ಆ್ಯಪ್ನಗರ

ಸ್ವಚ್ಛತೆ, ಪೌಷ್ಟಿಕ ಆಹಾರದಿಂದ ಸದೃಢ ಆರೋಗ್ಯ

ಭದ್ರಾವತಿ ತಾಲೂಕು ಸನ್ಯಾಸಿ ಕೋಡಮಗ್ಗಿಯ ಸರಕಾರಿ ಪ್ರೌಢಶಾಲೆಯಲ್ಲಿ ರೋಟರಿ ಕ್ಲಬ್‌ ಶಿವಮೊಗ್ಗ ಸೆಂಟ್ರಲ್‌ ಹಾಗೂ ಎಫ್‌ಪಿಎಐ, ಶಿವಮೊಗ್ಗ ಶಾಖೆ ವತಿಯಿಂದ ಬುಧವಾರ ಹದಿಹರೆಯದಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

Vijaya Karnataka 11 Jan 2019, 7:09 pm
ಶಿವಮೊಗ್ಗ: ಭದ್ರಾವತಿ ತಾಲೂಕು ಸನ್ಯಾಸಿ ಕೋಡಮಗ್ಗಿಯ ಸರಕಾರಿ ಪ್ರೌಢಶಾಲೆಯಲ್ಲಿ ರೋಟರಿ ಕ್ಲಬ್‌ ಶಿವಮೊಗ್ಗ ಸೆಂಟ್ರಲ್‌ ಹಾಗೂ ಎಫ್‌ಪಿಎಐ, ಶಿವಮೊಗ್ಗ ಶಾಖೆ ವತಿಯಿಂದ ಬುಧವಾರ ಹದಿಹರೆಯದಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
Vijaya Karnataka Web 11 SMG FPAI


ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಎಫ್‌ಪಿಎಐ ಉಪಾಧ್ಯಕ್ಷೆ ಜಯಲಕ್ಷ್ಮಿ ಹಾಗೂ ಮಾಜಿ ಕಾರ್ಯದರ್ಶಿ ಎಚ್‌. ವಿಶಾಲಾಕ್ಷಿ ಅವರು ಮಾತನಾಡಿ, ಹದಿಹರೆಯದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವುದರ ಜತೆಗೆ ಪೌಷ್ಟಿಕ ಆಹಾರ ಸೇವಿಸಬೇಕು. ಈ ಸಂದರ್ಭದಲ್ಲಿ ಹೆಣ್ಣು ಮಕ್ಕಳಲ್ಲಿ ಸಹಜವಾಗಿ ದೈಹಿಕ ಬದಲಾವಣೆ ಆಗಲಿದ್ದು, ಅವುಗಳನ್ನು ಪೋಷಕರು ಯಾವುದೇ ಮುಜುಗರವಿಲ್ಲದೆ ಮಕ್ಕಳಿಗೆ ಮನವರಿಕೆ ಮಾಡಬೇಕು ಎಂದರು.

ಈ ಸಂದರ್ಭ ಕ್ಲಬ್‌ ಅಧ್ಯಕ್ಷ ಎನ್‌. ರಮೇಶ್‌ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಗುರುರಾಜ, ಎಫ್‌ಪಿಎಐನ ಸಂತೂಬಾಯಿ, ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಭೂಮಿಕಾ ಪ್ರಾರ್ಥಿಸಿ, ಸದಾಶಿವ ಸ್ವಾಗತಿಸಿದರು. ವೇದಾವತಿ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ