ಆ್ಯಪ್ನಗರ

ನಾಡ ಕಚೇರಿಗಳಲ್ಲಿ ತಾಂತ್ರಿಕ ಸಮಸ್ಯೆ ಬಗೆಹರಿಸಿ

ತಾಲೂಕಿನ 6 ಹೋಬಳಿಗಳ ನಾಡ ಕಚೇರಿಗಳಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ರೈತರ ಕೆಲಸಗಳಿಗೆ ಹಿನ್ನಡೆಯಾಗುತ್ತಿದೆ ಎಂದು ಆರೋಪಿಸಿ ಶ್ರೀಬ್ರಹ್ಮ ನಾರಾಯಣ ಗುರು ಧರ್ಮಪರಿಪಾಲನಾ ಸಂಘದಿಂದ ಗುರುವಾರ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

Vijaya Karnataka 19 Jul 2019, 5:00 am
ಸೊರಬ: ತಾಲೂಕಿನ 6 ಹೋಬಳಿಗಳ ನಾಡ ಕಚೇರಿಗಳಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ರೈತರ ಕೆಲಸಗಳಿಗೆ ಹಿನ್ನಡೆಯಾಗುತ್ತಿದೆ ಎಂದು ಆರೋಪಿಸಿ ಶ್ರೀಬ್ರಹ್ಮ ನಾರಾಯಣ ಗುರು ಧರ್ಮಪರಿಪಾಲನಾ ಸಂಘದಿಂದ ಗುರುವಾರ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
Vijaya Karnataka Web SMR-18SRBP1


ಸಂಘದ ಜಿಲ್ಲಾಧ್ಯಕ್ಷ ಪ್ರವೀಣ ಹಿರೇಇಡಗೋಡು ಮಾತನಾಡಿ ಕಸಬಾ, ಉಳವಿ, ಆನವಟ್ಟಿ, ಜಡೆ, ಚಂದ್ರಗುತ್ತಿ, ಕುಪ್ಪಗಡ್ಡೆ ಹೋಬಳಿಯ ನಾಡ ಕಚೇರಿಯಲ್ಲಿ ರೈತರು ತಮ್ಮ ಕೆಲಸಗಳಿಗಾಗಿ ದಿನನಿತ್ಯ ಅಲೆದಾಡುತ್ತಿದ್ದಾರೆ. ಈ ಬಗ್ಗೆ ವಿಚಾರಿಸಿದರೆ ಇಲ್ಲಿನ ಸಿಬ್ಬಂದಿ ಸೂಕ್ತ ಮಾಹಿತಿ ನೀಡುತ್ತಿಲ್ಲ. ರೈತರನ್ನು ಮನಬಂದಂತೆ ನಡೆಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.

ಕುಪ್ಪಗಡ್ಡೆ ಹೋಬಳಿಯಲ್ಲಿ ಉಪ ತಹಸೀಲ್ದಾರ್‌ ಇಲ್ಲದೇ ಅನೇಕ ವರ್ಷಗಳಾವೆ. ಜಡೆ,ಆನವಟ್ಟಿ ಹೋಬಳಿಯ ಜನರು ತಾಲೂಕು ಕೇಂದ್ರಕ್ಕೆ ಸುಮಾರು 30 ಕಿ.ಮೀ. ದೂರದಿಂದ ಬರಬೇಕಿದೆ. ಇದರಿಂದ ಸಮಯ ವ್ಯರ್ಥವಾಗುತ್ತದೆ. ಸರಕಾರ ನಾಡ ಕಚೇರಿಯಲ್ಲಿ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಲ್ಲ ಸೌಲಭ್ಯ ಒದಗಿಸಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ತಲೆಕೆಡಿಸಿಕೊಳ್ಳುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಬಿಎಎಸ್‌ಎನ್‌ಡಿಪಿ ತಾಲೂಕು ಅಧ್ಯಕ್ಷ ಶಿವಕುಮಾರ್‌ ಬಿಳವಗೋಡು, ನಾಗೇಶ ರಾಜೀವನಗರ, ಶಿವರಾಜ ಮರೂರು ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ