ಆ್ಯಪ್ನಗರ

ಶಿವಮೊಗ್ಗ: ಪರಿಷತ್‌ ಚುನಾವಣೆಗೆ ಸಿದ್ಧವಾಗುತ್ತಿದೆ ಅಖಾಡ

. ಬಹಳಷ್ಟು ಕ್ಷೇತ್ರಗಳಲ್ಲಿವೀರಶೈವ-ಲಿಂಗಾಯಿತರಿಗೆ ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗದ ಆರ್ಯವೈಶ್ಯ ಸಮಾಜದವರಿಗೆ ಅವಕಾಶ ನೀಡಬೇಕೆನ್ನುವ ಕೂಗು ಕೇಳಿಬರುತ್ತಿದೆ.

Vijaya Karnataka 10 Nov 2021, 7:56 pm
ಶಿವಮೊಗ್ಗ: ವಿಧಾನ ಪರಿಷತ್‌ನಲ್ಲಿ ಬಹುಮತ ಸಾಧಿಸುವ ಸಲುವಾಗಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್‌ ಮತ್ತು ಬಿಜೆಪಿಯು ಶಿವಮೊಗ್ಗ ಕ್ಷೇತ್ರವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಹೆಜ್ಜೆ ಇಟ್ಟಿವೆ.
Vijaya Karnataka Web ಮತಯಂತ್ರ
ಮತಯಂತ್ರ


ಹಿಂದಿನ ಚುನಾವಣೆಯಲ್ಲಿ ಹಾಲಿ ಸದಸ್ಯರಾಗಿದ್ದ ಬಿಜೆಪಿಯ ಆರ್‌.ಕೆ. ಸಿದ್ದರಾಮಣ್ಣ ಅವರನ್ನು ಮೂರನೇ ಸ್ಥಾನಕ್ಕೆ ಕುಸಿಯುವಂತೆ ಮಾಡಿ ದ್ವಿತೀಯ ಪ್ರಾಶಸ್ತ್ಯದ ಮತದಲ್ಲಿ ವಿಜಯ ಸಾಧಿಸಿದ ಆರ್‌. ಪ್ರಸನ್ನಕುಮಾರ್‌ ಮತ್ತೊಮ್ಮೆ ಕಾಂಗ್ರೆಸ್‌ ಅಭ್ಯರ್ಥಿಯಾಗುವುದು ಖಚಿತವಾಗಿದೆ. ವೈ.ಎಚ್‌. ನಾಗರಾಜ್‌ ಅವರು ಅಭ್ಯರ್ಥಿತನಕ್ಕಾಗಿ ಅರ್ಜಿ ಸಲ್ಲಿಸಿದ್ದರೂ ಹಾಲಿ ಸದಸ್ಯರಿಗೆ ಅವಕಾಶ ಮಾಡಿಕೊಡುವ ಸಾಧ್ಯತೆ ಹೆಚ್ಚಿದೆ ಎಂದು ಶಿವಮೊಗ್ಗ ಜಿಲ್ಲಾಧ್ಯಕ್ಷ ಸುಂದರೇಶ್‌ ತಿಳಿಸಿದ್ದಾರೆ.

ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷರಾಗಲು ಪೈಪೋಟಿ..! ಶಿಮುಲ್‌ ಗಾದಿ ಮೇಲೆ ಹಲವರ ಕಣ್ಣು..!

ಬಿಜೆಪಿಯಿಂದ ಮಾಜಿ ಎಂಎಲ್‌ಸಿ ಆರ್‌.ಕೆ.ಸಿದ್ದರಾಮಣ್ಣ, ಭದ್ರಾ ಕಾಡಾ ಮಾಜಿ ಅಧ್ಯಕ್ಷ ಗಿರೀಶ್‌ ಪಟೇಲ್‌ ಮತ್ತು ರಾಜ್ಯ ಆರ್ಯವೈಶ್ಯ ಸಮಾಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್‌.ಅರುಣ್‌ ಅವರು ಅಭ್ಯರ್ಥಿ ಆಕಾಂಕ್ಷಿಗಳಾಗಿದ್ದಾರೆ. ಆರ್‌.ಕೆ.ಸಿದ್ದರಾಮಣ್ಣ ಅವರಿಗೆ ಎರಡು ಬಾರಿ ಅವಕಾಶ ನೀಡಲಾಗಿದೆ. ಬಹಳಷ್ಟು ಕ್ಷೇತ್ರಗಳಲ್ಲಿವೀರಶೈವ-ಲಿಂಗಾಯಿತರಿಗೆ ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗದ ಆರ್ಯವೈಶ್ಯ ಸಮಾಜದವರಿಗೆ ಅವಕಾಶ ನೀಡಬೇಕೆನ್ನುವ ಉದ್ದೇಶದಿಂದ ಗಿರೀಶ್‌ ಪಟೇಲ್‌ ಬದಲಿಗೆ ಅರುಣ್‌ ಅವರನ್ನು ಅಭ್ಯರ್ಥಿಯನ್ನಾಗಿ ಮಾಡುವ ಸಾಧ್ಯತೆ ಹೆಚ್ಚಿದೆ. ಪಕ್ಷದ ರಾಜ್ಯ ಘಟಕವು ಅರುಣ್‌ ಅವರ ಹೆಸರನ್ನು ಅಂತಿಮಗೊಳಿಸಿದೆ ಎಂದು ಖಚಿತ ಮೂಲಗಳಿಂದ ತಿಳಿದುಬಂದಿದೆ.

ಶಿವಮೊಗ್ಗದಲ್ಲಿ ಪುನೀತ್ ರಾಜಕುಮಾರ್ ಅಭಿಮಾನಿಗಳಿಂದ ಪುಣ್ಯತಿಥಿ ಆಯೋಜನೆ!

ಹಿಂದಿನ ಚುನಾವಣೆಯಲ್ಲಿಆಶ್ಚರ್ಯಕರ ರೀತಿಯಲ್ಲಿ ದ್ವಿತೀಯ ಸ್ಥಾನಕ್ಕೇರಿ ಕೇವಲ 700 ಮತಗಳಿಂದ ಜೆಡಿಎಸ್‌ ಅಭ್ಯರ್ಥಿ ನಿರಂಜನ್‌ ಸೋಲು ಅನುಭವಿಸಿದ್ದರು. ಈ ಬಾರಿ ಸಹ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಜೆಡಿಎಸ್‌ ನಿರ್ಧರಿಸಿದೆ. ಈ ಸಂಬಂಧವಾಗಿ ನ.13 ರಂದು ಪಕ್ಷದ ಸಭೆಯನ್ನು ಕರೆಯಲಾಗಿದ್ದು ಅದೇ ದಿನ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುತ್ತದೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್‌ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ