ಆ್ಯಪ್ನಗರ

ನೆಟ್‌ವರ್ಕ್ ಸಮಸ್ಯೆಗೆ ಮುಕ್ತಿ: ಶಿವಮೊಗ್ಗಕ್ಕೆ 4ಜಿ 225 ಮೊಬೈಲ್‌ ಟವರ್‌ ಮಂಜೂರು

Network Problem: ಮಲೆನಾಡು ಭಾಗದ ಜನರು ಎದುರಿಸುತ್ತಿರುವ ನೆಟ್‌ವರ್ಕ್ ಸಮಸ್ಯೆಗೆ ಕೊನೆಗೂ ಮುಕ್ತಿ ಸಿಗುವ ಶುಭ ಸುದ್ದಿ ಸಿಕ್ಕಿದೆ. ಇಲ್ಲಿನ ಜನರ ಬಹುಕಾಲದ ಬೇಡಿಕೆಗೆ ಸ್ಪಂದನೆ ಸಿಕ್ಕಿದೆ. ಸಂಸದ ಬಿವೈ ರಾಘವೇಂದ್ರ ಅವರ ನಿರಂತರ ಪ್ರಯತ್ನದಿಂದ ಶಿವಮೊಗ್ಗ ಟೆಲಿಕಾಂ ಜಿಲ್ಲೆಗೆ 198 ಮತ್ತು ಬೈಂದೂರು ಕ್ಷೇತ್ರಕ್ಕೆ 27 ಸೇರಿದಂತೆ ಒಟ್ಟು 225 ಹೊಸ ಮೊಬೈಲ್‌ ಟವರ್‌ಗಳನ್ನು ಕೇಂದ್ರ ಸರಕಾರ ಮಂಜೂರು ಮಾಡಿದೆ.

Edited byಶ್ರೀಲಕ್ಷ್ಮೀ ಎಚ್ಎಲ್ | Vijaya Karnataka Web 27 May 2023, 11:41 pm

ಹೈಲೈಟ್ಸ್‌:

  • ಶಿವಮೊಗ್ಗಕ್ಕೆ 4ಜಿ 225 ಮೊಬೈಲ್‌ ಟವರ್‌ ಮಂಜೂರು
  • ವರ್ಷಾಂತ್ಯದೊಳಗೆ ಮೊಬೈಲ್‌ ನೆಟ್‌ವರ್ಕ್ ಸಮಸ್ಯೆಗೆ ಮುಕ್ತಿ
  • ಬಿಎಸ್‌ಎನ್‌ಎಲ್ ಹಿರಿಯ ಅಧಿಕಾರಿಗಳ ಜೊತೆ ಸಭೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web telecom tower
ಶಿವಮೊಗ್ಗ: ಇಲ್ಲಿನ ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿಈ ವರ್ಷಾಂತ್ಯದೊಳಗೆ ಮೊಬೈಲ್‌ ನೆಟ್‌ವರ್ಕ್ ಸಮಸ್ಯೆಗೆ ಮುಕ್ತಿ ಹಾಡಲಿದೆ.
ಹೌದು, ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರದೊಂದಿಗೆ ನಿರಂತರ ಸಂಪರ್ಕ ಸಾಧಿಸಿ ತಮ್ಮ ಕ್ಷೇತ್ರದ ಪಶ್ಚಿಮಘಟ್ಟ ವ್ಯಾಪ್ತಿಯ ದಟ್ಟ ಅರಣ್ಯದ ನಿವಾಸಿಗಳ ಮೊಬೈಲ್‌ ನೆಟ್‌ವರ್ಕ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ದಾಖಲೆಯ ಮೊಬೈಲ್‌ ಟವರ್‌ಗಳಿಗೆ ಮಂಜೂರು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

4ಜಿ ಸ್ಯಾಚುರೇಷನ್‌ ಯೋಜನೆಯಡಿ ಶಿವಮೊಗ್ಗ ಟೆಲಿಕಾಂ ಜಿಲ್ಲೆಗೆ 198 ಮತ್ತು ಬೈಂದೂರು ಕ್ಷೇತ್ರಕ್ಕೆ 27 ಸೇರಿದಂತೆ ಒಟ್ಟು 225 ಹೊಸ ಮೊಬೈಲ್‌ ಟವರ್‌ಗಳನ್ನು ಕೇಂದ್ರ ಸರಕಾರ ಮಂಜೂರು ಮಾಡಿದೆ. ರಾಘವೇಂದ್ರ ಅವರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣವ್‌ ಮೊಬೈಲ್‌ ಟವರ್‌ಗಳನ್ನು ಮಂಜೂರು ಮಾಡಿದ್ದಾರೆ.

2025ಕ್ಕೆ ಶಿವಮೊಗ್ಗ-ಶಿಕಾರಿಪುರ ರೈಲು ಮಾರ್ಗ ಪೂರ್ಣ
ಪ್ರತಿ ಟವರ್‌ ನಿರ್ಮಾಣಕ್ಕೆ 75 ಲಕ್ಷದಿಂದ 1 ಕೋಟಿ ರೂ. ವೆಚ್ಚ ತಗುಲಲಿದ್ದು ಒಟ್ಟಾರೆ 200 ಕೋಟಿ ರೂ.ಗಳಿಗೂ ಹೆಚ್ಚಿನ ವೆಚ್ಚವನ್ನು ಯುಎಸ್‌ಓಎಫ್‌ ಅನುದಾನದಲ್ಲಿ ಭರಿಸಲಾಗುತ್ತದೆ.

ಟವರ್‌ಗಳ ನಿರ್ಮಾಣಕ್ಕೆ ಗುತ್ತಿಗೆದಾರರ ನೇಮಕವಾಗಿದ್ದು ಡಿಸೆಂಬರ್‌ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಸಂಸದ ರಾಘವೇಂದ್ರ ಅವರು ತಿಳಿಸಿದ್ದಾರೆ.

ಪಶ್ಚಿಮಘಟ್ಟದ ಅರಣ್ಯದೊಳಗಿನ ಕುಗ್ರಾಮಗಳು ದೂರಸಂಪರ್ಕ ವ್ಯವಸ್ಥೆಯಿಂದ ವಂಚಿತವಾಗಿದ್ದರಿಂದ ಕಳೆದ ಮೂರ್ನಾಲ್ಕು ವರ್ಷಗಳಿಂದ ಮೊಬೈಲ್‌ ಟವರ್‌ಗಳ ಸ್ಥಾಪನೆಗೆ ರಾಜ್ಯ ಮತ್ತು ಕೇಂದ್ರ ಸರಕಾರವನ್ನು ಒತ್ತಾಯಿಸಲಾಗಿತ್ತು. ಬಿಎಸ್‌ಎನ್‌ಎಲ್‌, ಜಿಯೋ ಮತ್ತು ಏರ್‌ಟೆಲ್‌ ಕಂಪನಿಗಳಿಗೆ ಟವರ್‌ ಸ್ಥಾಪನೆಗೆ ಸೂಚನೆ ನೀಡಲಾಗಿತ್ತು. ಆದರೆ, ನಷ್ಟದ ನೆಪದಿಂದ ಖಾಸಗಿ ಸಂಸ್ಥೆಗಳು ಟವರ್‌ ನಿರ್ಮಾಣಕ್ಕೆ ಆಸಕ್ತಿ ತೋರಿಸಲಿಲ್ಲ. ಹೀಗಾಗಿ ಕೇಂದ್ರದ ಮೇಲೆ ಹೆಚ್ಚು ಒತ್ತಡ ಹಾಕಲಾಗಿತ್ತು.

ಪಿಎಸ್‌ಐ ನೇಮಕ ಹಗರಣ ತನಿಖೆಗೆ ನಿರ್ಣಯ- ಕಿಮ್ಮನೆ ರತ್ನಾಕರ್‌
ಇದರಲ್ಲಿ ಸಾಗರ ತಾಲೂಕಿಗೆ 89, ಹೊಸನಗರಕ್ಕೆ 35, ತೀರ್ಥಹಳ್ಳಿಗೆ 27, ಶಿವಮೊಗ್ಗಕ್ಕೆ 18, ಶಿಕಾರಿಪುರಕ್ಕೆ 13, ಭದ್ರಾವತಿ ಮತ್ತು ಸೊರಬ ತಾಲೂಕುಗಳಲ್ಲಿ ತಲಾ 8, ಬೈಂದೂರು ಕ್ಷೇತ್ರದಲ್ಲಿ 25 ಟವರ್‌ ನಿರ್ಮಾಣಕ್ಕೆ ಮಂಜೂರು ನೀಡಲಾಗಿದೆ.

ಟವರ್‌ಗಳನ್ನು ಮೂರು ಹಂತಗಳಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು ಸೂಕ್ತ ಜಾಗವನ್ನು ಬಿಎಸ್‌ಎನ್‌ಎಲ್‌ ಅಧಿಕಾರಿಗಳು ಗುರುತಿಸಿ ಜಾಗ ಹಸ್ತಾಂತರಕ್ಕೆ ಜಿಲ್ಲಾಧಿಕಾರಿ ಮತ್ತು ಜಿಪಂ ಸಿಇಒ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಇದರಲ್ಲಿ ಈಗಾಗಲೆ 8 ಸ್ಥಳಗಳನ್ನು ಹಸ್ತಾಂತರಿಸಲಾಗಿದೆ. ಅಂತಿಮ ಹಂತದಲ್ಲಿರುವ ಶಿವಮೊಗ್ಗ ಜಿಲ್ಲೆಯ 73 ಮತ್ತು ಬೈಂದೂರ್‌ನ 23 ಸ್ಥಳಗಳ ಹಸ್ತಾಂತರ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಶಿವಮೊಗ್ಗ ಜಿಲ್ಲೆಯ 33 ಹಾಗೂ ಬೈಂದೂರ್‌ನ 2 ಸ್ಥಳಗಳಲ್ಲಿ ಟವರ್‌ ನಿರ್ಮಾಣಕ್ಕೆ ಕೇಂದ್ರ ಅರಣ್ಯ ಸಚಿವರನ್ನು ಕೋರಲಾಗಿದೆ.

ಶಿವಮೊಗ್ಗ: ತುಂಗೆಯ ಒಡಲಲ್ಲಿ ತ್ಯಾಜ್ಯ ರಾಶಿ-ಕಣ್ಮುಚ್ಚಿ ಕುಳಿತ ಆಡಳಿತ
ಅಧಿಕಾರಿಗಳ ಸಭೆ: ಯೋಜನೆಗಳ ಸಮರ್ಥ ಅನುಷ್ಠಾನಕ್ಕಾಗಿ ಸಂಸದ ಬಿ.ವೈ.ರಾಘವೇಂದ್ರ ಅವರು ಇತ್ತೀಚೆಗೆ ಶಿವಮೊಗ್ಗ ವಲಯದ ಬಿಎಸ್‌ಎನ್‌ಎಲ್‌ನ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಎಲ್ಲಯೋಜನೆಗಳನ್ನು ಕಾಲಮಿತಿಯೊಳಗೆ ಕಾರ್ಯಗತಗೊಳಿಸಬೇಕು. ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಸೂಚನೆ ನೀಡಿದರು.

ಮಳೆ ಗಾಳಿಯಿಂದಾಗಿ ಬಿಎಸ್‌ಎನ್‌ಎಲ್‌ ಸಂಪರ್ಕ ಅಲ್ಲಲ್ಲಿ ಹಾಳಾಗಿದ್ದು ಜನಸಾಮಾನ್ಯರಿಗೆ ಆನ್‌ಲೈನ್‌ ಸಂಪರ್ಕ ಮತ್ತು ವಹಿವಾಟಿಗೆ ಸಮಸ್ಯೆಯಾಗಿದೆ. ತ್ವರಿತಗತಿಯಲ್ಲಿದುರಸ್ತಿ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.

ಸಭೆಯಲ್ಲಿಡಿಜಿಎಂ(ಆಪರೇಷನ್‌) ವೆಂಕಟೇಶ್‌, ಸಬ್‌ ಡಿವಿಜನಲ್‌ ಎಂಜಿನಿಯರ್‌ಗಳಾದ ರಾಜು ಹಾಗೂ ಜಯಕುಮಾರ್‌, ಎಜಿಎಂ(ಅಪರೇಷನ್‌) ಎನ್‌.ಬಿ.ಹೆಬ್ಬಾಳ್‌, ಜೆಟಿಓ ರಾಘವೇಂದ್ರ ಇದ್ದರು.
ಲೇಖಕರ ಬಗ್ಗೆ
ಶ್ರೀಲಕ್ಷ್ಮೀ ಎಚ್ಎಲ್
ಶ್ರೀಲಕ್ಷ್ಮೀ ಅವರು ಮಲೆನಾಡ ಹೆಬ್ಬಾಗಿಲು ಶಿವಮೊಗ್ಗೆಯವರು. ಕಳೆದ 5 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಸದ್ಯ ವಿಜಯ ಕರ್ನಾಟಕ ಆನ್‌ಲೈನ್‌ ನಲ್ಲಿ ಡಿಜಿಟಲ್ ಕಂಟೆಂಟ್ ಪ್ರೊಡ್ಯೂಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ದೇಶೀಯ ಸುದ್ದಿಗಳು, ಲೈಫ್‌ಸ್ಟೈಲ್ ಸುದ್ದಿಗಳನ್ನು ಬರೆಯುವುದು ಅಚ್ಚುಮೆಚ್ಚು. ಹೊಸ ಹೊಸ ವಿಚಾರಗಳಿಗೆ ತೆರೆದುಕೊಳ್ಳುವುದು, ಕಲಿಯುವುದು, ಹೊಸ ಜಾಗಗಳಿಗೆ ಭೇಟಿ ನೀಡುವುದು ಇಷ್ಟದ ವಿಚಾರ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ