ಆ್ಯಪ್ನಗರ

ಸಿದ್ದರಾಮಯ್ಯ, ಜಮೀರ್‌, ದಿಗ್ವಿಜಯ ಸಿಂಗ್‌ ಪಾಕಿಸ್ತಾನ ಪರ: ಈಶ್ವರಪ್ಪ

ಗೋಹತ್ಯೆ ನಿಷೇಧವನ್ನು ವಿರೋಧಿಸುವ ಸಿದ್ದರಾಮಯ್ಯ, ಅವರ ಬ್ಯಾಟಿಂಗ್‌ ಮಾಡುವ ಜಮೀರ್‌ ಅಹ್ಮದ್‌, ಕಲಂ 370 ಬಗ್ಗೆ ಹೇಳಿಕೆ ನೀಡಿರುವ ದಿಗ್ವಿಜಯ್‌ ಸಿಂಗ್‌ ಇವರೆಲ್ಲ ಪಾಕಿಸ್ತಾನ ಪರ ಇರುವವರು ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಆರೋಪಿಸಿದರು.

Vijaya Karnataka 13 Jun 2021, 10:14 pm
ಶಿವಮೊಗ್ಗ: ಗೋಹತ್ಯೆ ನಿಷೇಧವನ್ನು ವಿರೋಧಿಸುವ ಸಿದ್ದರಾಮಯ್ಯ, ಅವರ ಬ್ಯಾಟಿಂಗ್‌ ಮಾಡುವ ಜಮೀರ್‌ ಅಹ್ಮದ್‌, ಕಲಂ 370 ಬಗ್ಗೆ ಹೇಳಿಕೆ ನೀಡಿರುವ ದಿಗ್ವಿಜಯ್‌ ಸಿಂಗ್‌ ಇವರೆಲ್ಲ ಪಾಕಿಸ್ತಾನ ಪರ ಇರುವವರು ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಆರೋಪಿಸಿದರು.
Vijaya Karnataka Web KS eshwarappa


ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿಗ್ವಿಜಯ ಸಿಂಗ್‌ ಅವರದ್ದು ರಾಷ್ಟ್ರ ದ್ರೋಹದ ಹೇಳಿಕೆಯಾಗಿದೆ. ದೇಶದಲ್ಲಿ ಹಿಂದೂ, ಮುಸ್ಲಿಮರು ಶಾಂತಿಯಿಂದ ಇರಬೇಕು ಎನ್ನುವ ಕಲ್ಪನೆಯೇ ಇವರಿಗಿಲ್ಲ ಎಂದು ಟೀಕಿಸಿದರು.

ಕಾಂಗ್ರೆಸ್‌ನಲ್ಲಿ ಯಾರು ಏನು ಬೇಕಾದರೂ ಹೇಳಬಹುದು. ಇಲ್ಲ ಎನ್ನುವುದಾದರೆ ದಿಗ್ವಿಜಯ ಸಿಂಗ್‌ ಅವರ ಹೇಳಿಕೆಯನ್ನು ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಒಪ್ಪುತ್ತಾರಾ ಎಂದು ಪ್ರಶ್ನಿಸಿದರು.

ಶಿವಮೊಗ್ಗ ವೈದ್ಯಕೀಯ ಸಂಸ್ಥೆಯಲ್ಲಿ ಕೋವಿಡ್ ಮರಣ ಪರಿಶೀಲನೆಗೆ ಸಮಿತಿ: ಸಚಿವ ಸುಧಾಕರ್

ಆದರೆ, ಬಿಜೆಪಿಯಲ್ಲಿ ಹಾಗಲ್ಲ. ಈ ಪಕ್ಷದಲ್ಲಿ ಪ್ರಜಾಪ್ರಭುತ್ವ ಇದೆ. ಇಲ್ಲಿ ಹೇಳುವವರು, ಕೇಳುವವರು ಇದ್ದಾರೆ. ಇದು ಬಿಜೆಪಿ ವಿಶೇಷತೆ ಎಂದು ತಿಳಿಸಿದರು.

ಅರುಣ್‌ ಸಿಂಗ್‌ ಪ್ರವಾಸ:
ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಜೂನ್‌ 16ರಿಂದ ಮೂರು ದಿನ ಪ್ರವಾಸ ಕೈಗೊಂಡು ಕ್ಯಾಬಿನೆಟ್‌ ಸಚಿವರು, ಕೋರ್‌ ಕಮಿಟಿ ಸದಸ್ಯರು, ಶಾಸಕರ ಜೊತೆ ಸಭೆ ನಡೆಸಲಿದ್ದಾರೆ. ಇಲ್ಲಿ ಶಾಸಕರು ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಅವಕಾಶ ಕಲ್ಪಿಸಲಾಗಿದೆ. ಅರುಣ್‌ ಸಿಂಗ್‌ ಭೇಟಿಯಿಂದ ಎಲ್ಲ ಸಮಸ್ಯೆಗಳು ಬಗೆಹರಿಯಲಿವೆ ಎಂದು ಹೇಳಿದರು.

ರಾಜ್ಯದಲ್ಲಿ ಮತ್ತಷ್ಟು ಇಳಿಕೆಯಾದ ಕೊರೊನಾ ಕೇಸ್‌, ಆದರೆ ಕೆಳಕ್ಕಿಳಿಯುತ್ತಿಲ್ಲ ಸಾವಿನ ಸಂಖ್ಯೆ

ಯಾವುದೇ ಕಾರಣಕ್ಕೂ ಯಾರೂ ನಾಯಕತ್ವ ಬದಲಾವಣೆ ವಿಚಾರದಲ್ಲಿ ಪರ ವಿರೋಧದ ಹೇಳಿಕೆ ನೀಡುವಂತಿಲ್ಲ. ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷರ ಆದಿಯಾಗಿ ಯಾರೂ ಹೇಳಿಕೆ ನೀಡದಂತೆ ಸೂಚನೆ ನೀಡಲಾಗಿದೆ. ಜತೆಗೆ, ಯೋಗೇಶ್ವರ್‌ ಕೂಡ ಹೇಳಿಕೆ ನೀಡದಂತೆ ವರಿಷ್ಠರು ತಿಳಿಸಿದ್ದಾರೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ