂಡಾಡುತ್ತಿದೆ. ಹೀಗಿರುವಾಗ ಸಿದ್ದರಾಮಯ್ಯ ಅವರು ಮೋದಿ ಬಗ್ಗೆ ಏಕವಚನದಲ್ಲಿ ಮಾತನಾಡುವ ಮೂಲಕ ಜನರ ಮನಸ್ಸಿಗೆ ನೋವುಂಟು ಮಾಡಿದ್ದಾರೆ ಎಂದು ದೂರಿದರು.

ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸುತ್ತೇನೆ:

ಬಿಜೆಪಿ ಎಂದೂ ಕೂಡ ತತ್ವ ಸಿದ್ಧಾಂತಗಳನ್ನು ಬಿಟ್ಟು ಹೋಗಿಲ್ಲ. ಸಿದ್ಧಾಂತಗಳ ಆಧಾರದ ಮೇಲೆ ನಡೆದುಕೊಂಡು ಬರುತ್ತಿದೆ. ರಾಜ್ಯಾಧ್ಯಕ್ಷರ ನೇಮಕಾತಿ ಕೂಡ ಇದರ ಮೇಲೆ ನಡೆಯಲಿದೆ. ಯಡಿಯೂರಪ್ಪ ಅವರು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪ್ರತಿ ಪಕ್ಷ ನಾಯಕ ಎರಡೂ ಸ್ಥಾನದಲ್ಲೂ ಇರುವುದರಿಂದ ಅವರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಈ ಸ್ಥಾನಕ್ಕೆ ಹಿರಿಯ ನಾಯಕರನ್ನು ನೇಮಕ ಮಾಡಲಿದ್ದಾರೆ ಎಂದರು.

ಪಕ್ಷದಲ್ಲಿ ನಾನು ಎಂದೂ ಕೂಡ ಇದೇ ಸ್ಥಾನ ಕೊಡಿ ಎಂದು ಕೇಳಿದವನ್ನಲ್ಲ. ಪಕ್ಷ ನನಗೆ ಈ ಹಿಂದೆ ನೀಡಿದ್ದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಈಗ ಪಕ್ಷ ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ಅದನ್ನೂ ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುತ್ತೇನೆ ಎಂದು ಇಂಗಿತ ವ್ಯಕ್ತಪಡಿಸಿದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ