ಶಿವಮೊಗ್ಗ: ರಾಜ್ಯದ ಪ್ರಸಿದ್ಧ ಧಾರ್ಮಿಕ ಶ್ರದ್ಧಾ ಕೇಂದ್ರ ಸಿಗಂದೂರು ಚೌಡೇಶ್ವರಿ ದೇಗುಲವನ್ನು ಯಾವುದೇ ಕಾರಣಕ್ಕೂ ಮುಜರಾಯಿ ಇಲಾಖೆಗೆ ಸೇರಿಸಬಾರದು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾಆರ್ಯ ಈಡಿಗರ ಸಂಘದಿಂದ ಬುಧವಾರ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಯಿತು. ಶಿವಮೊಗ್ಗದಲ್ಲಿ ಸಚಿವರನ್ನು ಭೇಟಿ ಮಾಡಿದ ಸಂಘದ ಪ್ರಮುಖರು, ಹಿಂದುಳಿದವರು ಹಾಗೂ ಈಡಿಗರ ಆರಾಧ್ಯ ದೇವಿಯಾದ ಚೌಡೇಶ್ವರಿ ದೇಗುಲವನ್ನು ಮುಜರಾಯಿ ಇಲಾಖೆಗೆ ಸೇರಿಸಬೇಕೆಂಬ ಹುನ್ನಾರ ನಡೆಯುತ್ತಿದೆ. ಇದನ್ನು ಈಡಿಗ ಸಮುದಾಯ ಖಂಡಿಸುತ್ತದೆ. ನಮ್ಮ ಸಮುದಾಯದ ಧಾರ್ಮಿಕ ಅಸ್ಮಿತೆಯಾದ ದೇಗುಲದ ಆಡಳಿತವು ಧರ್ಮದರ್ಶಿ ಡಾ.ರಾಮಪ್ಪ ಅವರ ನೇತೃತ್ವದಲ್ಲಿ ಉತ್ತಮವಾಗಿ ನಡೆಯುತ್ತಿದೆ ಎಂದು ವಿವರಿಸಿದರು.
ಈಡಿಗರ ಕುಲದೇವತೆಯಾದ ದೇವಸ್ಥಾನದ ಜಾಗಕ್ಕೆ ಸಂಬಂಧಪಟ್ಟ ವಿವಾದ ನ್ಯಾಯಾಲಯದಲ್ಲಿದೆ. ಈ ಪ್ರಕರಣದಲ್ಲಿ ಮುಜರಾಯಿ ಇಲಾಖೆಯೂ ಒಂದು ಪಾರ್ಟಿಯಾಗಿರುತ್ತದೆ. ಆದರೆ ಈ ಹಂತದಲ್ಲಿ ಇಲಾಖೆ ಮೇಲೆ ಕೆಲವರು ಒತ್ತಡ ಹೇರಿ ಮುಜರಾಯಿ ಆಯುಕ್ತರ ಮೂಲಕ ದೇವಸ್ಥಾನವನ್ನು ಸರಕಾರದ ವಶಕ್ಕೆ ಪಡೆಯುವ ಯತ್ನ ನಡೆಯುತ್ತಿರುವ ಬಗ್ಗೆ ಮಾಹಿತಿ ಇದೆ ಎಂದು ಮುಖಂಡರು ಆರೋಪಿಸಿದ್ದಾರೆ.
ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು, ಪ್ರಕರಣ ನ್ಯಾಯಾಲಯದಲ್ಲಿದೆ. ಈ ಹಂತದಲ್ಲಿ ಇಲಾಖೆ ನ್ಯಾಯಾಲಯದ ಆದೇಶದಂತೆ ನಡೆಯಬೇಕಾಗುತ್ತದೆ. ದೇವಸ್ಥಾನ ಸಮುದಾಯದ ಆಡಳಿತದಲ್ಲಿಯೇ ಇರಬೇಕೆಂಬ ಬಯಕೆ ನನ್ನದು. ಸಮಾಜದ ಪ್ರಮುಖರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ವಿಷಯದ ಬಗ್ಗೆ ಮನವಿ ಸಲ್ಲಿಸಿ ಮತ್ತು ನ್ಯಾಯಾಲಯಕ್ಕೆ ಅಗತ್ಯವಿರುವ ದಾಖಲೆ ನೀಡಿ, ದೇವಸ್ಥಾನ ಉಳಿಸಿಕೊಳ್ಳಲು ಪ್ರಯತ್ನ ಮಾಡಿ ಎಂದು ಸಲಹೆ ನೀಡಿದರು.
ಜಿಲ್ಲಾ ಆರ್ಯ ಈಡಿಗ ಸಂಘದ ಅಧ್ಯಕ್ಷ ಆರ್. ಶ್ರೀಧರ್ ಹುಲ್ತಿಕೊಪ್ಪ, ಕಾರ್ಯದರ್ಶಿ ಎಸ್. ಸಿ. ರಾಮಚಂದ್ರ, ಪದಾಧಿಕಾರಿಗಳಾದ ಜಿ. ಡಿ. ಮಂಜುನಾಥ್, ಸುರೇಶ್ ಕೆ. ಬಾಳೇಗುಂಡಿ, ಮಹೇಶ್, ಸುಧಾಕರ್ ಶೆಟ್ಟಿಹಳ್ಳಿ, ಬಸವರಾಜ್ ಇತರರಿದ್ದರು.
ಈಡಿಗರ ಕುಲದೇವತೆಯಾದ ದೇವಸ್ಥಾನದ ಜಾಗಕ್ಕೆ ಸಂಬಂಧಪಟ್ಟ ವಿವಾದ ನ್ಯಾಯಾಲಯದಲ್ಲಿದೆ. ಈ ಪ್ರಕರಣದಲ್ಲಿ ಮುಜರಾಯಿ ಇಲಾಖೆಯೂ ಒಂದು ಪಾರ್ಟಿಯಾಗಿರುತ್ತದೆ. ಆದರೆ ಈ ಹಂತದಲ್ಲಿ ಇಲಾಖೆ ಮೇಲೆ ಕೆಲವರು ಒತ್ತಡ ಹೇರಿ ಮುಜರಾಯಿ ಆಯುಕ್ತರ ಮೂಲಕ ದೇವಸ್ಥಾನವನ್ನು ಸರಕಾರದ ವಶಕ್ಕೆ ಪಡೆಯುವ ಯತ್ನ ನಡೆಯುತ್ತಿರುವ ಬಗ್ಗೆ ಮಾಹಿತಿ ಇದೆ ಎಂದು ಮುಖಂಡರು ಆರೋಪಿಸಿದ್ದಾರೆ.
ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು, ಪ್ರಕರಣ ನ್ಯಾಯಾಲಯದಲ್ಲಿದೆ. ಈ ಹಂತದಲ್ಲಿ ಇಲಾಖೆ ನ್ಯಾಯಾಲಯದ ಆದೇಶದಂತೆ ನಡೆಯಬೇಕಾಗುತ್ತದೆ. ದೇವಸ್ಥಾನ ಸಮುದಾಯದ ಆಡಳಿತದಲ್ಲಿಯೇ ಇರಬೇಕೆಂಬ ಬಯಕೆ ನನ್ನದು. ಸಮಾಜದ ಪ್ರಮುಖರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ವಿಷಯದ ಬಗ್ಗೆ ಮನವಿ ಸಲ್ಲಿಸಿ ಮತ್ತು ನ್ಯಾಯಾಲಯಕ್ಕೆ ಅಗತ್ಯವಿರುವ ದಾಖಲೆ ನೀಡಿ, ದೇವಸ್ಥಾನ ಉಳಿಸಿಕೊಳ್ಳಲು ಪ್ರಯತ್ನ ಮಾಡಿ ಎಂದು ಸಲಹೆ ನೀಡಿದರು.
ಜಿಲ್ಲಾ ಆರ್ಯ ಈಡಿಗ ಸಂಘದ ಅಧ್ಯಕ್ಷ ಆರ್. ಶ್ರೀಧರ್ ಹುಲ್ತಿಕೊಪ್ಪ, ಕಾರ್ಯದರ್ಶಿ ಎಸ್. ಸಿ. ರಾಮಚಂದ್ರ, ಪದಾಧಿಕಾರಿಗಳಾದ ಜಿ. ಡಿ. ಮಂಜುನಾಥ್, ಸುರೇಶ್ ಕೆ. ಬಾಳೇಗುಂಡಿ, ಮಹೇಶ್, ಸುಧಾಕರ್ ಶೆಟ್ಟಿಹಳ್ಳಿ, ಬಸವರಾಜ್ ಇತರರಿದ್ದರು.