ಆ್ಯಪ್ನಗರ

ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಸಹಿ ಸಂಗ್ರಹ ಅಭಿಯಾನ

ಲೋಕಸಭಾ ಸಾರ್ವತ್ರಿಕ ಚುನಾವಣೆಯ ಸೋಲಿನ ಹೊಣೆಯೊತ್ತು ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ರಾಹುಲ್‌ ಗಾಂಧಿಯ ರಾಜೀನಾಮೆ ನಿರ್ಧಾರವನ್ನು ಕಾರ್ಯಕರ್ತರು ತಳ್ಳಿ ಹಾಕಿದ್ದು, ನಮಗೆ ರಾಹುಲ್‌ ಗಾಂಧಿಯೇ ನಾಯಕರು ಅವರೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಬೇಕು ಎಂದು ಒತ್ತಾಯಿಸಿ ನಗರದಲ್ಲಿ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಸಹಿ ಸಂಗ್ರಹ ಅಭಿಯಾನ ನಡೆಯಿತು.

Vijaya Karnataka 31 May 2019, 5:00 am
ಶಿವಮೊಗ್ಗ : ಲೋಕಸಭಾ ಸಾರ್ವತ್ರಿಕ ಚುನಾವಣೆಯ ಸೋಲಿನ ಹೊಣೆಯೊತ್ತು ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ರಾಹುಲ್‌ ಗಾಂಧಿಯ ರಾಜೀನಾಮೆ ನಿರ್ಧಾರವನ್ನು ಕಾರ್ಯಕರ್ತರು ತಳ್ಳಿ ಹಾಕಿದ್ದು, ನಮಗೆ ರಾಹುಲ್‌ ಗಾಂಧಿಯೇ ನಾಯಕರು ಅವರೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಬೇಕು ಎಂದು ಒತ್ತಾಯಿಸಿ ನಗರದಲ್ಲಿ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಸಹಿ ಸಂಗ್ರಹ ಅಭಿಯಾನ ನಡೆಯಿತು.
Vijaya Karnataka Web signature campaign from district congress
ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಸಹಿ ಸಂಗ್ರಹ ಅಭಿಯಾನ


ಶಿವಮೊಗ್ಗದ ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ಸಹಿ ಅಭಿಯಾನದಲ್ಲಿ ರಾಹುಲ್‌ ಗಾಂಧಿ ಅವರು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿರುವ ರಾಜೀನಾಮೆಯನ್ನು ಕೂಡಲೇ ಹಿಂಪಡೆದು ಅಧ್ಯಕ್ಷ ರಾಗಿ ಅವರೇ ಮುಂದುವರೆಯಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಎಸ್‌. ಸುಂದರೇಶ್‌, ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಹುಲ್‌ ಗಾಂಧಿಯೇ ಸೂಕ್ತ. ಅವರು ರಾಜೀನಾಮೆ ಹಿಂಪಡೆದು ಕಾಂಗ್ರೆಸ್‌ ಅಧ್ಯಕ್ಷ ರಾಗಿ ಮುಂದುವರೆಯುವಂತೆ ಮನವಿ ಮಾಡಿದರು.

ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್‌, ಮುಖಂಡರಾದ ಎಚ್‌.ಸಿ.ಯೋಗೀಶ್‌, ಕಾಶಿ ವಿಶ್ವನಾಥ್‌, ಚಂದ್ರಭೂಪಾಲ್‌, ಸುರೇಶ್‌ ಶೆಟ್ಟಿ, ಎಸ್‌.ಬಿ.ಶೇಷಾದ್ರಿ, ಅನಿತಾಕುಮಾರಿ, ವಿಜಯಲಕ್ಷ್ಮಿ ಸಿ.ಪಾಟೀಲ್‌, ಕೆ.ರಂಗನಾಥ್‌, ಮಧು ಸೂದನ್‌ ಮತ್ತಿತರರು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ